AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ; ಈಗ ವಿಚಾರಣೆ ಬಳಿಕ ಸಂತ್ರಸ್ತೆ ವಾಸ್ತವ್ಯ ಎಲ್ಲಿ?

ಈ ಮೊದಲು ದೂರು ನೀಡಿದ್ದ ಆಧಾರದ ಮೇಲೆ ಸಿಡಿ ಲೇಡಿ ಈ ಬಾರಿ ಹೇಳಿಕೆ ನೀಡಿದ್ದಾರಂತೆ. ಯುವತಿ ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿಕೆ ನೀಡಿರುವ ಮಾಹಿತಿ ಸಿಕ್ಕಿದೆ.

ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ; ಈಗ ವಿಚಾರಣೆ ಬಳಿಕ ಸಂತ್ರಸ್ತೆ ವಾಸ್ತವ್ಯ ಎಲ್ಲಿ?
ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ
KUSHAL V
|

Updated on: Mar 30, 2021 | 8:17 PM

Share

ಬೆಂಗಳೂರು: ಈ ಮೊದಲು ದೂರು ನೀಡಿದ್ದ ಆಧಾರದ ಮೇಲೆ ಸಿಡಿ ಲೇಡಿ ಈ ಬಾರಿ ಹೇಳಿಕೆ ನೀಡಿದ್ದಾರಂತೆ. ಯುವತಿ ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿಕೆ ನೀಡಿರುವ ಮಾಹಿತಿ ಸಿಕ್ಕಿದೆ. ಅಂದ ಹಾಗೆ, ಸದ್ಯ, ಟೆಕ್ನಿಕಲ್ ವಿಂಗ್​ನಲ್ಲಿ CD ಲೇಡಿ ಹೇಳಿಕೆ ಮುಗಿಸಿ ವಾಪಸ್ ಆಗಿದ್ದಾರೆ. ಆಡುಗೋಡಿಯಲ್ಲಿರುವ ಟೆಕ್ನಿಕಲ್ ವಿಂಗ್​ನಲ್ಲಿ ಸಂತ್ರಸ್ತೆಯ ಆಡಿಯೋ, ವಿಡಿಯೋ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಧ್ವನಿ ಪರೀಕ್ಷೆ ನಡೆಸಲು ಎಸ್​​ಐಟಿ ಅಧಿಕಾರಿಗಳು ಸಿಡಿ ಲೇಡಿಯ ಆಡಿಯೋ ಪಡೆದಿರುವ ಮಾಹಿತಿ ಸಿಕ್ಕಿದೆ.

ಈ ಮಧ್ಯೆ, ಇಂದು ಸಿಡಿ ಲೇಡಿಯನ್ನ ಮೆಡಿಕಲ್ ಟೆಸ್ಟ್​ಗೆ ಒಳಪಡಿಸಲ್ಲ. ಹಾಗಾಗಿ, ಪೊಲೀಸರು ನಾಳೆ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯುವ ಸಾಧ್ಯತೆಯಿದೆ. ಇಂದು ಪ್ರಯಾಣ, ಜಡ್ಜ್ ಮುಂದೆ ಹೇಳಿಕೆ, SIT ವಿಚಾರಣೆ ಹಾಗೂ ಬೆಳಗ್ಗೆಯಿಂದ ನಡೆಸಿರುವ ಓಡಾಟದಿಂದ ಆಯಾಸವಾಗಿರುವ ಹಿನ್ನೆಲೆಯಲ್ಲಿ ಯುವತಿ ನಾಳೆ ಬೆಳಗ್ಗೆ ಮೆಡಿಕಲ್ ಟೆಸ್ಟ್​ಗೆ ಒಳಗಾಗಲಿರುವ ಮಾಹಿತಿ ಸಿಕ್ಕಿದೆ.

ಅತ್ತ, ಇಂದು ರಾತ್ರಿ ವಾಸ್ತವ್ಯ ಇರಲು ಯುವತಿ ನಿರ್ಧಾರಕ್ಕೆ ಬಿಟ್ಟದ್ದು. ಆರ್​.ಟಿ.ನಗರದ ಪಿಜಿಯಲ್ಲಿ ಇರುವ ಹಾಗಿದ್ದರೆ ಇರಬಹುದು. ಇಲ್ಲವಾದರೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಬಹುದು. ವೈಯಕ್ತಿಕವಾಗಿ ಎಲ್ಲೇ ಇರುವುದಾದರೂ ರಕ್ಷಣೆ ನೀಡುತ್ತೇವೆ. ನಿಮಗೆ ಯಾವುದೇ ತೊಂದರೆ ಆಗದಂತೆ ರಕ್ಷಣೆ ನೀಡುತ್ತೇವೆ ಎಂದು ಸಿಡಿ ಲೇಡಿಗೆ ಎಸ್​ಐಟಿ ಅಧಿಕಾರಿಗಳು ಭರವಸೆ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ‘ನನ್ನನ್ನು ಯಾರೂ ಕಿಡ್ನ್ಯಾಪ್​ ಮಾಡಿರಲಿಲ್ಲ; ನನ್ನ ತಂದೆ, ತಾಯಿ, ಸೋದರ ರಮೇಶ್ ಜಾರಕಿಹೊಳಿ ಹಿಡಿತದಲ್ಲಿದ್ದಾರೆ’

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ