AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Jarkiholi: ನಾಳೆಯಿಂದ ನಮ್ಮ ಆಟ ಶುರು; ಸರ್ಕಾರವನ್ನೇ ತೆಗೆದಿದ್ದೇವೆ, ಇದ್ಯಾವ ಲೆಕ್ಕ? ರಮೇಶ್ ಜಾರಕಿಹೊಳಿ ಸವಾಲ್

Ramesh Jarkiholi Reaction: ಸಿಡಿ ಲೇಡಿ ನೀಡಿದ ಲಿಖಿತ ದೂರಿಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಅವರು ಪ್ರಕರಣದ ಕೊನೆಯ ಅಸ್ತ್ರವನ್ನು ಬಿಟ್ಟಿದ್ದಾರೆ. ನಾನು ಯಾವುದಕ್ಕೂ ಅಂಜುವ ವ್ಯಕ್ತಿಯಲ್ಲ. ನಾನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿರುವೆ. ಅಂತಹ ಸರ್ಕಾರವನ್ನೇ ತೆಗೆದಿದ್ದೇನೆ, ಇದ್ಯಾವ ಲೆಕ್ಕ ಎಂದು ಹೇಳಿದ್ದಾರೆ.

Ramesh Jarkiholi: ನಾಳೆಯಿಂದ ನಮ್ಮ ಆಟ ಶುರು; ಸರ್ಕಾರವನ್ನೇ ತೆಗೆದಿದ್ದೇವೆ, ಇದ್ಯಾವ ಲೆಕ್ಕ? ರಮೇಶ್ ಜಾರಕಿಹೊಳಿ ಸವಾಲ್
‘ಆ ಪ್ರಭಾವಿ ವ್ಯಕ್ತಿ’ಗೆ ಬುದ್ಧಿ ಕಲಿಸಬೇಕು ಅಣ್ಣ ಎಂದು ಸಂತ್ರಸ್ತ ಯುವತಿ ನನ್ನ ಬಳಿ ಬಂದಿದ್ದಳು: ಎಸ್​ಐಟಿ ಎದುರು ಹೇಳಿಕೆ ಕೊಟ್ಟ ನರೇಶ್
TV9 Web
| Edited By: |

Updated on:Apr 05, 2022 | 1:13 PM

Share

ಬೆಂಗಳೂರು: ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ. ಇನ್ನೂ 10 CDಗಳು ಬಂದರೂ ಎದುರಿಸಲು ಸಿದ್ಧರಿದ್ದೇವೆ. ಮಹಾನಾಯಕ ಯಾರೆಂದು ಗೊತ್ತಾಗಲಿದೆ ಎಂದು ಬೆಂಗಳೂರಿನಲ್ಲಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ, ವಕೀಲರ ಜೊತೆ 2 ಗಂಟೆಗಳ ಕಾಲ ಚರ್ಚಿಸಿ, ಸಹೋದರ ಬಾಲಚಂದ್ರ ಜಾರಕಿಹೊಳಿಯೊಂದಿಗೆ ಮಾತುಕತೆ ನಡೆಸಿದ್ದಾರೆ. ಬಳಿಕ ಇದೀಗ ಹೀಗೆ ಹೇಳಿಕೆ ಸವಾಲ್ ಹಾಕಿದ್ದಾರೆ.

ಸಿಡಿ ಲೇಡಿ ನೀಡಿದ ಲಿಖಿತ ದೂರಿಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಅವರು ಪ್ರಕರಣದ ಕೊನೆಯ ಅಸ್ತ್ರವನ್ನು ಬಿಟ್ಟಿದ್ದಾರೆ. ನಾನು ಯಾವುದಕ್ಕೂ ಅಂಜುವ ವ್ಯಕ್ತಿಯಲ್ಲ. ನಾನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿರುವೆ. ಅಂತಹ ಸರ್ಕಾರವನ್ನೇ ತೆಗೆದಿದ್ದೇನೆ, ಇದ್ಯಾವ ಲೆಕ್ಕ ಎಂದು ಹೇಳಿದ್ದಾರೆ.

ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಪ್ರಕರಣ ಸಂಬಂಧ ನಾನು ಮೊದಲು ದೂರು ನೀಡಿದ್ದೇನೆ. ನನ್ನ ದೂರಿನ ಬಗ್ಗೆ ಏನಾಗಿದೆ ಎಂದು ಕೇಳುತ್ತೇನೆ. ಪೊಲೀಸ್ ಆಯುಕ್ತ ಕಮಲ್ ಪಂತ್‌ರನ್ನು ಕೇಳುತ್ತೇನೆ. ಮೊದಲು ನನ್ನ ಎಫ್‌ಐಆರ್ ಬಗ್ಗೆ ತನಿಖೆಯಾಗಬೇಕು. ನನ್ನ ವಿರುದ್ಧದ ಷಡ್ಯಂತ್ರದ ಬಗ್ಗೆ ಗೃಹ ಸಚಿವರಿಗೆ ಹೇಳಿದ್ದೇನೆ ಎಂದೂ ಬೆಂಗಳೂರಿನಲ್ಲಿ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇದನ್ನೂ ಓದಿ: 2 ಗಂಟೆ ಕಾಲ ವಕೀಲರ ಜೊತೆ ಚರ್ಚಿಸಿ, ಸಹೋದರ ಬಾಲಚಂದ್ರ ಜೊತೆ ಅಜ್ಞಾತ ಸ್ಥಳಕ್ಕೆ ತೆರಳಿದ ರಮೇಶ್ ಜಾರಕಿಹೊಳಿ

ಯುವತಿ ಕೈ ಬರಹದಲ್ಲಿ.. ನನ್ನನ್ನು ಕೊಲೆ ಮಾಡುವುದಕ್ಕೆ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ದೂರು 

Published On - 3:20 pm, Fri, 26 March 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ