Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​ ಸನಿಹದಲ್ಲಿ ಸಿಡಿ ಯುವತಿ; ವಕೀಲ ಜಗದೀಶ್

ನ್ಯಾಯಾಲಯ ಯಾವಾಗ ಹೇಳುತ್ತೋ ಆವಾಗ ಯುವತಿಯನ್ನು ಕರೆದುಕೊಂಡು ಬರುತ್ತೇವೆ. ನ್ಯಾಯಾಲಯ ಕರೆತನ್ನಿ ಅಂದ್ರೆ ಕರೆದುಕೊಂಡು ಬರ್ತಿನಿ. ಸೆಕ್ಯೂರಿಟಿ ಸಿದ್ದತೆಯಾದ ತಕ್ಷಣ ಅನುಮತಿ ಕೊಡಬಹುದು. ಯುವತಿ ಇರೋ ಜಾಗದಲ್ಲಿ ಈಗಾಗಲೇ ಭದ್ರತೆ ಒದಗಿಸಲಾಗಿದೆ: ವಕೀಲ ಜಗದೀಶ್

ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​ ಸನಿಹದಲ್ಲಿ ಸಿಡಿ ಯುವತಿ; ವಕೀಲ ಜಗದೀಶ್
ವಕೀಲ ಕೆ.ಎನ್.ಜಗದೀಶ್ ಕುಮಾರ್
Follow us
guruganesh bhat
|

Updated on:Mar 30, 2021 | 2:18 PM

ಬೆಂಗಳೂರು: ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್​ ಸನಿಹದಲ್ಲಿಯೇ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಇದ್ದಾರೆ. ವಕೀಲರ ಜೊತೆಗೆ ಯುವತಿ ನ್ಯಾಯಾಲಯ ತಲುಪಲಿದ್ದಾರೆ ಎಂದು ಯುವತಿಪರ ವಕೀಲ ಕೆ.ಎನ್.ಜಗದೀಶ್ ಹೇಳಿದರು. ಈ ಮೊದಲು ಟಿವಿ9 ಪ್ರತಿನಿಧಿಯೊಂದಿಗೆ ಮಾತನಾಡಿದ್ದ ಅವರು,​ ಅರ್ಧ ಗಂಟೆ ಅಥವಾ ಒಂದು ಗಂಟೆ, ಇಲ್ಲವೇ ಎರಡು ಗಂಟೆಗಳಲ್ಲಿ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ ಎಂದು ಹೇಳಿದ್ದರು. ಈ ಮೊದಲು ಸಿಆರ್‌ಪಿಸಿ 164 ಪ್ರಕಾರ ಕೋರ್ಟ್​ನಲ್ಲಿ ಹೇಳಿಕೆ ದಾಖಲು ಮಾಡುತ್ತೇವೆ ಎಂದು ನ್ಯಾಯಾಧೀಶರು ಆದೇಶಿಸಿದ ಬೆನ್ನಲ್ಲೇ ವಕೀಲ ಜಗದೀಶ್ ಈ ಹೇಳಿಕೆ ನೀಡಿದ್ದಾರೆ.

ಡಿಸಿಪಿ ಇಶಾಪಂಥ್ ಭದ್ರತೆಯಲ್ಲಿ ಯುವತಿ ಕೋರ್ಟ್​ಗೆ ಹಾಜರಾಗಲಿದ್ದಾಳೆ.ಪೊಲೀಸ್ ಸಿಬ್ಬಂದಿ ಕಣ್ಗಾವಲಿನಲ್ಲಿ ಸಂತ್ರಸ್ತ ಯುವತಿಯನ್ನು ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ ಎಂಬ ಮಾಹಿತಿ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ನ್ಯಾಯಾಲಯ ಯಾವಾಗ ಹೇಳುತ್ತೋ ಆವಾಗ ಯುವತಿಯನ್ನು ಕರೆದುಕೊಂಡು ಬರುತ್ತೇವೆ. ನ್ಯಾಯಾಲಯ ಕರೆತನ್ನಿ ಅಂದ್ರೆ ಕರೆದುಕೊಂಡು ಬರ್ತಿನಿ. ಸೆಕ್ಯೂರಿಟಿ ಸಿದ್ದತೆಯಾದ ತಕ್ಷಣ ಅನುಮತಿ ಕೊಡಬಹುದು. ಯುವತಿ ಇರೋ ಜಾಗದಲ್ಲಿ ಈಗಾಗಲೇ ಭದ್ರತೆ ಒದಗಿಸಲಾಗಿದೆ. ನ್ಯಾಯಾಲಯ ಅನುಮತಿ ಕೊಟ್ಟ ತಕ್ಷಣ ಕರೆದುಕೊಂಡು ಬರ್ತೀನಿ. ಕಳೆದ 28 ದಿನಗಳಿಂದ ಆಕೆ ಒತ್ತಡದಲ್ಲಿದ್ದರು. ಅವರ ಆರೋಗ್ಯ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ..

ಸಂತ್ರಸ್ತೆ ಕೋರ್ಟ್​ನಿಂದ ನಾಲ್ಕು ಕಿಮೀ ದೂರದಲ್ಲಿದ್ದಾಳೆ. ಐದು ಕಾರಿನಲ್ಲಿ ಯುವತಿಯ ಜತೆ ವಕೀಲರ ತಂಡ ಆಗಮಿಸುತ್ತಿದೆ ಎಂಬ ಮಾಹಿತಿಗಳೂ ದೊರೆತಿವೆ. ಈ ಪ್ರಕರಣದಲ್ಲಿ ಆರೋಪಿ ಎನಿಸಿರುವ ವ್ಯಕ್ತಿ ಎಸ್​ಐಟಿ ತನಿಖಾ ತಂಡಕ್ಕೆ ಉತ್ತರ ಕೊಟ್ಟಿಲ್ಲ. ಇನ್ನು ನಾಲ್ಕು ದಿನಗಳ ಕಾಲ ಕಾಲವಕಾಶ ಕೇಳಿದ್ದಾರೆ. ಪ್ರಕರಣದಲ್ಲಿ ಸಂತ್ರಸ್ತೆಯನ್ನು ಬಿಟ್ಟರೆ ಬೇರೆ ಯಾರಿಗೂ ಪ್ರಧಾನವಾಗಿ ಅವಕಾಶವಿಲ್ಲ. ಆಕೆ ವಯಸ್ಕಳಾಗಿದ್ದು, ತಂದೆ ತಾಯಿ ಹೇಳಿಕೆ ಕೊಡೋದನ್ನು ನಿಲ್ಲಿಸಬೇಕು. ಮಗಳ ಯೋಗಕ್ಷೇಮ ವಿಚಾರಿಸಲಿ. ಆಕೆಯ ಹೇಳಿಕೆಯ ಪರವಾಗಿ ನಿಲ್ಲಲಿ ಎಂದು ವಕೀಲ ಜಗದೀಶ್ ಹೇಳಿದ್ದಾರೆ.

ಇದನ್ನೂ ಓದಿ: BJP Candidate Mangala Angadi Temple Run: ನಾಮಪತ್ರ ಸಲ್ಲಿಕೆಗೂ ಮುನ್ನ ಪುತ್ರಿಯರೊಂದಿಗೆ ಶಿವಾಜಿ-ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಂಗಳಾ ಅಂಗಡಿ

Published On - 1:20 pm, Tue, 30 March 21

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ