ರಾಜೀನಾಮೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸ್ವಕ್ಷೇತ್ರದಲ್ಲಿ ಬೆಂಬಲಿಗರ ಪ್ರತಿಭಟನೆ ಜೋರಾಗುತ್ತಿದ್ದು, ದಿನೇಶ್ ಕಲ್ಲಹಳ್ಳಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕುತ್ತಿದ್ದಾರೆ. ತಮ್ಮ ನಾಯಕನಿಂದ ರಾಜೀನಾಮೆ ಪಡೆದಿದ್ದಕ್ಕೆ ಸಿಟ್ಟಾಗಿರುವ ಬೆಂಬಲಿಗರು ನಗರದ ಹಲವೆಡೆ ಗಲಾಟೆ ನಡೆಸಿದ್ದಾರೆ. ಇಂದು ಬೆಳಗ್ಗೆ ರಮೇಶ್ ರಾಜೀನಾಮೆ ಸಲ್ಲಿಸುವ ನಿರ್ಧಾರಕ್ಕೆ ಬಂದಾಗಲಿಂದಲೂ ಅಭಿಮಾನಿಗಳು ರಸ್ತೆಗಿಳಿದಿದ್ದು, ಅವರ ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರು. ದುಷ್ಕರ್ಮಿಗಳು ಇದುವರೆಗೆ 8 ಬಸ್ಗಳ ಮೇಲೆ ಕಲ್ಲು ತೂರಿರುವ ಮಾಹಿತಿ ಇದ್ದು, ಈ ರೀತಿಯ ಪುಂಡಾಟಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ರಾಜೀನಾಮೆ ಅಂಗೀಕಾರ ಖಂಡಿಸಿ ಕಾರ್ಮಿಕರು ಸಹ ಪ್ರತಿಭಟನೆ ನಡೆಸುತ್ತಿದ್ದು, ಬೆಳಗಾವಿ ಜಿಲ್ಲೆ ಗೋಕಾಕ್ ಮಿಲ್ನ ಕಾರ್ಮಿಕರು ಧರಣಿಗೆ ಕುಳಿತಿದ್ದಾರೆ. ಗೋಕಾಕ್-ಬೆಳಗಾವಿ ರಸ್ತೆ ತಡೆದು 500ಕ್ಕೂ ಹೆಚ್ಚು ಕಾರ್ಮಿಕರು ರಸ್ತೆಯಲ್ಲೇ ಕುಳಿತು ಧರಣಿ ನಡೆಸುತ್ತಿದ್ದಾರೆ.
ಇದನ್ನೂ ಓದಿ:
ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ ದಿನೇಶ್ ಕಲ್ಲಹಳ್ಳಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲು
ಡಾ. ಬಸವರಾಜ ಗುರೂಜಿಯಿಂದ ರಮೇಶ್ ಜಾರಕಿಹೊಳಿ ಜಾತಕ ವಿಶ್ಲೇಷಣೆ: ಸದ್ಯಕ್ಕೆ ಸಂಕಷ್ಟ, ಏಪ್ರಿಲ್ ನಂತರ ಗುರು ಬಲ