AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಗರ್ಭಗುಡಿಯಲ್ಲಿ ರಮೇಶ್​ ಜಾರಕಿಹೊಳಿ ಇರೋದು ಕಷ್ಟ; ಕಾಂಗ್ರೆಸ್​ನಲ್ಲಿ 8-10 ಜನರಿಗೆ ಮುಖ್ಯಮಂತ್ರಿ ಆಗೋ ಯೋಗ್ಯತೆ ಇದೆ: ಕೈ ಶಾಸಕ

ರಮೇಶ್ ಜಾರಕಿಹೊಳಿ ಮುಂದಿನ‌ ದಿನದಲ್ಲಿ ಕಾಂಗ್ರೆಸ್, ಜೆಡಿಎಸ್ ಸೇರಿದರೆ ಆಶ್ಚರ್ಯಪಡಬೇಕಿಲ್ಲ. ಮೇಲಾಗಿ, ಅವರು ಮೊದಲಿನಂದಲೂ ಕಾಂಗ್ರೆಸ್ ಪಕ್ಷದಲ್ಲಿದ್ದವರು. ಅವರಿಗೆ ಬಿಜೆಪಿ ಪಕ್ಷದ ಗರ್ಭಗುಡಿ ಸಂಸ್ಕೃತಿ ಒಗ್ಗಲ್ಲ ಅಂತ ಅನ್ನಿಸಿದೆ: ಅಮರೇಗೌಡ

ಬಿಜೆಪಿ ಗರ್ಭಗುಡಿಯಲ್ಲಿ ರಮೇಶ್​ ಜಾರಕಿಹೊಳಿ ಇರೋದು ಕಷ್ಟ; ಕಾಂಗ್ರೆಸ್​ನಲ್ಲಿ 8-10 ಜನರಿಗೆ ಮುಖ್ಯಮಂತ್ರಿ ಆಗೋ ಯೋಗ್ಯತೆ ಇದೆ: ಕೈ ಶಾಸಕ
ರಮೇಶ್ ಜಾರಕಿಹೊಳಿ, ಅಮರೇಗೌಡ
TV9 Web
| Edited By: |

Updated on: Jun 26, 2021 | 8:16 AM

Share

ಕೊಪ್ಪಳ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಿಜೆಪಿಯ ಗರ್ಭಗುಡಿ ಸಂಸ್ಕೃತಿ ಒಗ್ಗೋದಿಲ್ಲ ಅನ್ನಿಸುತ್ತೆ. ಹೀಗಾಗಿ ಅವರು ಮುಂದಿನ ದಿನಗಳಲ್ಲಿ ಕಾಂಗ್ರೆಸ್​ಗೆ ವಾಪಾಸ್ಸಾಗಬಹುದು. ಇಲ್ಲ ಜೆಡಿಎಸ್​ ಪಕ್ಷವನ್ನಾದರೂ ಸೇರಬಹುದು ಎಂದು ಕಾಂಗ್ರೆಸ್​ ಶಾಸಕ ಅಮರೇಗೌಡ ಕೊಪ್ಪಳದಲ್ಲಿ ಅಚ್ಚರಿಕೆಯ ಹೇಳಿಕೆ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಹಾಗೂ ಅವರ ಸ್ನೇಹಿತರು ಬಾಂಬೆಗೆ ಹೋಗಿದ್ದರು. ಅವರಿಗೆ ಬಿಜೆಪಿಯ ವಾತಾವರಣ ಹಿಡಿಸುತ್ತಿಲ್ಲ ಅನ್ನಿಸುತ್ತೆ. ಹೀಗಾಗಿ ಅವರು ಬೇರೆ ಪಕ್ಷಕ್ಕೆ ಹೋದರೂ ಅಚ್ಚರಿಯಿಲ್ಲ ಎಂದಿದ್ದಾರೆ.

ರಮೇಶ್ ಜಾರಕಿಹೊಳಿ ಮುಂದಿನ‌ ದಿನದಲ್ಲಿ ಕಾಂಗ್ರೆಸ್, ಜೆಡಿಎಸ್ ಸೇರಿದರೆ ಆಶ್ಚರ್ಯಪಡಬೇಕಿಲ್ಲ. ಮೇಲಾಗಿ, ಅವರು ಮೊದಲಿನಂದಲೂ ಕಾಂಗ್ರೆಸ್ ಪಕ್ಷದಲ್ಲಿದ್ದವರು. ಅವರಿಗೆ ಬಿಜೆಪಿ ಪಕ್ಷದ ಗರ್ಭಗುಡಿ ಸಂಸ್ಕೃತಿ ಒಗ್ಗಲ್ಲ ಅಂತ ಅನ್ನಿಸಿದೆ. ಒಂದುವೇಳೆ ಕಾಂಗ್ರೆಸ್​ಗೆ ಬರ್ತೀನಿ ಎಂದರೆ ಪರಿಶೀಲನೆ ಮಾಡಲಾಗುವುದು. ರಾಜಕಾರಣ ಅಂದರೆ ನಿಂತ ನೀರಲ್ಲ. ಸಮಯ ಬಂದ ಹಾಗೆ ಬದಲಾಗೋದು ಸಹಜ. ಇವತ್ತು ಯಾರು ಯಾವ ಪಕ್ಷದಲ್ಲಿ ಇರ್ತಾರೆ ಅನ್ನೋದು ಗಂಭೀರವಾದ ವಿಷಯ ಅಲ್ಲ. ಆದರೆ ಇದು ಇತ್ತೀಚಿನ ದಿನಗಳಲ್ಲಿ ಬೇಸರ ತರಿಸಿರುವುದು ನಿಜ ಎಂದು ಅಮರೇಗೌಡ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿಯವರೇ ಯಡಿಯೂರಪ್ಪ ಅವರನ್ನ ಮುಖ್ಯಮಂತ್ರಿ ಮಾಡಿಸಿದ್ದು. ಹೀಗಾಗಿ ಅವರೇ ಯಡಿಯೂರಪ್ಪರನ್ನ ಮುಖ್ಯಮಂತ್ರಿ ಪಟ್ಟದಿಂದ ತೆಗೀತಾರೆ ಎಂದು ನನಗೆ ಅನ್ನಿಸೋದಿಲ್ಲ. ಒಂದು ವಿಚಾರವಂತೂ ಸ್ಪಷ್ಟ, ಬಿಜೆಪಿ‌ ಸರ್ಕಾರ ಕರ್ನಾಟಕದಲ್ಲಿ ಉಳಿಯಬೇಕಾದರೆ ಯಡಿಯೂರಪ್ಪ ಕಾರಣ. ಅದನ್ನು ನಾನು ಮತ್ತೆ ಮತ್ತೆ ಹೇಳುತ್ತೇನೆ. ನೋ ಯಡಿಯೂರಪ್ಪ ನೋ ಬಿಜೆಪಿ ಇನ್ ಕರ್ನಾಟಕ ಎಂದು ಹೇಳಿರುವ ಅಮರೇಗೌಡ ಯಡಿಯೂರಪ್ಪ ಇಲ್ಲದೇ ಬಿಜೆಪಿಗೆ ಕರ್ನಾಟಕದಲ್ಲಿ ಸ್ತಿತ್ವ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಜಟಾಪಟಿ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಜಗಳ ನಡೆದಿಲ್ಲ. ನಮ್ಮಲ್ಲಿ‌ 8 ರಿಂದ 10 ಜನರಿಗೆ ಮುಖ್ಯಮಂತ್ರಿ ಆಗೋ ಯೋಗ್ಯತೆ ಇದೆ. ಅವರವರ ಅಭಿಮಾನಿಗಳು ಅವರ ಹೆಸರು ಹೇಳಿದ್ದಾರೆ. ಅದೇನು ಅಪರಾಧ ಅಲ್ಲ ಎಂದಿದ್ದಾರೆ. ಅಲ್ಲದೇ, ನಾವು ಎಚ್ಚರಿಕೆಯಿಂದ ಇರಬೇಕು, ಈಗಲೇ ಬಿಜೆಪಿ ಅಹಾರ ಆಗೋದು ಬೇಡ ಎಂದೂ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Ramesh Jarkiholi: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಬಿಟ್ಟಿದ್ದೇನೆ; ಕಾಂಗ್ರೆಸ್​ಗೂ ವಾಪಸ್ಸಾಗಲ್ಲ: ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟನೆ

ನನಗಿಂತಲೂ 10 ಪಟ್ಟು ಪ್ರಬಲ ಹುಲಿಗಳು ನನ್ನ ಕುಟುಂಬದಲ್ಲಿದ್ದಾರೆ: ಶಾಸಕ ರಮೇಶ್ ಜಾರಕಿಹೊಳಿ ವ್ಯಾಖ್ಯಾನ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ