AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬಸ್​​ಗಳ ಮೇಲೆ ಕಲ್ಲುತೂರಾಟ ನಡೆಸಿ ಪರಾರಿಯಾದ ರಮೇಶ್​ ಜಾರಕಿಹೊಳಿ ಬೆಂಬಲಿಗರು

Ramesh Jarkiholi CD Controversy: ರಮೇಶ್​ ಜಾರಕಿಹೊಳಿ ರಾಜೀನಾಮೆಯನ್ನು ಖಂಡಿಸಿ ಇಂದು ಬೆಳಗ್ಗೆಯಿಂದಲೂ ಗೋಕಾಕದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬೆಂಬಲಿಗರು, ಇದೀಗ ಸರ್ಕಾರಿ ಬಸ್​ಗಳ ಮೇಲೆ ಕಲ್ಲುತೂರಾಟ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ್ಧಾರೆ.

ಸರ್ಕಾರಿ ಬಸ್​​ಗಳ ಮೇಲೆ ಕಲ್ಲುತೂರಾಟ ನಡೆಸಿ ಪರಾರಿಯಾದ ರಮೇಶ್​ ಜಾರಕಿಹೊಳಿ ಬೆಂಬಲಿಗರು
ಕಲ್ಲುತೂರಾಟದಿಂದ ಹಾನಿಗೊಳಗಾದ ಬಸ್​ಗಳು
Skanda
|

Updated on:Mar 03, 2021 | 5:39 PM

Share

ಬೆಳಗಾವಿ: ಅಶ್ಲೀಲ ವಿಡಿಯೋ ಕಾರಣದಿಂದ ಸಚಿವ ಸ್ಥಾನಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ, ಅವರ ಬೆಂಬಲಿಗರ ಪುಂಡಾಟ ಹೆಚ್ಚಾಗಿದೆ. ರಮೇಶ್​ ಜಾರಕಿಹೊಳಿ ರಾಜೀನಾಮೆಯನ್ನು ಖಂಡಿಸಿ ಇಂದು ಬೆಳಗ್ಗೆಯಿಂದಲೂ ಗೋಕಾಕದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬೆಂಬಲಿಗರು, ಇದೀಗ ಸರ್ಕಾರಿ ಬಸ್​ಗಳ ಮೇಲೆ ಕಲ್ಲುತೂರಾಟ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ್ಧಾರೆ. ಬೆಳಗಾವಿ ಜಿಲ್ಲೆ ಗೋಕಾಕ್​ನಲ್ಲಿ ಬಸ್​ಗಳ ಮೇಲೆ ಕಲ್ಲು ಎಸೆಯಲಾಗಿದ್ದು, ನಿಲ್ದಾಣದಲ್ಲಿ ನಿಂತಿದ್ದ 2 ಬಸ್​​ಗಳ ಹಿಂಬದಿ ಗಾಜು ಪುಡಿಗೊಳಿಸಿದ ಪುಡಾರಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ರಾಜೀನಾಮೆ ಬೆನ್ನಲ್ಲೇ ರಮೇಶ್​ ಜಾರಕಿಹೊಳಿ ಸ್ವಕ್ಷೇತ್ರದಲ್ಲಿ ಬೆಂಬಲಿಗರ ಪ್ರತಿಭಟನೆ ಜೋರಾಗುತ್ತಿದ್ದು, ದಿನೇಶ್​ ಕಲ್ಲಹಳ್ಳಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕುತ್ತಿದ್ದಾರೆ. ತಮ್ಮ ನಾಯಕನಿಂದ ರಾಜೀನಾಮೆ ಪಡೆದಿದ್ದಕ್ಕೆ ಸಿಟ್ಟಾಗಿರುವ ಬೆಂಬಲಿಗರು ನಗರದ ಹಲವೆಡೆ ಗಲಾಟೆ ನಡೆಸಿದ್ದಾರೆ. ಇಂದು ಬೆಳಗ್ಗೆ ರಮೇಶ್​ ರಾಜೀನಾಮೆ ಸಲ್ಲಿಸುವ ನಿರ್ಧಾರಕ್ಕೆ ಬಂದಾಗಲಿಂದಲೂ ಅಭಿಮಾನಿಗಳು ರಸ್ತೆಗಿಳಿದಿದ್ದು, ಅವರ ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಬಂದ್​ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರು. ದುಷ್ಕರ್ಮಿಗಳು ಇದುವರೆಗೆ 8 ಬಸ್​ಗಳ ಮೇಲೆ ಕಲ್ಲು ತೂರಿರುವ ಮಾಹಿತಿ ಇದ್ದು, ಈ ರೀತಿಯ ಪುಂಡಾಟಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ರಾಜೀನಾಮೆ ಅಂಗೀಕಾರ ಖಂಡಿಸಿ ಕಾರ್ಮಿಕರು ಸಹ ಪ್ರತಿಭಟನೆ ನಡೆಸುತ್ತಿದ್ದು, ಬೆಳಗಾವಿ ಜಿಲ್ಲೆ ಗೋಕಾಕ್ ಮಿಲ್​​ನ ಕಾರ್ಮಿಕರು ಧರಣಿಗೆ ಕುಳಿತಿದ್ದಾರೆ. ಗೋಕಾಕ್-ಬೆಳಗಾವಿ ರಸ್ತೆ ತಡೆದು 500ಕ್ಕೂ ಹೆಚ್ಚು ಕಾರ್ಮಿಕರು ರಸ್ತೆಯಲ್ಲೇ ಕುಳಿತು ಧರಣಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ ದಿನೇಶ್​ ಕಲ್ಲಹಳ್ಳಿ ವಿರುದ್ಧ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ದೂರು ದಾಖಲು

ಡಾ. ಬಸವರಾಜ ಗುರೂಜಿಯಿಂದ ರಮೇಶ್ ಜಾರಕಿಹೊಳಿ ಜಾತಕ ವಿಶ್ಲೇಷಣೆ: ಸದ್ಯಕ್ಕೆ ಸಂಕಷ್ಟ, ಏಪ್ರಿಲ್ ನಂತರ ಗುರು ಬಲ

Published On - 5:26 pm, Wed, 3 March 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ