AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ್ರಸ್ಥ ಯುವತಿ ಯಾವುದೇ ಹೇಳಿಕೆಯನ್ನು ಬದಲಿಸಿಲ್ಲ, ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧ: ವಕೀಲ ಸೂರ್ಯ ಮುಕುಂದರಾಜ್​

Advocate Surya Mukundaraj: ಸಿಡಿ ಯುವತಿ ಪರ ವಕೀಲರಾದ ಸೂರ್ಯ ಮುಕುಂದರಾಜ್​ ಮತ್ತು ಮಂಜುನಾಥ್​ ಅವರು ಇದೀಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ಥ ಯುವತಿ ಅಂತಹ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಪ್ರಕರಣದಲ್ಲಿ ಆಕೆ ಮ್ಯಾಜಿಸ್ಟ್ರೇಟ್​ ಎದುರು ಈ ಹಿಂದೆ ತಾನು ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದಾಳೆ ಎಂದು ಹೇಳಿದ್ದಾರೆ.

ಸಂತ್ರಸ್ಥ ಯುವತಿ ಯಾವುದೇ ಹೇಳಿಕೆಯನ್ನು ಬದಲಿಸಿಲ್ಲ, ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧ: ವಕೀಲ  ಸೂರ್ಯ ಮುಕುಂದರಾಜ್​
ಸಿಡಿ ಪ್ರಕರಣದಲ್ಲಿ ಸಂತ್ರಸ್ಥ ಯುವತಿ ಮ್ಯಾಜಿಸ್ಟ್ರೇಟ್​ ಎದುರು ಈ ಹಿಂದೆ ತಾನು ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದಾಳೆ- ವಕೀಲರಾದ ಮುಕುಂದರಾಜ್​ ಮತ್ತು ಜಗದೀಶ್
ಸಾಧು ಶ್ರೀನಾಥ್​
|

Updated on:Apr 12, 2021 | 3:15 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕಿಂಗ್ ಪಿನ್​ಗಳಾದ ನರೇಶ್ ಗೌಡ ಮತ್ತು ಶ್ರವಣ್ ಅವರು ತನ್ನನ್ನು ಹನಿಟ್ರ್ಯಾಪ್​ ಆಗಿ ಬಳಸಿಕೊಂಡಿದ್ದಾರೆ ಎಂದು ಸಿಡಿ ಸಂತ್ರಸ್ಥೆಯು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಎದುರು ಇಂದು ಹಾಜರಾಗಿ ಸ್ಫೋಟಕ ಹೇಳಿದ್ದಳು ಎಂದು ವರದಿಯಾಗಿತ್ತು. ಆದರೆ ಸಿಡಿ ಯುವತಿ ವಕೀಲರಾದ ಸೂರ್ಯ ಮುಕುಂದರಾಜ್, ಜಗದೀಶ್​ ಮತ್ತು ಮಂಜುನಾಥ್​ ಅವರು ಇದೀಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಸಂತ್ರಸ್ಥ ಯುವತಿ ಅಂತಹ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಪ್ರಕರಣದಲ್ಲಿ ಆಕೆ ಮ್ಯಾಜಿಸ್ಟ್ರೇಟ್​ ಎದುರು ಈ ಹಿಂದೆ ತಾನು ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದಾಳೆ ಎಂದು ಹೇಳಿದ್ದಾರೆ.

ಇನ್ನು ಕೆಲವೇ ಹೊತ್ತಿನಲ್ಲಿ ಯುವತಿ ಕಡೆಯಿಂದ ಸ್ಪಷ್ಟನೆ ಸಿಗುತ್ತದಾ?

ಸಂತ್ರಸ್ಥ ಯುವತಿ ಇಂದು ಎಸ್​ಐಟಿ ಎದುರು ಹಾಜರಾಗಿ ವಾಟ್ಸಪ್ ಚಾಟಿಂಗ್ ಮಾಹಿತಿ ನೀಡಬೇಕಿತ್ತು. ಹೀಗಾಗಿ ಆಡುಗೋಡಿ ಎಸ್​ಐಟಿ ಕಚೇರಿಗೆ ತೆರಳಿದ್ದಳು. ಆ ಸಂದರ್ಭದಲ್ಲಿ ಯಾವುದೇ ರೀತಿಯ ವ್ಯತಿರಿಕ್ತ ಹೇಳಿಕೆಯನ್ನು ನೀಡಿಲ್ಲ. ಉಲ್ಟಾ ಹೊಡೆದಿಲ್ಲಾ. ಖುದ್ದಾಗಿ ಆಕೆಯನ್ನು ಮಾತನಾಡಿಸಿಕೊಂಡು ಬಂದಿರುವುದಾಗಿ ಸಿಡಿ ಲೇಡಿ ಪರ ವಕೀಲರು ಮಾಹಿತಿ ನೀಡಿದ್ದಾರೆ.

ಇದೆಲ್ಲ ಹೈಡ್ರಾಮ. ಸಂತ್ರಸ್ಥ ಯುವತಿ ಉಲ್ಟಾ ಹೇಳಿಕೆ ನೀಡಿಲ್ಲ.ಅದೆಲ್ಲಾ ಊಹಾಪೋಹ. ಎಸ್​ಐಟಿ ಅಧಿಕಾರಿಗಳೇ ಇಂತಹ ಮಾಹಿತಿಯನ್ನು ಸೋರಿಕೆ ಮಾಡಿರಬಹುದು ಎಂದು ಯುವತಿ ಪರ ವಕೀಲರು ಹೇಳಿದ್ದು, ಕೆಲವೇ ಹೊತ್ತಿನಲ್ಲಿ ಯುವತಿಯ ಕಡೆಯಿಂದ ಈ ಬಗ್ಗೆ ಖಚಿತ ಮಾಹಿತಿ ಒದಗಿಸಲಾಗುವುದು. ಜನಕ್ಕೆ ಸ್ಪಷ್ಟ ಚಿತ್ರಣ ನೀಡಲಾಗುವುದು. ಇಂತಹ ಸುದ್ದಿಗಳಿಗೆ ಮಹತ್ವ ಕೊಡಬೇಕಾದ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿಯೂ ಆದ ವಕೀಲ ಸೂರ್ಯ ಮುಕುಂದರಾಜ್ ತಿಳಿಸಿದ್ದಾರೆ.

ಕುತೂಹಲದ ಸಂಗತಿಯೆಂದರೆ ಈ ಮಧ್ಯೆ, ಎಸ್​ಐಟಿ ತನಿಖಾಧಿಕಾರಿಗಳು ಯುವತಿಯ ಇಚ್ಛೆಯಂತೆ ಆಕೆಯ ಬದಲಾದ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್​ ಎದುರು ದಾಖಲಿಸಲು ನ್ಯಾಯಾಧೀಶರ ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದಬಂದಿದೆ. ಅದರಂತೆ ಜಡ್ಜ್​ ಸಮಯ ನೋಡಿಕೊಂಡು ಯುವತಿಯನ್ನು ಹಾಜರುಪಡಿಸಿ, ಹೇಳಿಕೆ ದಾಖಲಿಸುವ ಪ್ರಯತ್ನ ನಡೆದಿದೆ.

ಇದನ್ನು ಓದಿ: ಕಿಂಗ್ ಪಿನ್ಸ್ ನರೇಶ್, ಶ್ರವಣ್ ವಿರುದ್ಧ ಸಿಡಿ ಲೇಡಿ ಸ್ಫೋಟಕ ಹೇಳಿಕೆ; ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬ್ಲಾಸ್ಟಿಂಗ್ ಟ್ವಿಸ್ಟ್

Published On - 2:31 pm, Mon, 12 April 21

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ