AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ಕೋರ್ಟ್​ ಮೆಟ್ಟಿಲೇರಲಿರುವ ರಮೇಶ್​ ಜಾರಕಿಹೊಳಿ

Ramesh Jarkiholi CD Controversy: ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ವಿಡಿಯೋ ಪ್ರಸಾರ ಮಾಡದಂತೆ ತಡೆ ಹಿಡಿಯಬೇಕು ಎಂದು ರಮೇಶ್ ಜಾರಕಿಹೊಳಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ. ಅಲ್ಲದೇ, ಸಿಡಿ ಬಹಿರಂಗಗೊಳಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾರೆ.

ಅಶ್ಲೀಲ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ಕೋರ್ಟ್​ ಮೆಟ್ಟಿಲೇರಲಿರುವ ರಮೇಶ್​ ಜಾರಕಿಹೊಳಿ
ಸಚಿವ ರಮೇಶ್ ಜಾರಕಿಹೊಳಿಯ ರಾಸಲೀಲೆಯ ಸಿಡಿಯ ತುಣುಕು
Skanda
|

Updated on:Mar 05, 2021 | 4:02 PM

Share

ಬೆಂಗಳೂರು: ಅಶ್ಲೀಲ ಸಿಡಿ ಜಗಜ್ಜಾಹೀರಾದ ನಂತರ ಭಾರೀ ಮುಜುಗರಕ್ಕೊಳಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ರಮೇಶ್ ಜಾರಕಿಹೊಳಿ ಇದೀಗ ವಿಡಿಯೋ ಪ್ರಸಾರ ನಿರ್ಬಂಧಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲು ಹತ್ತಲು ತೀರ್ಮಾನಿಸಿದ್ದಾರೆ. ಆ ಮೂಲಕ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ವಿಡಿಯೋ ಪ್ರಸಾರ ಮಾಡದಂತೆ ತಡೆ ಹಿಡಿಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ. ಅಲ್ಲದೇ, ಸಿಡಿ ಬಹಿರಂಗಗೊಳಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಹ ಜಾರಕಿಹೊಳಿ ಸಹೋದರರು ನಿರ್ಧರಿಸಿದ್ದಾರೆ.

ನಿನ್ನೆ ತಡರಾತ್ರಿ ತನಕವೂ ಅಜ್ಞಾತ ಸ್ಥಳದಲ್ಲಿ ಮುಂದಿನ ನಡೆಯ ಬಗ್ಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿರುವ ರಮೇಶ್ ಜಾರಕಿಹೊಳಿ ಸದ್ಯ ಬೆಂಗಳೂರು ನಿವಾಸಕ್ಕೆ ಬಂದಿದ್ದಾರೆ. ಸಿಡಿಯಿಂದಾಗಿ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಸಂಕಟ ಉಂಟಾಗಿರುವುದರಿಂದ ಮುಜುಗರದಿಂದ ತಪ್ಪಿಸಿಕೊಳ್ಳಲು ಇಂದು ನಡೆಯುವ ಸದನಕ್ಕೂ ಬಹುತೇಕ ಗೈರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಮೇಶ್ ಜಾರಕಿಹೊಳಿ ಮತ್ತು ಯುವತಿ ನಡುವಿನ ಅಶ್ಲೀಲ ವಿಡಿಯೋ ಮತ್ತು ಸಂಭಾಷಣೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದ್ದು, ವಿಪಕ್ಷಗಳು ಹಾಗೂ ಸೈದ್ಧಾಂತಿಕ ವಿರೋಧಿಗಳು ಅದನ್ನೇ ಬಹುಮುಖ್ಯ ಅಸ್ತ್ರವಾಗಿರಿಸಿಕೊಂಡು ರಮೇಶ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ತಮ್ಮ ಬಳಿ ಇನ್ನೂ ಮೂವರು ಪ್ರಭಾವಿಗಳ ವಿಡಿಯೋ ಇರುವುದಾಗಿ ಹೇಳಿಕೆ ನೀಡಿರುವುದು ಭಾರೀ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಬೆಳವಣಿಗೆ ಸಹಿಸಲಾಗದೆ ಬಿಜೆಪಿಯವರೇ ಬ್ರೇಕ್​ ಹಾಕಿರಬಹುದು: ಸತೀಶ್​ ಜಾರಕಿಹೊಳಿ

ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ.. ರಾಜೀನಾಮೆಗೆ ಮುನ್ನ ರಮೇಶ್​ ಜಾರಕಿಹೊಳಿ ಹಾಕಿದ್ರಾ ಷರತ್ತು..

Published On - 10:38 am, Thu, 4 March 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?