AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್

ಆಕೆ ತನಗೆ ರಮೇಶ್ ಜಾರಕಿಹೊಳಿಯಿಂದ ತನಗೆ ತೊಂದರೆ ಆಗಿರುವುದಾಗಿ ಹೇಳಿದ್ದ ಕಾರಣ ಸಾಕ್ಷಿ ಇದ್ದರೆ ಕಳುಹಿಸಿ ಎಂದಿದ್ದೆ. ಅದಾದ ನಂತರ ಆಕೆ ನನ್ನಿಂದ ಸಹಾಯ ಕೇಳಿದ್ದರು. ಆ ಸಂದರ್ಭದಲ್ಲಿ ನಾನು ತಾಯಿಗೆ ಆರೋಗ್ಯ ಸರಿಯಿಲ್ಲ, ಸದ್ಯಕ್ಕೆ ನನ್ನ ಮಗುವಿಗೆ ನಾಮಕರಣ ಇದೆ, ಬನ್ನಿ ಎಂದು ಕರೆದಿದ್ದೆ. ಆಕೆ ನಾಮಕರಣಕ್ಕೆ ಬಂದಿದ್ದರು.

ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್
ಆರೋಪಿ ನರೇಶ್​
Follow us
Skanda
| Updated By: ಆಯೇಷಾ ಬಾನು

Updated on:Mar 18, 2021 | 2:40 PM

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಗುರುತಿಸಲಾಗಿರುವ ಮಾಜಿ ಪತ್ರಕರ್ತ ನರೇಶ್​, ಈ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ. ಇದರಲ್ಲಿ ನನ್ನ ಹೆಸರನ್ನು ವ್ಯವಸ್ಥಿತವಾಗಿ ಸೇರಿಸಲಾಗಿದೆ ಎಂದು ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಪತ್ರಕರ್ತನಾಗಿದ್ದ ಕಾರಣ ಯುವತಿಯ ಪರಿಚಯ ಆಗಿತ್ತು, ಆಕೆ ತನಗೆ ರಮೇಶ್ ಜಾರಕಿಹೊಳಿಯಿಂದ ತನಗೆ ತೊಂದರೆ ಆಗಿರುವುದಾಗಿ ಹೇಳಿದ್ದ ಕಾರಣ ಸಾಕ್ಷಿ ಇದ್ದರೆ ಕಳುಹಿಸಿ ಎಂದಿದ್ದೆ. ಅದಾದ ನಂತರ ಆಕೆ ನನ್ನಿಂದ ಸಹಾಯ ಕೇಳಿದ್ದರು. ಆ ಸಂದರ್ಭದಲ್ಲಿ ನಾನು ತಾಯಿಗೆ ಆರೋಗ್ಯ ಸರಿಯಿಲ್ಲ, ಸದ್ಯಕ್ಕೆ ನನ್ನ ಮಗುವಿಗೆ ನಾಮಕರಣ ಇದೆ, ಬನ್ನಿ ಎಂದು ಕರೆದಿದ್ದೆ. ಆಕೆ ನಾಮಕರಣಕ್ಕೆ ಬಂದಿದ್ದರು, ಜೊತೆಗೆ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಸೇರಿ ಎಲ್ಲಾ ಪಕ್ಷದವರೂ ಬಂದಿದ್ದರು ಎಂದು ಹೇಳಿದ್ದಾರೆ.

ನಾನು ಯಾರಿಂದಲೂ ಹಣ ಪಡೆದಿಲ್ಲ. ಅಷ್ಟು ಹಣ ನನ್ನ ಬಳಿ ಇಲ್ಲ 15 ಸಾವಿರ EMI ಕಟ್ಟುತ್ತಿದ್ದೇನೆ. ಜೀವನದಲ್ಲಿ ಈವರೆಗೆ ಇಂತಹ ಯಾವುದೇ ಆರೋಪ ಇಲ್ಲ. ನಾನು ಪೊಲೀಸರ ವಿಚಾರಣೆಗೆ ಹಾಜರಾಗುತ್ತಿದ್ದೆ. ಆದರೆ, ಬಂದರೆ ಏನಾಗುತ್ತೆ ಅನ್ನೋದು ಗೊತ್ತಿದೆ. ಇನ್ನು 5-10 ದಿನಗಳೊಳಗೆ ಬಂದು ವಿಚಾರಣೆಗೆ ಹಾಜರಾಗ್ತೇನೆ. ಸಿಡಿ ವಿಚಾರ ಹೇಗೆ ಹೊರಗೆ ಬಂತು ಅನ್ನೋದು ನನಗೆ ಗೊತ್ತಿಲ್ಲ. ಆದರೆ, ಇದನ್ನೇ ಇಟ್ಟುಕೊಂಡು ನನ್ನ ಕುಟುಂಬಕ್ಕೆ ಕಿರುಕುಳ ಮಾಡಲಾಗುತ್ತಿದೆ. ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ. ನಾನು ವಿಚಾರಣೆ ವೇಳೆ ಎಲ್ಲವನ್ನೂ ಹೇಳುವೆ ಎಂದು ನರೇಶ್​ ವಿಡಿಯೋದ ಮೂಲಕ ತಿಳಿಸಿದ್ದಾರೆ.

Published On - 2:17 pm, Thu, 18 March 21

ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ