AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿಗೆ ಗಾಂ.. ಪದವನ್ನು ಬಳಸಬಾರದಿತ್ತು; ನನ್ನ ಮಾತನ್ನು ವಾಪಸ್ ಪಡೆದುಕೊಳ್ತೇನೆ -ರಮೇಶ್​ ವಿಷಾದ

ರಮೇಶ್ ತಮ್ಮ ಹೇಳಿಕೆ ವಿಚಾರವಾಗಿ ಅಸಭ್ಯ ಪದ ಬಳಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಂತಹ ಪದ ನಾನು ಬಳಸಬಾರದಿತ್ತು. ಬಳಸಿದ್ದಕ್ಕೆ ವಿಷಾದವಿದೆ. ನಾನು ನನ್ನ ಮಾತನ್ನು ವಾಪಸ್ ಪಡೆದುಕೊಳ್ಳುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ಡಿಕೆಶಿಗೆ ಗಾಂ.. ಪದವನ್ನು ಬಳಸಬಾರದಿತ್ತು; ನನ್ನ ಮಾತನ್ನು ವಾಪಸ್ ಪಡೆದುಕೊಳ್ತೇನೆ -ರಮೇಶ್​ ವಿಷಾದ
ಡಿ.ಕೆ.ಶಿವಕುಮಾರ್​ (ಎಡ); ರಮೇಶ್​ ಜಾರಕಿಹೊಳಿ (ಬಲ)
KUSHAL V
|

Updated on:Mar 27, 2021 | 8:04 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಿಕುಮಾರ್​ ಕುರಿತು ಅಸಭ್ಯ ಪದ ಬಳಿಸಿದ್ದಕ್ಕೆ ಇದೀಗ ರಮೇಶ್​ ಜಾರಕಿಹೊಳಿ‌ ವಿಷಾದ ವ್ಯಕ್ತಪಡಿಸಿದ್ದಾರೆ. ರಮೇಶ್ ತಮ್ಮ ಹೇಳಿಕೆ ವಿಚಾರವಾಗಿ ಅಸಭ್ಯ ಪದ ಬಳಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಂತಹ ಪದ ನಾನು ಬಳಸಬಾರದಿತ್ತು. ಬಳಸಿದ್ದಕ್ಕೆ ವಿಷಾದವಿದೆ. ನಾನು ನನ್ನ ಮಾತನ್ನು ವಾಪಸ್ ಪಡೆದುಕೊಳ್ಳುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ರಮೇಶ್​ ಜಾರಕಿಹೊಳಿ ಮನೆ ಬಳಿ ಕಾಂಗ್ರೆಸ್ ಕಾರ್ಯಕರ್ತರ​ ಪ್ರತಿಭಟನೆ ಇತ್ತ, ಡಿಕೆಶಿ ಬಗ್ಗೆ ರಮೇಶ್ ಜಾರಕಿಹೊಳಿ ಅಸಭ್ಯ ಹೇಳಿಕೆ ವಿಚಾರವಾಗಿ ರಮೇಶ್​ ಜಾರಕಿಹೊಳಿ ಮನೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು ರಮೇಶ್​ ಜಾರಕಿಹೊಳಿ ಮನೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಮೇಶ್​ ವಿರುದ್ಧ ಯುವ ಕಾಂಗ್ರೆಸ್ ಘಟಕದವರು ಘೋಷಣೆ ಕೂಗುತ್ತಿದ್ದಾರೆ. ರಮೇಶ್​ ಜಾರಕಿಹೊಳಿ ಮನೆ ಬಳಿ ಕಾರ್ಯಕರ್ತರ ಧರಣಿ ನಡೆಸುತ್ತಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ರಮೇಶ್ ನಿವಾಸದ ಬಳಿ ಧರಣಿ ನಡೆಯುತ್ತಿದೆ.

CONG WORKERSS PROTESTS

ಕಾಂಗ್ರೆಸ್​ ಕಾರ್ಯಕರ್ತರ ಧರಣಿ

ಇದರ ಜೊತೆ, ಯಾರೋ ಹೆಸರು ಹೇಳಿದ್ದಕ್ಕೆ ರಾಜೀನಾಮೆ ಕೇಳುವ ಬಿಜೆಪಿ ಚಾಂದಿನಿ ನಾಯ್ಕ್‌ಗೆ ಹಲ್ಲೆ ನಡೆಸಿದವರನ್ನ ಉಚ್ಚಾಟನೆ ಮಾಡಲಿ. ಹಲ್ಲೆ ನಡೆಸಿದ್ದ ಶಾಸಕ ಸಿದ್ದು ಸವದಿಯನ್ನು ಉಚ್ಚಾಟನೆ ಮಾಡಿ. ತಡೆಯಾಜ್ಞೆ ತಂದಿರುವ 6 ಸಚಿವರ ರಾಜೀನಾಮೆ ಪಡೆಯಿರಿ. ಸದನ ಸದಸ್ಯರ ಚಾರಿತ್ರ್ಯ ಪ್ರಶ್ನಿಸಿದವರ ರಾಜೀನಾಮೆ ಪಡೆಯಿರಿ. ಚಾರಿತ್ರ್ಯ ಪ್ರಶ್ನಿಸಿದ ಸಚಿವ ಸುಧಾಕರ್​ ರಾಜೀನಾಮೆ ಪಡೆಯಿರಿ. ಅತ್ಯಾಚಾರಿ ಮಾಜಿ ಸಚಿವನನ್ನ ಪಕ್ಷದಿಂದ ಉಚ್ಚಾಟನೆ ಮಾಡಿ. ಪಕ್ಷದಿಂದ ಉಚ್ಚಾಟನೆ ಮಾಡಿ ನೈತಿಕತೆಯನ್ನು ತೋರಿಸಿ ಎಂದು ಕರ್ನಾಟಕ ಬಿಜೆಪಿಗೆ ಕರ್ನಾಟಕ ಕಾಂಗ್ರೆಸ್​ ಘಟಕ ಒತ್ತಾಯ ಮಾಡಿದೆ.

ಅಂದ ಹಾಗೆ, ಈ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ರಮೇಶ್ ಜಾರಕಿಹೊಳಿ ನನ್ನ ಬಳಿ 11 ಸಾಕ್ಷ್ಯಗಳಿವೆ. ಮಹಾನಾಯಕ ಯಾರೆಂದು ಪೋಷಕರು ಬಹಿರಂಗಗೊಳ್ಸಿದ್ದಾರೆ. ಮಹಾನಾಯಕ ರಾಜಕೀಯದಲ್ಲಿರಲು ನಾಲಾಯಕ್​. ನಾನು ಗಂಡಸು, ಆ ಮಹಾನಾಯಕ ಓರ್ವ ಗಾಂ.. ಎಂದು  ಖಾರವಾಗಿ ಮಾತನಾಡಿದ್ದರು.

‘ನಮ್ಮ ಕುಟುಂಬದವರು ಯಾವ ಹುಡುಗಿಯನ್ನೂ ಮೂಸಿನೋಡಿಲ್ಲ’ ನಮ್ಮ ಕುಟುಂಬದವರು ಯಾವ ಹುಡುಗಿಯನ್ನೂ ಮೂಸಿನೋಡಿಲ್ಲ. ಡಿ.ಕೆ.ಶಿವಕುಮಾರ್​ ವಿರುದ್ಧ ನೇರ ಹೋರಾಟಕ್ಕೆ ಇಳಿಯುತ್ತೇವೆ. ಕನಕಪುರದಲ್ಲಿ ಅವನನ್ನು ಸೋಲಿಸಲು ಹೋರಾಟ ಮಾಡುವೆ. ಡಿ.ಕೆ.ಶಿವಕುಮಾರ್​​ ಬೆಳಗಾವಿಗೆ ಬಂದರೆ ಸ್ವಾಗತಿಸುತ್ತೇವೆ. ಬೆಳಗಾವಿಯಿಂದ ಮರ್ಯಾದೆಯಿಂದ ಕಳಿಸಿಕೊಡುತ್ತೇವೆ ಎಂದು ರಮೇಶ್​ ಜಾರಕಿಹೊಳಿ ಹೇಳಿದರು. ಬೆಳಗಾವಿಗೆ ಬಂದಾಗ ಅವರನ್ನು ಸುರಕ್ಷಿತವಾಗಿ ನೋಡಿಕೊಳ್ಳುತ್ತೇವೆ. ಯಾಕೆಂದರೆ ಬೆಳಗಾವಿ ನಮ್ಮೂರು, ಯಾವುದೇ ತೊಂದರೆಕೊಡಲ್ಲ ಎಂದು ರಮೇಶ್​ ಜಾರಕಿಹೊಳಿ ಹೇಳಿದ್ದರು.

‘ನಾನು ನಿರಪರಾಧಿ ಎಂದು ಆ ಕುಟುಂಬಸ್ಥರು ಹೇಳಿದ್ದಾರೆ’ ಡಿ.ಕೆ.ಶಿವಕುಮಾರ್​ ರಾಜಕೀಯದಲ್ಲಿರಲು ಅರ್ಹನೇ ಅಲ್ಲ. ಡಿಕೆಶಿ ರಾಜಕೀಯದಿಂದ ನಿವೃತ್ತಿ ಪಡೆಯುವುದು ಉತ್ತಮ. ಯುವತಿ ಕುಟುಂಬಸ್ಥರಿಗೆ ನಾನು ಧನ್ಯವಾದ ಹೇಳುತ್ತೇನೆ. ನಾನು ನಿರಪರಾಧಿ ಎಂದು ಆ ಕುಟುಂಬಸ್ಥರು ಹೇಳಿದ್ದಾರೆ ಎಂದು ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ನಮ್ಮ ಸಿಎಂ, ಅಮಿತ್ ಶಾ ಜತೆ ಮಾತನಾಡುತ್ತೇನೆ ಎಂದು ರಮೇಶ್​ ಜಾರಕಿಹೊಳಿ ಹೇಳಿದ್ದರು.

‘ನಾನು ನಿರಪರಾಧಿ ಎಂದು ಆ ಕುಟುಂಬಸ್ಥರು ಹೇಳಿದ್ದಾರೆ’ ಡಿ.ಕೆ.ಶಿವಕುಮಾರ್​ ರಾಜಕೀಯದಲ್ಲಿರಲು ಅರ್ಹನೇ ಅಲ್ಲ. ಡಿಕೆಶಿ ರಾಜಕೀಯದಿಂದ ನಿವೃತ್ತಿ ಪಡೆಯುವುದು ಉತ್ತಮ. ಯುವತಿ ಕುಟುಂಬಸ್ಥರಿಗೆ ನಾನು ಧನ್ಯವಾದ ಹೇಳುತ್ತೇನೆ. ನಾನು ನಿರಪರಾಧಿ ಎಂದು ಆ ಕುಟುಂಬಸ್ಥರು ಹೇಳಿದ್ದಾರೆ ಎಂದು ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ನಮ್ಮ ಸಿಎಂ, ಅಮಿತ್ ಶಾ ಜತೆ ಮಾತನಾಡುತ್ತೇನೆ ಎಂದು ರಮೇಶ್​ ಜಾರಕಿಹೊಳಿ ಹೇಳಿದ್ದರು.

ಇದನ್ನೂ ಓದಿ: Ramesh Jarkiholi Press Meet | ನಾನು ಗಂಡಸು.. ಆ ಮಹಾನಾಯಕ ಗಾಂ.. ಅವನನ್ನು ಒದ್ದು ಒಳಗಾಕಿ -ರಮೇಶ್ ಜಾರಕಿಹೊಳಿ

Published On - 7:46 pm, Sat, 27 March 21

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ