AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ನೀಡಿದ ದೂರಿನಲ್ಲಿ ಸ್ಫೋಟಕ ಅಂಶ ಪತ್ತೆ.. ಮೂವರಿಗಾಗಿ ಎಸ್​ಐಟಿ ಹುಡುಕಾಟ

ರಮೇಶ್ ಜಾರಕಿಹೊಳಿ ಸಿಡಿ ಕೇಸ್​ಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಇಷ್ಟು ದಿನ ದೂರು ಕೊಡೋ ಬಗ್ಗೆ ಚಿಂತನೆ ನಡೆಸ್ತಿದ್ದ ಸಾಹುಕಾರ್ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ನೀಡಿದ ದೂರಿನಲ್ಲಿ ಸ್ಫೋಟಕ ಅಂಶ ಪತ್ತೆ.. ಮೂವರಿಗಾಗಿ ಎಸ್​ಐಟಿ ಹುಡುಕಾಟ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಎಸ್ಐಟಿ ತನಿಖೆ ಬಹುತೇಕ ಮುಕ್ತಾಯ: ಬಿ ರಿಪೋರ್ಟ್ ಯಾರ ಪರವಾಗಿ?
ಆಯೇಷಾ ಬಾನು
|

Updated on: Mar 14, 2021 | 8:37 AM

Share

ಬೆಂಗಳೂರು: ಮಾರ್ಚ್ 13ರಂದು ರಮೇಶ್ ಜಾರಕಿಹೊಳಿ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಮೇಶ್ ನೀಡಿರೋ ದೂರಿನಲ್ಲಿ ಹೊಸ ಸ್ಫೋಟಕ ಅಂಶ ಬಯಲಾಗಿದೆ. ಅದೇನಂದ್ರೆ ಸದಾಶಿವನಗರದಲ್ಲೇ 3 ತಿಂಗಳಿನಿಂದ ನನ್ನ ವಿರುದ್ಧ ಮಸಲತ್ತು ನಡೆದಿದೆ. ನಕಲಿ ಸಿಡಿ ಸೃಷ್ಟಿಸಿ ಮಾನಸಿಕವಾಗಿ ಹಿಂಸೆ ಮಾಡಿ, ರಾಜಕೀಯವಾಗಿ ಮಾನಹಾನಿ ಮಾಡಲು ನನ್ನಿಂದ ಹಣವನ್ನೂ ಪಡೆಯಲು ಯತ್ನಿಸಲಾಗ್ತಿದೆ ಅಂತಾ ದೂರು ನೀಡಿದ್ದಾರೆ. ಅಷ್ಟೇ ಅಲ್ಲ, ಇದ್ರ ಹಿಂದೆ ಹಲವಾರು ಜನ ಇದ್ದು, ನಕಲಿ ಸಿಡಿ ತಯಾರಿಸಲು ಭಾಗಿಯಾಗಿಯಾಗಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ ಅಂತಾ ಉಲ್ಲೇಖಿಸಿದ್ದಾರೆ.

ಸದಾಶಿವನಗರ ಪೊಲೀಸರು, ಐಪಿಸಿ ಸೆಕ್ಷನ್, 34, 120ಬಿ, 385, 465, 469ನಡಿ ದೂರು ದಾಖಲಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್ 34ರಲ್ಲಿ ಒಂದೇ ದುರುದ್ದೇಶದಿಂದ ಹಲವರ ಕೃತ್ಯ ಎಸಗಿರೋದು, 120ಬಿಯಲ್ಲಿ ಅಪರಾಧ ಕೃತ್ಯ ನಡೆಸಲು ಒಳಸಂಚು ರೂಪಿಸಿರೋದು, 385 ಐಪಿಸಿ ಸೆಕ್ಷನ್‌ನಡಿ, ಭಯ ಹುಟ್ಟಿಸಿ ಸುಲಿಗೆ ಮಾಡುವ ಪ್ರಯತ್ನ, ಇದರ ಜೊತೆಗೆ 465ರ ಅಡಿ ನಕಲಿ ಕೃತ್ಯ, 469ರಡಿ ಖೊಟ್ಟಿ ದಾಖಲೆ ಮೂಲಕ ಮಾನಹಾನಿ ನಡೆಸುವ ಯತ್ನ ಅಂತಾ ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ. ಎಫ್​ಐಆರ್ ಆಗಿರೋ ವಿಚಾರವನ್ನ ಠಾಣಾಧಿಕಾರಿ ಕಮಿಷನರ್​ ಗಮನಕ್ಕೆ ತಂದಿದ್ದಾರೆ.

ರಮೇಶ್ ಜಾರಕಿಹೊಳಿ ಪ್ರಕರಣ ಎಸ್​ಐಟಿಗೆ ವರ್ಗಾವಣೆ ಇನ್ನು ರಮೇಶ್ ಜಾರಕಿಹೊಳಿ ನೀಡಿದ್ದ ದೂರನ್ನು ಎಸ್​ಐಟಿಗೆ ವರ್ಗಾಯಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್​ ಪಂತ್ ಆದೇಶ ಹೊರಡಿಸಿದ್ದಾರೆ. ಎಸ್​ಐಟಿಗೆ ಪ್ರಕರಣ ವರ್ಗಾವಣೆ ಆಗ್ತಿದ್ದಂತೆ ​​ಕಬ್ಬನ್​ಪಾರ್ಕ್​​ ಪೊಲೀಸರು ಬಸವನ ಬಾಗೇವಾಡಿಯ ಸಿಡಿ ಲೇಡಿ ಮನೆಗೆ, ​ಪಿಜಿ ಓನರ್​, ಸಿಡಿ ಲೇಡಿ ಸ್ನೇಹಿತರಿಗೆ ನೋಟಿಸ್ ಕಳಿಸಿದೆ ಎಂಬ ಮಾಹಿತಿ ಸಿಕ್ಕಿದೆ.

ರಮೇಶ್ ಜಾರಕಿಹೊಳಿ ದೂರು ನೀಡಿದ್ದರಿಂದ ಎಸ್​ಐಟಿಗೆ ಆನೆಬಲ ಬಂದಂತಾಗಿದೆ. ಇಷ್ಟು ದಿನ ಎಫ್​ಐಆರ್​ ಇಲ್ಲದೇ ಎಸ್​ಐಟಿ ತನಿಖೆ ನಡೆಸಿತ್ತು. ಪ್ರಕರಣದ ಬಗ್ಗೆ ಹಲವರ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹ ಮಾಡಿತ್ತು. ಈಗಾಗಲೇ ಪ್ರಕರಣ ಸಂಬಂಧ ಐವರ ವಿಚಾರಣೆ ನಡೆಸಲಾಗಿದೆ. ವಿಚಾರಣೆ ವೇಳೆ ಮಹತ್ವದ ಮಾಹಿತಿ ಕಲೆ ಹಾಕಲಾಗಿದೆ. ಆದ್ರೆ ಈಗ FIR ದಾಖಲಾಗಿರುವ ಕಾರಣ ತನಿಖೆ ಮತ್ತಷ್ಟು ಚುರುಕುಗೊಳ್ಳಲಿದೆ.

ಮೂವರಿಗಾಗಿ ಎಸ್​ಐಟಿ ಹುಡುಕಾಟ ಇನ್ನು ಕೇಸ್ ವರ್ಗಾವಣೆ ಬಳಿಕ ಅಧಿಕೃತವಾಗಿ ಎಸ್​ಐಟಿ ವಿಚಾರಣೆಗೆ ಮುಂದಾಗಿದೆ. ಎಸ್​ಐಟಿ ಅಧಿಕಾರಿಗಳ ಟೀಂ ಯುವತಿ ಸೇರಿದಂತೆ ಮೂವರಿಗಾಗಿ ಬಲೆ ಬೀಸಿದೆ. ವಿಡಿಯೋದಲ್ಲಿರುವ ಯುವತಿ, ಇಬ್ಬರು ಪುರುಷರಿಗೆ ಹುಡುಕಾಟ ಮುಂದುವರೆದಿದೆ. ತುಮಕೂರು, ದೇವನಹಳ್ಳಿ ಮೂಲದವರ ಬಳಿ ಸ್ಫೋಟಕ ಸತ್ಯ?ಇದೆ ಎಂಬ ಮಾಹಿತಿ ಸಿಕ್ಕಿದೆ. ಈಗ ಸಿಕ್ಕಿರುವ ಆರೋಪಿಗಳ ಹೇಳಿಕೆ ಆಧರಿಸಿ ತನಿಖೆ ಚುರುಕುಗೊಳಿಸಲಾಗುತ್ತಿದೆ.

ಇದನ್ನೂ ಓದಿ: ಸಿಡಿ ಯುವತಿಯಿಂದ ಲೇಟೆಸ್ಟ್​ ವಿಡಿಯೋ ಬಿಡುಗಡೆ: ರಮೇಶ್​ ಜಾರಕಿಹೊಳಿ, ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಹೀಗಿದೆ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ