AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ಕೋರ್ಟ್​ ಮೆಟ್ಟಿಲೇರಲಿರುವ ರಮೇಶ್​ ಜಾರಕಿಹೊಳಿ

Ramesh Jarkiholi CD Controversy: ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ವಿಡಿಯೋ ಪ್ರಸಾರ ಮಾಡದಂತೆ ತಡೆ ಹಿಡಿಯಬೇಕು ಎಂದು ರಮೇಶ್ ಜಾರಕಿಹೊಳಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ. ಅಲ್ಲದೇ, ಸಿಡಿ ಬಹಿರಂಗಗೊಳಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾರೆ.

ಅಶ್ಲೀಲ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ಕೋರ್ಟ್​ ಮೆಟ್ಟಿಲೇರಲಿರುವ ರಮೇಶ್​ ಜಾರಕಿಹೊಳಿ
ಸಚಿವ ರಮೇಶ್ ಜಾರಕಿಹೊಳಿಯ ರಾಸಲೀಲೆಯ ಸಿಡಿಯ ತುಣುಕು
Skanda
|

Updated on:Mar 05, 2021 | 4:02 PM

Share

ಬೆಂಗಳೂರು: ಅಶ್ಲೀಲ ಸಿಡಿ ಜಗಜ್ಜಾಹೀರಾದ ನಂತರ ಭಾರೀ ಮುಜುಗರಕ್ಕೊಳಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವ ರಮೇಶ್ ಜಾರಕಿಹೊಳಿ ಇದೀಗ ವಿಡಿಯೋ ಪ್ರಸಾರ ನಿರ್ಬಂಧಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲು ಹತ್ತಲು ತೀರ್ಮಾನಿಸಿದ್ದಾರೆ. ಆ ಮೂಲಕ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ವಿಡಿಯೋ ಪ್ರಸಾರ ಮಾಡದಂತೆ ತಡೆ ಹಿಡಿಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ. ಅಲ್ಲದೇ, ಸಿಡಿ ಬಹಿರಂಗಗೊಳಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸಹ ಜಾರಕಿಹೊಳಿ ಸಹೋದರರು ನಿರ್ಧರಿಸಿದ್ದಾರೆ.

ನಿನ್ನೆ ತಡರಾತ್ರಿ ತನಕವೂ ಅಜ್ಞಾತ ಸ್ಥಳದಲ್ಲಿ ಮುಂದಿನ ನಡೆಯ ಬಗ್ಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿರುವ ರಮೇಶ್ ಜಾರಕಿಹೊಳಿ ಸದ್ಯ ಬೆಂಗಳೂರು ನಿವಾಸಕ್ಕೆ ಬಂದಿದ್ದಾರೆ. ಸಿಡಿಯಿಂದಾಗಿ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಸಂಕಟ ಉಂಟಾಗಿರುವುದರಿಂದ ಮುಜುಗರದಿಂದ ತಪ್ಪಿಸಿಕೊಳ್ಳಲು ಇಂದು ನಡೆಯುವ ಸದನಕ್ಕೂ ಬಹುತೇಕ ಗೈರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಮೇಶ್ ಜಾರಕಿಹೊಳಿ ಮತ್ತು ಯುವತಿ ನಡುವಿನ ಅಶ್ಲೀಲ ವಿಡಿಯೋ ಮತ್ತು ಸಂಭಾಷಣೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದ್ದು, ವಿಪಕ್ಷಗಳು ಹಾಗೂ ಸೈದ್ಧಾಂತಿಕ ವಿರೋಧಿಗಳು ಅದನ್ನೇ ಬಹುಮುಖ್ಯ ಅಸ್ತ್ರವಾಗಿರಿಸಿಕೊಂಡು ರಮೇಶ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ತಮ್ಮ ಬಳಿ ಇನ್ನೂ ಮೂವರು ಪ್ರಭಾವಿಗಳ ವಿಡಿಯೋ ಇರುವುದಾಗಿ ಹೇಳಿಕೆ ನೀಡಿರುವುದು ಭಾರೀ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಬೆಳವಣಿಗೆ ಸಹಿಸಲಾಗದೆ ಬಿಜೆಪಿಯವರೇ ಬ್ರೇಕ್​ ಹಾಕಿರಬಹುದು: ಸತೀಶ್​ ಜಾರಕಿಹೊಳಿ

ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ.. ರಾಜೀನಾಮೆಗೆ ಮುನ್ನ ರಮೇಶ್​ ಜಾರಕಿಹೊಳಿ ಹಾಕಿದ್ರಾ ಷರತ್ತು..

Published On - 10:38 am, Thu, 4 March 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?