AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ್ರಸ್ಥ ಯುವತಿ ಯಾವುದೇ ಹೇಳಿಕೆಯನ್ನು ಬದಲಿಸಿಲ್ಲ, ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧ: ವಕೀಲ ಸೂರ್ಯ ಮುಕುಂದರಾಜ್​

Advocate Surya Mukundaraj: ಸಿಡಿ ಯುವತಿ ಪರ ವಕೀಲರಾದ ಸೂರ್ಯ ಮುಕುಂದರಾಜ್​ ಮತ್ತು ಮಂಜುನಾಥ್​ ಅವರು ಇದೀಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ಥ ಯುವತಿ ಅಂತಹ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಪ್ರಕರಣದಲ್ಲಿ ಆಕೆ ಮ್ಯಾಜಿಸ್ಟ್ರೇಟ್​ ಎದುರು ಈ ಹಿಂದೆ ತಾನು ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದಾಳೆ ಎಂದು ಹೇಳಿದ್ದಾರೆ.

ಸಂತ್ರಸ್ಥ ಯುವತಿ ಯಾವುದೇ ಹೇಳಿಕೆಯನ್ನು ಬದಲಿಸಿಲ್ಲ, ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧ: ವಕೀಲ  ಸೂರ್ಯ ಮುಕುಂದರಾಜ್​
ಸಿಡಿ ಪ್ರಕರಣದಲ್ಲಿ ಸಂತ್ರಸ್ಥ ಯುವತಿ ಮ್ಯಾಜಿಸ್ಟ್ರೇಟ್​ ಎದುರು ಈ ಹಿಂದೆ ತಾನು ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದಾಳೆ- ವಕೀಲರಾದ ಮುಕುಂದರಾಜ್​ ಮತ್ತು ಜಗದೀಶ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 12, 2021 | 3:15 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕಿಂಗ್ ಪಿನ್​ಗಳಾದ ನರೇಶ್ ಗೌಡ ಮತ್ತು ಶ್ರವಣ್ ಅವರು ತನ್ನನ್ನು ಹನಿಟ್ರ್ಯಾಪ್​ ಆಗಿ ಬಳಸಿಕೊಂಡಿದ್ದಾರೆ ಎಂದು ಸಿಡಿ ಸಂತ್ರಸ್ಥೆಯು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಎದುರು ಇಂದು ಹಾಜರಾಗಿ ಸ್ಫೋಟಕ ಹೇಳಿದ್ದಳು ಎಂದು ವರದಿಯಾಗಿತ್ತು. ಆದರೆ ಸಿಡಿ ಯುವತಿ ವಕೀಲರಾದ ಸೂರ್ಯ ಮುಕುಂದರಾಜ್, ಜಗದೀಶ್​ ಮತ್ತು ಮಂಜುನಾಥ್​ ಅವರು ಇದೀಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ಥ ಯುವತಿ ಅಂತಹ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಪ್ರಕರಣದಲ್ಲಿ ಆಕೆ ಮ್ಯಾಜಿಸ್ಟ್ರೇಟ್​ ಎದುರು ಈ ಹಿಂದೆ ತಾನು ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದಾಳೆ ಎಂದು ಹೇಳಿದ್ದಾರೆ.

ಇನ್ನು ಕೆಲವೇ ಹೊತ್ತಿನಲ್ಲಿ ಯುವತಿ ಕಡೆಯಿಂದ ಸ್ಪಷ್ಟನೆ ಸಿಗುತ್ತದಾ?

ಸಂತ್ರಸ್ಥ ಯುವತಿ ಇಂದು ಎಸ್​ಐಟಿ ಎದುರು ಹಾಜರಾಗಿ ವಾಟ್ಸಪ್ ಚಾಟಿಂಗ್ ಮಾಹಿತಿ ನೀಡಬೇಕಿತ್ತು. ಹೀಗಾಗಿ ಆಡುಗೋಡಿ ಎಸ್​ಐಟಿ ಕಚೇರಿಗೆ ತೆರಳಿದ್ದಳು. ಆ ಸಂದರ್ಭದಲ್ಲಿ ಯಾವುದೇ ರೀತಿಯ ವ್ಯತಿರಿಕ್ತ ಹೇಳಿಕೆಯನ್ನು ನೀಡಿಲ್ಲ. ಉಲ್ಟಾ ಹೊಡೆದಿಲ್ಲಾ. ಖುದ್ದಾಗಿ ಆಕೆಯನ್ನು ಮಾತನಾಡಿಸಿಕೊಂಡು ಬಂದಿರುವುದಾಗಿ ಸಿಡಿ ಲೇಡಿ ಪರ ವಕೀಲರು ಮಾಹಿತಿ ನೀಡಿದ್ದಾರೆ.

ಇದೆಲ್ಲ ಹೈಡ್ರಾಮ. ಸಂತ್ರಸ್ಥ ಯುವತಿ ಉಲ್ಟಾ ಹೇಳಿಕೆ ನೀಡಿಲ್ಲ.ಅದೆಲ್ಲಾ ಊಹಾಪೋಹ. ಎಸ್​ಐಟಿ ಅಧಿಕಾರಿಗಳೇ ಇಂತಹ ಮಾಹಿತಿಯನ್ನು ಸೋರಿಕೆ ಮಾಡಿರಬಹುದು ಎಂದು ಯುವತಿ ಪರ ವಕೀಲರು ಹೇಳಿದ್ದು, ಕೆಲವೇ ಹೊತ್ತಿನಲ್ಲಿ ಯುವತಿಯ ಕಡೆಯಿಂದ ಈ ಬಗ್ಗೆ ಖಚಿತ ಮಾಹಿತಿ ಒದಗಿಸಲಾಗುವುದು. ಜನಕ್ಕೆ ಸ್ಪಷ್ಟ ಚಿತ್ರಣ ನೀಡಲಾಗುವುದು. ಇಂತಹ ಸುದ್ದಿಗಳಿಗೆ ಮಹತ್ವ ಕೊಡಬೇಕಾದ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿಯೂ ಆದ ವಕೀಲ ಸೂರ್ಯ ಮುಕುಂದರಾಜ್ ತಿಳಿಸಿದ್ದಾರೆ.

ಕುತೂಹಲದ ಸಂಗತಿಯೆಂದರೆ ಈ ಮಧ್ಯೆ, ಎಸ್​ಐಟಿ ತನಿಖಾಧಿಕಾರಿಗಳು ಯುವತಿಯ ಇಚ್ಛೆಯಂತೆ ಆಕೆಯ ಬದಲಾದ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್​ ಎದುರು ದಾಖಲಿಸಲು ನ್ಯಾಯಾಧೀಶರ ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದಬಂದಿದೆ. ಅದರಂತೆ ಜಡ್ಜ್​ ಸಮಯ ನೋಡಿಕೊಂಡು ಯುವತಿಯನ್ನು ಹಾಜರುಪಡಿಸಿ, ಹೇಳಿಕೆ ದಾಖಲಿಸುವ ಪ್ರಯತ್ನ ನಡೆದಿದೆ.

ಇದನ್ನು ಓದಿ: ಕಿಂಗ್ ಪಿನ್ಸ್ ನರೇಶ್, ಶ್ರವಣ್ ವಿರುದ್ಧ ಸಿಡಿ ಲೇಡಿ ಸ್ಫೋಟಕ ಹೇಳಿಕೆ; ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬ್ಲಾಸ್ಟಿಂಗ್ ಟ್ವಿಸ್ಟ್

Published On - 2:31 pm, Mon, 12 April 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ