AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ; ಈಗ ವಿಚಾರಣೆ ಬಳಿಕ ಸಂತ್ರಸ್ತೆ ವಾಸ್ತವ್ಯ ಎಲ್ಲಿ?

ಈ ಮೊದಲು ದೂರು ನೀಡಿದ್ದ ಆಧಾರದ ಮೇಲೆ ಸಿಡಿ ಲೇಡಿ ಈ ಬಾರಿ ಹೇಳಿಕೆ ನೀಡಿದ್ದಾರಂತೆ. ಯುವತಿ ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿಕೆ ನೀಡಿರುವ ಮಾಹಿತಿ ಸಿಕ್ಕಿದೆ.

ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ; ಈಗ ವಿಚಾರಣೆ ಬಳಿಕ ಸಂತ್ರಸ್ತೆ ವಾಸ್ತವ್ಯ ಎಲ್ಲಿ?
ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿದ್ದಾರಂತೆ ಸಿಡಿ ಲೇಡಿ
KUSHAL V
|

Updated on: Mar 30, 2021 | 8:17 PM

Share

ಬೆಂಗಳೂರು: ಈ ಮೊದಲು ದೂರು ನೀಡಿದ್ದ ಆಧಾರದ ಮೇಲೆ ಸಿಡಿ ಲೇಡಿ ಈ ಬಾರಿ ಹೇಳಿಕೆ ನೀಡಿದ್ದಾರಂತೆ. ಯುವತಿ ಹಿಂದಿನ ದೂರನ್ನೇ ಯಥಾವತ್ತಾಗಿ ಹೇಳಿಕೆ ನೀಡಿರುವ ಮಾಹಿತಿ ಸಿಕ್ಕಿದೆ. ಅಂದ ಹಾಗೆ, ಸದ್ಯ, ಟೆಕ್ನಿಕಲ್ ವಿಂಗ್​ನಲ್ಲಿ CD ಲೇಡಿ ಹೇಳಿಕೆ ಮುಗಿಸಿ ವಾಪಸ್ ಆಗಿದ್ದಾರೆ. ಆಡುಗೋಡಿಯಲ್ಲಿರುವ ಟೆಕ್ನಿಕಲ್ ವಿಂಗ್​ನಲ್ಲಿ ಸಂತ್ರಸ್ತೆಯ ಆಡಿಯೋ, ವಿಡಿಯೋ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಧ್ವನಿ ಪರೀಕ್ಷೆ ನಡೆಸಲು ಎಸ್​​ಐಟಿ ಅಧಿಕಾರಿಗಳು ಸಿಡಿ ಲೇಡಿಯ ಆಡಿಯೋ ಪಡೆದಿರುವ ಮಾಹಿತಿ ಸಿಕ್ಕಿದೆ.

ಈ ಮಧ್ಯೆ, ಇಂದು ಸಿಡಿ ಲೇಡಿಯನ್ನ ಮೆಡಿಕಲ್ ಟೆಸ್ಟ್​ಗೆ ಒಳಪಡಿಸಲ್ಲ. ಹಾಗಾಗಿ, ಪೊಲೀಸರು ನಾಳೆ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯುವ ಸಾಧ್ಯತೆಯಿದೆ. ಇಂದು ಪ್ರಯಾಣ, ಜಡ್ಜ್ ಮುಂದೆ ಹೇಳಿಕೆ, SIT ವಿಚಾರಣೆ ಹಾಗೂ ಬೆಳಗ್ಗೆಯಿಂದ ನಡೆಸಿರುವ ಓಡಾಟದಿಂದ ಆಯಾಸವಾಗಿರುವ ಹಿನ್ನೆಲೆಯಲ್ಲಿ ಯುವತಿ ನಾಳೆ ಬೆಳಗ್ಗೆ ಮೆಡಿಕಲ್ ಟೆಸ್ಟ್​ಗೆ ಒಳಗಾಗಲಿರುವ ಮಾಹಿತಿ ಸಿಕ್ಕಿದೆ.

ಅತ್ತ, ಇಂದು ರಾತ್ರಿ ವಾಸ್ತವ್ಯ ಇರಲು ಯುವತಿ ನಿರ್ಧಾರಕ್ಕೆ ಬಿಟ್ಟದ್ದು. ಆರ್​.ಟಿ.ನಗರದ ಪಿಜಿಯಲ್ಲಿ ಇರುವ ಹಾಗಿದ್ದರೆ ಇರಬಹುದು. ಇಲ್ಲವಾದರೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಬಹುದು. ವೈಯಕ್ತಿಕವಾಗಿ ಎಲ್ಲೇ ಇರುವುದಾದರೂ ರಕ್ಷಣೆ ನೀಡುತ್ತೇವೆ. ನಿಮಗೆ ಯಾವುದೇ ತೊಂದರೆ ಆಗದಂತೆ ರಕ್ಷಣೆ ನೀಡುತ್ತೇವೆ ಎಂದು ಸಿಡಿ ಲೇಡಿಗೆ ಎಸ್​ಐಟಿ ಅಧಿಕಾರಿಗಳು ಭರವಸೆ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ‘ನನ್ನನ್ನು ಯಾರೂ ಕಿಡ್ನ್ಯಾಪ್​ ಮಾಡಿರಲಿಲ್ಲ; ನನ್ನ ತಂದೆ, ತಾಯಿ, ಸೋದರ ರಮೇಶ್ ಜಾರಕಿಹೊಳಿ ಹಿಡಿತದಲ್ಲಿದ್ದಾರೆ’

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ