AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮತ್ತೆ ಮುಂಬೈಗೆ ಹಾರಲಿರುವ ರಮೇಶ್ ಜಾರಕಿಹೊಳಿ

ತಮ್ಮ ಏಳಿಗೆ ಸಹಿಸದೇ ಷಡ್ಯಂತ್ರ ಮಾಡಿದ್ದಾರೆಂದು ಬಿಜೆಪಿಯ ಕೆಲ ಪ್ರಮುಖ ನಾಯಕರ ವಿರುದ್ಧ ರಮೇಶ್ ಮಾಡಿದ್ದ ಗಂಭೀರ ಆರೋಪವನ್ನು ದೇವೇಂದ್ರ ಫಡ್ನವಿಸ್ ಹೈಕಮಾಂಡ್ ನಾಯಕರ ಗಮನಕ್ಕೆ ತಂದಿದ್ದಾರೆ. ಈ ವಿಚಾರದ ಬಗ್ಗೆ ಹೈಕಮಾಂಡ್ ಸಂದೇಶವನ್ನು ದೇವೇಂದ್ರ ಫಡ್ನವಿಸ್ ರಮೇಶ್ ಜಾರಕಿಹೊಳಿಗೆ ತಿಳಿಸುತ್ತಾರಾ? ಎಂದು ನೋಡಬೇಕಿದೆ.

ಇಂದು ಮತ್ತೆ ಮುಂಬೈಗೆ ಹಾರಲಿರುವ ರಮೇಶ್ ಜಾರಕಿಹೊಳಿ
ರಮೇಶ್​ ಜಾರಕಿಹೊಳಿ
TV9 Web
| Edited By: sandhya thejappa|

Updated on:Jun 28, 2021 | 10:34 AM

Share

ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಇಂದು ಸಂಜೆ (ಜೂನ್ 28) ಮತ್ತೆ ಮುಂಬೈಗೆ ತೆರಳಲಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಸಂಜೆ ಬೆಳಗಾವಿ ಸಾಂಬ್ರಾ ಏರ್​ಪೋರ್ಟ್​ನಿಂದ ಮುಂಬೈಗೆ ಕೆಲ ಆಪ್ತರ ಜೊತೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ಬೆಳಗ್ಗೆ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿ, ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ದೇವೇಂದ್ರ ಫಡ್ನವಿಸ್, ರಮೇಶ್ ಜಾರಕಿಹೊಳಿಗೆ ಬಿಜೆಪಿ ಸೇರ್ಪಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ದೇವೇಂದ್ರ ಫಡ್ನವಿಸ್​ರನ್ನು ರಾಜಕೀಯ ಗಾಡ್​ಫಾದರ್ ಎಂದು ರಮೇಶ್ ಜಾರಕಿಹೊಳಿ ನಂಬಿದ್ದಾರೆ.

ತಮ್ಮ ಏಳಿಗೆ ಸಹಿಸದೇ ಷಡ್ಯಂತ್ರ ಮಾಡಿದ್ದಾರೆಂದು ಬಿಜೆಪಿಯ ಕೆಲ ಪ್ರಮುಖ ನಾಯಕರ ವಿರುದ್ಧ ರಮೇಶ್ ಮಾಡಿದ್ದ ಗಂಭೀರ ಆರೋಪವನ್ನು ದೇವೇಂದ್ರ ಫಡ್ನವಿಸ್ ಹೈಕಮಾಂಡ್ ನಾಯಕರ ಗಮನಕ್ಕೆ ತಂದಿದ್ದಾರೆ. ಈ ವಿಚಾರದ ಬಗ್ಗೆ ಹೈಕಮಾಂಡ್ ಸಂದೇಶವನ್ನು ದೇವೇಂದ್ರ ಫಡ್ನವಿಸ್ ರಮೇಶ್ ಜಾರಕಿಹೊಳಿಗೆ ತಿಳಿಸುತ್ತಾರಾ? ಎಂದು ನೋಡಬೇಕಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಹೇಳಿರುವ ರಮೇಶ್ ಜಾರಕಿಹೊಳಿಗೆ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ಸಲಹೆ ನೀಡಿದ್ದಾರೆ. ನಾಳೆ ದೇವೇಂದ್ರ ಫಡ್ನವಿಸ್ ಭೇಟಿ ಬಳಿಕ ದೆಹಲಿಗೆ ತೆರಳಿ, ಹೈಕಮಾಂಡ್ ನಾಯಕರ ಭೇಟಿಯಾಗುವ ಸಾಧ್ಯತೆಯಿದೆ. ಸಹೋದರರ ಸಲಹೆ ನಿನ್ನೆ ತಡರಾತ್ರಿ ನಡೆದ ಜಾರಕಿಹೊಳಿ ಬ್ರದರ್ಸ್ ಮೀಟಿಂಗ್​ನಲ್ಲಿ ಸಹೋದರರು ರಮೇಶ್ ಜಾರಕಿಹೊಳಿಗೆ ಹಲವು ಸಲಹೆಗಳನ್ನ ನೀಡಿದ್ದಾರೆ. ಆತುರಕ್ಕೆ ಬಿದ್ದು ಯಾವುದೇ ನಿರ್ಧಾರ ಬೇಡ ಅಂತಾ ಸಲಹೆ ನೀಡಿದ್ದಾರೆ. ಮತ್ತೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮುಂದೆ ಹಲವು ಅಡ್ಡಿಗಳು ಎದುರಾಗಬಹುದು ಅಂತಾ ಹೇಳಿದ್ದಾರೆ.

ಇದನ್ನೂ ಓದಿ

ರಹಸ್ಯ ಸ್ಥಳದಲ್ಲಿ ಜಾರಕಿಹೊಳಿ ಸಹೋದರರ ಸಭೆ.. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ‘ಸಾಹುಕಾರ್’ಗೆ ಸಲಹೆ

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ..

(Ramesh Jarkiholi is heading to Mumbai again today)

Published On - 10:29 am, Mon, 28 June 21

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ