AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್

ಆಕೆ ತನಗೆ ರಮೇಶ್ ಜಾರಕಿಹೊಳಿಯಿಂದ ತನಗೆ ತೊಂದರೆ ಆಗಿರುವುದಾಗಿ ಹೇಳಿದ್ದ ಕಾರಣ ಸಾಕ್ಷಿ ಇದ್ದರೆ ಕಳುಹಿಸಿ ಎಂದಿದ್ದೆ. ಅದಾದ ನಂತರ ಆಕೆ ನನ್ನಿಂದ ಸಹಾಯ ಕೇಳಿದ್ದರು. ಆ ಸಂದರ್ಭದಲ್ಲಿ ನಾನು ತಾಯಿಗೆ ಆರೋಗ್ಯ ಸರಿಯಿಲ್ಲ, ಸದ್ಯಕ್ಕೆ ನನ್ನ ಮಗುವಿಗೆ ನಾಮಕರಣ ಇದೆ, ಬನ್ನಿ ಎಂದು ಕರೆದಿದ್ದೆ. ಆಕೆ ನಾಮಕರಣಕ್ಕೆ ಬಂದಿದ್ದರು.

ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್
ಆರೋಪಿ ನರೇಶ್​
Skanda
| Edited By: |

Updated on:Mar 18, 2021 | 2:40 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಗುರುತಿಸಲಾಗಿರುವ ಮಾಜಿ ಪತ್ರಕರ್ತ ನರೇಶ್​, ಈ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ. ಇದರಲ್ಲಿ ನನ್ನ ಹೆಸರನ್ನು ವ್ಯವಸ್ಥಿತವಾಗಿ ಸೇರಿಸಲಾಗಿದೆ ಎಂದು ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಪತ್ರಕರ್ತನಾಗಿದ್ದ ಕಾರಣ ಯುವತಿಯ ಪರಿಚಯ ಆಗಿತ್ತು, ಆಕೆ ತನಗೆ ರಮೇಶ್ ಜಾರಕಿಹೊಳಿಯಿಂದ ತನಗೆ ತೊಂದರೆ ಆಗಿರುವುದಾಗಿ ಹೇಳಿದ್ದ ಕಾರಣ ಸಾಕ್ಷಿ ಇದ್ದರೆ ಕಳುಹಿಸಿ ಎಂದಿದ್ದೆ. ಅದಾದ ನಂತರ ಆಕೆ ನನ್ನಿಂದ ಸಹಾಯ ಕೇಳಿದ್ದರು. ಆ ಸಂದರ್ಭದಲ್ಲಿ ನಾನು ತಾಯಿಗೆ ಆರೋಗ್ಯ ಸರಿಯಿಲ್ಲ, ಸದ್ಯಕ್ಕೆ ನನ್ನ ಮಗುವಿಗೆ ನಾಮಕರಣ ಇದೆ, ಬನ್ನಿ ಎಂದು ಕರೆದಿದ್ದೆ. ಆಕೆ ನಾಮಕರಣಕ್ಕೆ ಬಂದಿದ್ದರು, ಜೊತೆಗೆ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಸೇರಿ ಎಲ್ಲಾ ಪಕ್ಷದವರೂ ಬಂದಿದ್ದರು ಎಂದು ಹೇಳಿದ್ದಾರೆ.

ನಾನು ಯಾರಿಂದಲೂ ಹಣ ಪಡೆದಿಲ್ಲ. ಅಷ್ಟು ಹಣ ನನ್ನ ಬಳಿ ಇಲ್ಲ 15 ಸಾವಿರ EMI ಕಟ್ಟುತ್ತಿದ್ದೇನೆ. ಜೀವನದಲ್ಲಿ ಈವರೆಗೆ ಇಂತಹ ಯಾವುದೇ ಆರೋಪ ಇಲ್ಲ. ನಾನು ಪೊಲೀಸರ ವಿಚಾರಣೆಗೆ ಹಾಜರಾಗುತ್ತಿದ್ದೆ. ಆದರೆ, ಬಂದರೆ ಏನಾಗುತ್ತೆ ಅನ್ನೋದು ಗೊತ್ತಿದೆ. ಇನ್ನು 5-10 ದಿನಗಳೊಳಗೆ ಬಂದು ವಿಚಾರಣೆಗೆ ಹಾಜರಾಗ್ತೇನೆ. ಸಿಡಿ ವಿಚಾರ ಹೇಗೆ ಹೊರಗೆ ಬಂತು ಅನ್ನೋದು ನನಗೆ ಗೊತ್ತಿಲ್ಲ. ಆದರೆ, ಇದನ್ನೇ ಇಟ್ಟುಕೊಂಡು ನನ್ನ ಕುಟುಂಬಕ್ಕೆ ಕಿರುಕುಳ ಮಾಡಲಾಗುತ್ತಿದೆ. ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ. ನಾನು ವಿಚಾರಣೆ ವೇಳೆ ಎಲ್ಲವನ್ನೂ ಹೇಳುವೆ ಎಂದು ನರೇಶ್​ ವಿಡಿಯೋದ ಮೂಲಕ ತಿಳಿಸಿದ್ದಾರೆ.

Published On - 2:17 pm, Thu, 18 March 21

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?