AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​ ಸನಿಹದಲ್ಲಿ ಸಿಡಿ ಯುವತಿ; ವಕೀಲ ಜಗದೀಶ್

ನ್ಯಾಯಾಲಯ ಯಾವಾಗ ಹೇಳುತ್ತೋ ಆವಾಗ ಯುವತಿಯನ್ನು ಕರೆದುಕೊಂಡು ಬರುತ್ತೇವೆ. ನ್ಯಾಯಾಲಯ ಕರೆತನ್ನಿ ಅಂದ್ರೆ ಕರೆದುಕೊಂಡು ಬರ್ತಿನಿ. ಸೆಕ್ಯೂರಿಟಿ ಸಿದ್ದತೆಯಾದ ತಕ್ಷಣ ಅನುಮತಿ ಕೊಡಬಹುದು. ಯುವತಿ ಇರೋ ಜಾಗದಲ್ಲಿ ಈಗಾಗಲೇ ಭದ್ರತೆ ಒದಗಿಸಲಾಗಿದೆ: ವಕೀಲ ಜಗದೀಶ್

ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​ ಸನಿಹದಲ್ಲಿ ಸಿಡಿ ಯುವತಿ; ವಕೀಲ ಜಗದೀಶ್
ವಕೀಲ ಕೆ.ಎನ್.ಜಗದೀಶ್ ಕುಮಾರ್
guruganesh bhat
|

Updated on:Mar 30, 2021 | 2:18 PM

Share

ಬೆಂಗಳೂರು: ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್​ ಸನಿಹದಲ್ಲಿಯೇ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಇದ್ದಾರೆ. ವಕೀಲರ ಜೊತೆಗೆ ಯುವತಿ ನ್ಯಾಯಾಲಯ ತಲುಪಲಿದ್ದಾರೆ ಎಂದು ಯುವತಿಪರ ವಕೀಲ ಕೆ.ಎನ್.ಜಗದೀಶ್ ಹೇಳಿದರು. ಈ ಮೊದಲು ಟಿವಿ9 ಪ್ರತಿನಿಧಿಯೊಂದಿಗೆ ಮಾತನಾಡಿದ್ದ ಅವರು,​ ಅರ್ಧ ಗಂಟೆ ಅಥವಾ ಒಂದು ಗಂಟೆ, ಇಲ್ಲವೇ ಎರಡು ಗಂಟೆಗಳಲ್ಲಿ ಯುವತಿಯನ್ನು ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ ಎಂದು ಹೇಳಿದ್ದರು. ಈ ಮೊದಲು ಸಿಆರ್‌ಪಿಸಿ 164 ಪ್ರಕಾರ ಕೋರ್ಟ್​ನಲ್ಲಿ ಹೇಳಿಕೆ ದಾಖಲು ಮಾಡುತ್ತೇವೆ ಎಂದು ನ್ಯಾಯಾಧೀಶರು ಆದೇಶಿಸಿದ ಬೆನ್ನಲ್ಲೇ ವಕೀಲ ಜಗದೀಶ್ ಈ ಹೇಳಿಕೆ ನೀಡಿದ್ದಾರೆ.

ಡಿಸಿಪಿ ಇಶಾಪಂಥ್ ಭದ್ರತೆಯಲ್ಲಿ ಯುವತಿ ಕೋರ್ಟ್​ಗೆ ಹಾಜರಾಗಲಿದ್ದಾಳೆ.ಪೊಲೀಸ್ ಸಿಬ್ಬಂದಿ ಕಣ್ಗಾವಲಿನಲ್ಲಿ ಸಂತ್ರಸ್ತ ಯುವತಿಯನ್ನು ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ ಎಂಬ ಮಾಹಿತಿ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ನ್ಯಾಯಾಲಯ ಯಾವಾಗ ಹೇಳುತ್ತೋ ಆವಾಗ ಯುವತಿಯನ್ನು ಕರೆದುಕೊಂಡು ಬರುತ್ತೇವೆ. ನ್ಯಾಯಾಲಯ ಕರೆತನ್ನಿ ಅಂದ್ರೆ ಕರೆದುಕೊಂಡು ಬರ್ತಿನಿ. ಸೆಕ್ಯೂರಿಟಿ ಸಿದ್ದತೆಯಾದ ತಕ್ಷಣ ಅನುಮತಿ ಕೊಡಬಹುದು. ಯುವತಿ ಇರೋ ಜಾಗದಲ್ಲಿ ಈಗಾಗಲೇ ಭದ್ರತೆ ಒದಗಿಸಲಾಗಿದೆ. ನ್ಯಾಯಾಲಯ ಅನುಮತಿ ಕೊಟ್ಟ ತಕ್ಷಣ ಕರೆದುಕೊಂಡು ಬರ್ತೀನಿ. ಕಳೆದ 28 ದಿನಗಳಿಂದ ಆಕೆ ಒತ್ತಡದಲ್ಲಿದ್ದರು. ಅವರ ಆರೋಗ್ಯ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ..

ಸಂತ್ರಸ್ತೆ ಕೋರ್ಟ್​ನಿಂದ ನಾಲ್ಕು ಕಿಮೀ ದೂರದಲ್ಲಿದ್ದಾಳೆ. ಐದು ಕಾರಿನಲ್ಲಿ ಯುವತಿಯ ಜತೆ ವಕೀಲರ ತಂಡ ಆಗಮಿಸುತ್ತಿದೆ ಎಂಬ ಮಾಹಿತಿಗಳೂ ದೊರೆತಿವೆ. ಈ ಪ್ರಕರಣದಲ್ಲಿ ಆರೋಪಿ ಎನಿಸಿರುವ ವ್ಯಕ್ತಿ ಎಸ್​ಐಟಿ ತನಿಖಾ ತಂಡಕ್ಕೆ ಉತ್ತರ ಕೊಟ್ಟಿಲ್ಲ. ಇನ್ನು ನಾಲ್ಕು ದಿನಗಳ ಕಾಲ ಕಾಲವಕಾಶ ಕೇಳಿದ್ದಾರೆ. ಪ್ರಕರಣದಲ್ಲಿ ಸಂತ್ರಸ್ತೆಯನ್ನು ಬಿಟ್ಟರೆ ಬೇರೆ ಯಾರಿಗೂ ಪ್ರಧಾನವಾಗಿ ಅವಕಾಶವಿಲ್ಲ. ಆಕೆ ವಯಸ್ಕಳಾಗಿದ್ದು, ತಂದೆ ತಾಯಿ ಹೇಳಿಕೆ ಕೊಡೋದನ್ನು ನಿಲ್ಲಿಸಬೇಕು. ಮಗಳ ಯೋಗಕ್ಷೇಮ ವಿಚಾರಿಸಲಿ. ಆಕೆಯ ಹೇಳಿಕೆಯ ಪರವಾಗಿ ನಿಲ್ಲಲಿ ಎಂದು ವಕೀಲ ಜಗದೀಶ್ ಹೇಳಿದ್ದಾರೆ.

ಇದನ್ನೂ ಓದಿ: BJP Candidate Mangala Angadi Temple Run: ನಾಮಪತ್ರ ಸಲ್ಲಿಕೆಗೂ ಮುನ್ನ ಪುತ್ರಿಯರೊಂದಿಗೆ ಶಿವಾಜಿ-ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಂಗಳಾ ಅಂಗಡಿ

Published On - 1:20 pm, Tue, 30 March 21

Follow Us
guruganesh bhat
guruganesh bhat
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ