AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವರು ನನಗೆ ₹18 ಲಕ್ಷ ಮೌಲ್ಯದ ಆಭರಣ, ಮೊಬೈಲ್​ ಹಾಗೂ ಎರಡು ಬ್ಯಾಗ್​ ಬಟ್ಟೆ ಕೊಡಿಸಿದ್ದರು: ಸಂತ್ರಸ್ತ ಯುವತಿ

ಮಾಜಿ ಸಚಿವರಿಂದ ಪಡೆದ ₹18 ಲಕ್ಷ ಮೌಲ್ಯದ ಜ್ಯುವೆಲ್ಲರಿ ಗಿಫ್ಟ್​ನ ಬಿಲ್​ ನೀಡಿರುವ ಸಂತ್ರಸ್ತ ಯುವತಿ ಅದನ್ನು ಆರ್​.ಟಿ.ನಗರದ ಶಾಪ್​ ಒಂದರಲ್ಲಿ ಮಾಜಿ ಸಚಿವರೇ ಕೊಡಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಎರಡು ಬ್ಯಾಗ್ ಬಟ್ಟೆಯನ್ನೂ ಶಾಪಿಂಗ್ ಮಾಡಿಸಿದ್ದಾರೆ, ಮೊಬೈಲ್​ ಕೊಡಿಸಿದ್ದಾರೆ ಎಂದು ತನಿಖಾಧಿಕಾರಿಗಳ ಬಳಿ ಹೇಳಿದ್ದಾರೆ.

ಮಾಜಿ ಸಚಿವರು ನನಗೆ ₹18 ಲಕ್ಷ ಮೌಲ್ಯದ ಆಭರಣ, ಮೊಬೈಲ್​ ಹಾಗೂ ಎರಡು ಬ್ಯಾಗ್​ ಬಟ್ಟೆ ಕೊಡಿಸಿದ್ದರು: ಸಂತ್ರಸ್ತ ಯುವತಿ
ಸಿಡಿಯಲ್ಲಿರುವ ಸಂತ್ರಸ್ತ ಯುವತಿ
Skanda
| Edited By: |

Updated on: Apr 04, 2021 | 9:19 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಹಿರಂಗ ಪ್ರಕರಣದಲ್ಲಿ ಎಸ್​ಐಟಿ ತನಿಖೆ ಎದುರಿಸುತ್ತಿರುವ ಸಂತ್ರಸ್ತ ಯುವತಿ ಮಾಜಿ ಸಚಿವರು ಕೊಡಿಸಿದ ಉಡುಗೊರೆಗಳ ಬಗ್ಗೆ ಬಾಯಿಬಿಟ್ಟಿದ್ದಾರೆ. ಈ ಬಗ್ಗೆ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿರುವ ಸಂತ್ರಸ್ತೆ, ತನಗೆ ನೀಡಲಾದ ಮೊಬೈಲ್​, ಆಭರಣ, ಬಟ್ಟೆಗಳಿಗೆ ಸಂಬಂಧಿಸಿದ ಬಿಲ್​ ಹಾಗೂ ಅವುಗಳನ್ನು ಎಲ್ಲಿ ಖರೀದಿಸಲಾಯಿತು ಎಂಬ ವಿವರವನ್ನು ತಿಳಿಸಿದ್ದಾರೆ ಎನ್ನಲಾಗಿದೆ.

ಮಾಜಿ ಸಚಿವರಿಂದ ಪಡೆದ ₹18 ಲಕ್ಷ ಮೌಲ್ಯದ ಜ್ಯುವೆಲ್ಲರಿ ಗಿಫ್ಟ್​ನ ಬಿಲ್​ ನೀಡಿರುವ ಸಂತ್ರಸ್ತ ಯುವತಿ ಅದನ್ನು ಆರ್​.ಟಿ.ನಗರದ ಶಾಪ್​ ಒಂದರಲ್ಲಿ ಮಾಜಿ ಸಚಿವರೇ ಕೊಡಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಎರಡು ಬ್ಯಾಗ್ ಬಟ್ಟೆಯನ್ನೂ ಶಾಪಿಂಗ್ ಮಾಡಿಸಿದ್ದಾರೆ, ಮೊಬೈಲ್​ ಕೊಡಿಸಿದ್ದಾರೆ ಎಂದು ತನಿಖಾಧಿಕಾರಿಗಳ ಬಳಿ ಹೇಳಿದ್ದಾರೆ. ಶಾಪಿಂಗ್​ಗೆ ಸಂಬಂಧಿಸಿದಂತೆ ಬಿಲ್​ ಹಾಗೂ ಶಾಪ್​ ವಿವರವನ್ನು ಯುವತಿ ಹೇಳಿದ್ದಾರೆ ಎನ್ನಲಾಗುತ್ತಿದೆ.

ಇನ್ನು ನಿನ್ನೆ ನಡೆದ ತನಿಖೆಯಲ್ಲಿ ಸಂತ್ರಸ್ತ ಯುವತಿಯ ಹಣದ ಮೂಲದ ಬಗ್ಗೆ ಕೆದಕಿದ್ದ ಎಸ್​ಐಟಿ ಅಧಿಕಾರಿಗಳು, ನಿಮಗೆ ಯಾರು ಹಣ ನೀಡುತ್ತಿದ್ದಾರೆ ಎಂದು ನೇರವಾಗಿ ಪ್ರಶ್ನೆ ಇಟ್ಟಿದ್ದರು. ಬೆಂಗಳೂರಿನಿಂದ ಹೊರಟ ಬಳಿಕ ಬೇರೆ ಬೇರೆ ಕಡೆಗಳಲ್ಲಿ ಉಳಿದುಕೊಳ್ಳಲು ಯಾರು ಸಹಾಯ ಮಾಡಿದರು? ಅಷ್ಟು ದಿನ ಅಜ್ಙಾತ ಸ್ಥಳದಲ್ಲಿ ಉಳಿದುಕೊಂಡಿದ್ದೇಕೆ? ಇಷ್ಟು ದಿನ ಯಾಕೆ ನೀವು ಎಲ್ಲಿಯೂ‌ ಕಾಣಿಸಿಕೊಂಡಿಲ್ಲ? ಕೋರ್ಟ್ ಹಾಲ್ ಬಳಿ 164 ಹೇಳಿಕೆ ದಾಖಲು ಮಾಡಿದ್ದ ದಿನ‌ ಕರೆತಂದವರು ಯಾರು? ಎನ್ನುವುದನ್ನೂ ಕೇಳಿದ್ದಾರೆ. ನಿಮ್ಮ ಪೋಷಕರೇ ನಮ್ಮ ಮಗಳನ್ನು ಕಿಡ್ನಾಪ್ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ. ಅಸಲಿ ಸಂಗತಿ ಏನು? ಒತ್ತಡಕ್ಕೆ ಒಳಗಾಗದೇ ಏನಾಗಿದೆ ಅನ್ನೋ ನಿಜ ಸಂಗತಿ ಹೇಳಿ. ನೀವು ಕೇವಲ ವಿಡಿಯೋ ಮಾತ್ರ ರೆಕಾರ್ಡ್ ಮಾಡ್ತಾ ಇದ್ರಿ. ಹಾಗಾದರೆ, ರೆಕಾರ್ಡ್ ಮಾಡ್ತಾ ಇದ್ದಿದ್ದು ಯಾರು? ನೀವೀಗ ದೆಹಲಿಯಿಂದ ಬಂದಿರೋದಾಗಿ ಮಾಹಿತಿ ಇದೆ. ದೆಹಲಿಗೆ ಹೋಗಿದ್ದೇಕೆ? ಸಿಡಿ ಬಿಡುಗಡೆ ಬಳಿಕ ಎಲ್ಲೆಲ್ಲಿ ಸುತ್ತಾಡಿದ್ರಿ? ನಿಮ್ಮ ಜೊತೆಯಲ್ಲಿ ಇದ್ದವರು ಯಾರು? ಎಂಬ ಸರಣಿ ಪ್ರಶ್ನೆಗಳನ್ನೂ ಯುವತಿಯ ಎದುರು ಇಟ್ಟಿದ್ದರು.

ಇದನ್ನೂ ಓದಿ: ಪೂರ್ವಯೋಜಿತ ರಾಜಕೀಯ ಷಡ್ಯಂತ್ರ ಎಂದು ನಿರೂಪಿಸಲು ಬಲವಾದ ಸಾಕ್ಷ್ಯದ ಬೇಟೆಯಲ್ಲಿ ರಮೇಶ್​ ಜಾರಕಿಹೊಳಿ? 

ಸುದ್ದಿ ವಿಶ್ಲೇಷಣೆ | ರಮೇಶ್​ ಜಾರಕಿಹೊಳಿ ಸಿಡಿ ಕೇಸ್​, ಕಾಂಗ್ರೆಸ್​ ಶಾಸಕರನ್ನು ವಿಚಲಿತಗೊಳಿಸಿದ ಡಿ.ಕೆ. ಶಿವಕುಮಾರ್​

(Ramesh Jarkiholi Obscene CD Case Victim says Ex minister has gifted Rs 18 lakh valued jewellery cloths and mobile)

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು