AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​

ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್​ ಇದೀಗ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ.

ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತವಾಗಿ ಹಾಜರಾಗಿ ಹೇಳಿಕೆ ನೀಡಿದ ‘ಸಿಡಿ’ ಯುವತಿಯ ಬಾಯ್​ಫ್ರೆಂಡ್​
ಪ್ರಾತಿನಿಧಿಕ ಚಿತ್ರ
Skanda
|

Updated on:Mar 20, 2021 | 1:51 PM

Share

ಬೆಂಗಳೂರು: ಮಾಜಿ ಸಚಿವ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಯುವತಿಯ ಬಾಯ್​ಫ್ರೆಂಡ್ ಆಕಾಶ್​ ಇದೀಗ ಬೆಂಗಳೂರಿನ ಮ್ಯಾಜಿಸ್ಟ್ರೇಟ್​ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸ್ವಯಂಪ್ರೇರಿತರಾಗಿ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸೆಕ್ಷನ್ 164 ಸಿಆರ್‌ಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಈತನ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗುತ್ತದೆ ಮತ್ತು ಚಾರ್ಜ್‌ಶೀಟ್ ಸಲ್ಲಿಕೆ ಬಳಿಕೆ ಕೋರ್ಟ್‌ಗೆ ಕಳಿಸಲಾಗುತ್ತದೆ ಎನ್ನಲಾಗಿದೆ.

ನ್ಯಾಯಾಧೀಶರ ಮುಂದೆಯೇ ಹೇಳಿಕೆ ನೀಡಿರುವ ಆಕಾಶ್​, ಸ್ವಯಂ ಪ್ರೇರಿತವಾಗಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಗಿ ತಿಳಿದುಬಂದಿದೆ. ಆತ ತನ್ನ ಮಾತನ್ನು ಪದೇಪದೇ ಬದಲಿಸಬಾರದೆಂಬ ಕಾರಣಕ್ಕೆ ಈಗ ನೀಡಿರುವ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿಡಲಾಗಿದೆ. ಒಂದುವೇಳೆ ಈ ಹೇಳಿಕೆ ಆರೋಪಿಯದ್ದಾಗಿದ್ದರೆ ತಪ್ಪೊಪ್ಪಿಗೆ ಎಂದೂ ಮತ್ತು ಸಾಕ್ಷಿಯದ್ದಾಗಿದ್ದರೆ ಸ್ವಯಂ ಹೇಳಿಕೆ ಎಂದೂ ಪರಿಗಣನೆ ಮಾಡಬಹುದಾಗಿದೆ.

ಇದನ್ನೂ ಓದಿ: ಸಿಡಿ ಆರೋಪಿ ಶ್ರವಣ್​ ಸಹೋದರ ನಾಪತ್ತೆ ಪ್ರಕರಣ: ಹೇಬಿಯಸ್​ ಕಾರ್ಪಸ್​ ಅರ್ಜಿ ಸುಖಾಂತ್ಯ 

ನಂಗೇನೂ ಗೊತ್ತಿಲ್ಲ, ಸಿಡಿ ನಂದಲ್ಲ, ಯುವತಿ ಯಾರು ಅಂತಾನೂ ಗೊತ್ತಿಲ್ಲ, ನೀವೇ ತನಿಖೆ ಮಾಡಿ: ಎಸ್​ಐಟಿ ತನಿಖೆಗೆ ರಮೇಶ್​ ಜಾರಕಿಹೊಳಿ ಉತ್ತರ

Published On - 1:45 pm, Sat, 20 March 21

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು