AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ ನಂತರ, ಪೊಲೀಸರಿಗೂ ಹೇಳಿಕೆ ನೀಡಲು ಸಂತ್ರಸ್ತೆಯನ್ನು ಆಡುಗೋಡಿ​ಗೆ ನಾವೇ ಕರೆತಂದಿದ್ದೇವೆ -ವಕೀಲ ಜಗದೀಶ್​

ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿ CD ಲೇಡಿ ವಿಚಾರಣೆ ನಡೆಯುತ್ತಿದೆ. ಆಡುಗೋಡಿಯಲ್ಲಿರುವ ಟೆಕ್ನಿಕಲ್ ವಿಂಗ್ ಕಚೇರಿಯಲ್ಲಿ ಎಸ್​ಐಟಿ ಅಧಿಕಾರಿಗಳ ತಂಡದಿಂದ CD ಲೇಡಿ ವಿಚಾರಣೆ ನಡೆಯುತ್ತಿದೆ. ಸದ್ಯ, ಆಡುಗೋಡಿ ಟೆಕ್ನಿಕಲ್ ಸೆಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಕೋರ್ಟ್​ ನಂತರ, ಪೊಲೀಸರಿಗೂ ಹೇಳಿಕೆ ನೀಡಲು ಸಂತ್ರಸ್ತೆಯನ್ನು ಆಡುಗೋಡಿ​ಗೆ ನಾವೇ ಕರೆತಂದಿದ್ದೇವೆ -ವಕೀಲ ಜಗದೀಶ್​
ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿ CD ಲೇಡಿ ವಿಚಾರಣೆ
KUSHAL V
|

Updated on: Mar 30, 2021 | 6:20 PM

Share

ಬೆಂಗಳೂರು: ತಾಜಾ ವರದಿಗಳ ಪ್ರಕಾರ ಆಡುಗೋಡಿಯ ಟೆಕ್ನಿಕಲ್ ವಿಂಗ್​ ಕಚೇರಿಯಲ್ಲಿ ಎಸ್​ಐಟಿ ಅಧಿಕಾರಿಗಳ ತಂಡದಿಂದ CD ಲೇಡಿ ವಿಚಾರಣೆ ನಡೆಯುತ್ತಿದೆ. ಸದ್ಯ, ಆಡುಗೋಡಿ ಟೆಕ್ನಿಕಲ್ ಸೆಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಜಡ್ಜ್ ಮುಂದೆ ಹೇಳಿಕೆ ನೀಡಿದ ಬಳಿಕ ಸಂತ್ರಸ್ತೆಯನ್ನು ಟೆಕ್ನಿಕಲ್ ವಿಂಗ್‌ಗೆ ಪೊಲೀಸ್​ ಭದ್ರತೆಯಲ್ಲಿ ಕರೆತರಲಾಯಿತು. ಅದಕ್ಕೂ ಮುನ್ನ, ಸಂತ್ರಸ್ತೆ ವಸಂತನಗರದ ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಜಡ್ಜ್ ಮುಂದೆ ಹೇಳಿಕೆ ನೀಡಿದ್ದರು. ಕುತೂಹಲಕಾರಿ ಸಂಗತಿಯೆಂದರೆ ಈವರೆಗೂ ಸಂತ್ರಸ್ತೆ ಕೋರ್ಟ್​ ಮುಂದೆ ಏನು ಹೇಳಿಕೆ ನೀಡಿದ್ದಾರೆ ಎಂಬುದು ಎಸ್​ಐಟಿಗೂ ಮಾಹಿತಿ ಇಲ್ಲ. ಇನ್ನು, ಟೆಕ್ನಿಕಲ್ ವಿಂಗ್​ನಲ್ಲಿ SIT ಮುಖ್ಯಸ್ಥ ಸೌಮೇಂದು ಮತ್ತು ಸಿಸಿಬಿ ಜಂಟಿ ಆಯುಕ್ತ ಸಂದೀಪ್​ ಪಾಟೀಲ್​ ಹಾಜರಿದ್ದಾರೆ.

ವಕೀಲ ಜಗದೀಶ್​ ಸ್ಪಷ್ಟನೆ ತನಿಖಾಧಿಕಾರಿ ಜಡ್ಜ್​ ಸಮ್ಮುಖದಲ್ಲಿ ಸೆಕ್ಷನ್ 161 ಅಡಿ ಸಂತ್ರಸ್ತೆಯ ಹೇಳಿಕೆ ಪಡೆಯುವುದಕ್ಕೆ ಮನವಿ ಮಾಡಿದರು. ಅದರಂತೆ, ನಾವು ಅಂದರೆ ಯುವತಿಯ ಪರ ವಕೀಲರು ಒಪ್ಪಿಗೆ ಸೂಚಿಸಿದೆವು. ಅದರಂತೆ, ನಾವೇ ಸ್ವತಃ ಆಕೆಯನ್ನು ಆಡುಗೋಡಿಯ ಟೆಕ್ನಿಕಲ್​ ಸೆಲ್​ಗೆ ಕರೆದುಕೊಂಡು ಬಂದಿದ್ದೇವೆ. ಆಕೆ ಹೇಳಿಕೆ ನೀಡುವುದು ಮುಗಿಯುತ್ತಿದ್ದಂತೆ ಮತ್ತೆ ನಾವೇ ಆಕೆಯನ್ನು ಕರೆದುಕೊಂಡು ಹೋಗುತ್ತೇವೆ ಎಂದು ವಕೀಲ ಜಗದೀಶ್​ ಮಾಧ್ಯಮಗಳಿಗೆ ಸ್ಪಷ್ಟ ಪಡಿಸಿದರು.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!