AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬಸ್​​ಗಳ ಮೇಲೆ ಕಲ್ಲುತೂರಾಟ ನಡೆಸಿ ಪರಾರಿಯಾದ ರಮೇಶ್​ ಜಾರಕಿಹೊಳಿ ಬೆಂಬಲಿಗರು

Ramesh Jarkiholi CD Controversy: ರಮೇಶ್​ ಜಾರಕಿಹೊಳಿ ರಾಜೀನಾಮೆಯನ್ನು ಖಂಡಿಸಿ ಇಂದು ಬೆಳಗ್ಗೆಯಿಂದಲೂ ಗೋಕಾಕದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬೆಂಬಲಿಗರು, ಇದೀಗ ಸರ್ಕಾರಿ ಬಸ್​ಗಳ ಮೇಲೆ ಕಲ್ಲುತೂರಾಟ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ್ಧಾರೆ.

ಸರ್ಕಾರಿ ಬಸ್​​ಗಳ ಮೇಲೆ ಕಲ್ಲುತೂರಾಟ ನಡೆಸಿ ಪರಾರಿಯಾದ ರಮೇಶ್​ ಜಾರಕಿಹೊಳಿ ಬೆಂಬಲಿಗರು
ಕಲ್ಲುತೂರಾಟದಿಂದ ಹಾನಿಗೊಳಗಾದ ಬಸ್​ಗಳು
Skanda
|

Updated on:Mar 03, 2021 | 5:39 PM

Share

ಬೆಳಗಾವಿ: ಅಶ್ಲೀಲ ವಿಡಿಯೋ ಕಾರಣದಿಂದ ಸಚಿವ ಸ್ಥಾನಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ, ಅವರ ಬೆಂಬಲಿಗರ ಪುಂಡಾಟ ಹೆಚ್ಚಾಗಿದೆ. ರಮೇಶ್​ ಜಾರಕಿಹೊಳಿ ರಾಜೀನಾಮೆಯನ್ನು ಖಂಡಿಸಿ ಇಂದು ಬೆಳಗ್ಗೆಯಿಂದಲೂ ಗೋಕಾಕದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬೆಂಬಲಿಗರು, ಇದೀಗ ಸರ್ಕಾರಿ ಬಸ್​ಗಳ ಮೇಲೆ ಕಲ್ಲುತೂರಾಟ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡಿದ್ಧಾರೆ. ಬೆಳಗಾವಿ ಜಿಲ್ಲೆ ಗೋಕಾಕ್​ನಲ್ಲಿ ಬಸ್​ಗಳ ಮೇಲೆ ಕಲ್ಲು ಎಸೆಯಲಾಗಿದ್ದು, ನಿಲ್ದಾಣದಲ್ಲಿ ನಿಂತಿದ್ದ 2 ಬಸ್​​ಗಳ ಹಿಂಬದಿ ಗಾಜು ಪುಡಿಗೊಳಿಸಿದ ಪುಡಾರಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ರಾಜೀನಾಮೆ ಬೆನ್ನಲ್ಲೇ ರಮೇಶ್​ ಜಾರಕಿಹೊಳಿ ಸ್ವಕ್ಷೇತ್ರದಲ್ಲಿ ಬೆಂಬಲಿಗರ ಪ್ರತಿಭಟನೆ ಜೋರಾಗುತ್ತಿದ್ದು, ದಿನೇಶ್​ ಕಲ್ಲಹಳ್ಳಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕುತ್ತಿದ್ದಾರೆ. ತಮ್ಮ ನಾಯಕನಿಂದ ರಾಜೀನಾಮೆ ಪಡೆದಿದ್ದಕ್ಕೆ ಸಿಟ್ಟಾಗಿರುವ ಬೆಂಬಲಿಗರು ನಗರದ ಹಲವೆಡೆ ಗಲಾಟೆ ನಡೆಸಿದ್ದಾರೆ. ಇಂದು ಬೆಳಗ್ಗೆ ರಮೇಶ್​ ರಾಜೀನಾಮೆ ಸಲ್ಲಿಸುವ ನಿರ್ಧಾರಕ್ಕೆ ಬಂದಾಗಲಿಂದಲೂ ಅಭಿಮಾನಿಗಳು ರಸ್ತೆಗಿಳಿದಿದ್ದು, ಅವರ ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಬಂದ್​ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರು. ದುಷ್ಕರ್ಮಿಗಳು ಇದುವರೆಗೆ 8 ಬಸ್​ಗಳ ಮೇಲೆ ಕಲ್ಲು ತೂರಿರುವ ಮಾಹಿತಿ ಇದ್ದು, ಈ ರೀತಿಯ ಪುಂಡಾಟಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ರಾಜೀನಾಮೆ ಅಂಗೀಕಾರ ಖಂಡಿಸಿ ಕಾರ್ಮಿಕರು ಸಹ ಪ್ರತಿಭಟನೆ ನಡೆಸುತ್ತಿದ್ದು, ಬೆಳಗಾವಿ ಜಿಲ್ಲೆ ಗೋಕಾಕ್ ಮಿಲ್​​ನ ಕಾರ್ಮಿಕರು ಧರಣಿಗೆ ಕುಳಿತಿದ್ದಾರೆ. ಗೋಕಾಕ್-ಬೆಳಗಾವಿ ರಸ್ತೆ ತಡೆದು 500ಕ್ಕೂ ಹೆಚ್ಚು ಕಾರ್ಮಿಕರು ರಸ್ತೆಯಲ್ಲೇ ಕುಳಿತು ಧರಣಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ ದಿನೇಶ್​ ಕಲ್ಲಹಳ್ಳಿ ವಿರುದ್ಧ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ ದೂರು ದಾಖಲು

ಡಾ. ಬಸವರಾಜ ಗುರೂಜಿಯಿಂದ ರಮೇಶ್ ಜಾರಕಿಹೊಳಿ ಜಾತಕ ವಿಶ್ಲೇಷಣೆ: ಸದ್ಯಕ್ಕೆ ಸಂಕಷ್ಟ, ಏಪ್ರಿಲ್ ನಂತರ ಗುರು ಬಲ

Published On - 5:26 pm, Wed, 3 March 21

Follow Us
Skanda
Skanda
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ