AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವರು ನನಗೆ ₹18 ಲಕ್ಷ ಮೌಲ್ಯದ ಆಭರಣ, ಮೊಬೈಲ್​ ಹಾಗೂ ಎರಡು ಬ್ಯಾಗ್​ ಬಟ್ಟೆ ಕೊಡಿಸಿದ್ದರು: ಸಂತ್ರಸ್ತ ಯುವತಿ

ಮಾಜಿ ಸಚಿವರಿಂದ ಪಡೆದ ₹18 ಲಕ್ಷ ಮೌಲ್ಯದ ಜ್ಯುವೆಲ್ಲರಿ ಗಿಫ್ಟ್​ನ ಬಿಲ್​ ನೀಡಿರುವ ಸಂತ್ರಸ್ತ ಯುವತಿ ಅದನ್ನು ಆರ್​.ಟಿ.ನಗರದ ಶಾಪ್​ ಒಂದರಲ್ಲಿ ಮಾಜಿ ಸಚಿವರೇ ಕೊಡಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಎರಡು ಬ್ಯಾಗ್ ಬಟ್ಟೆಯನ್ನೂ ಶಾಪಿಂಗ್ ಮಾಡಿಸಿದ್ದಾರೆ, ಮೊಬೈಲ್​ ಕೊಡಿಸಿದ್ದಾರೆ ಎಂದು ತನಿಖಾಧಿಕಾರಿಗಳ ಬಳಿ ಹೇಳಿದ್ದಾರೆ.

ಮಾಜಿ ಸಚಿವರು ನನಗೆ ₹18 ಲಕ್ಷ ಮೌಲ್ಯದ ಆಭರಣ, ಮೊಬೈಲ್​ ಹಾಗೂ ಎರಡು ಬ್ಯಾಗ್​ ಬಟ್ಟೆ ಕೊಡಿಸಿದ್ದರು: ಸಂತ್ರಸ್ತ ಯುವತಿ
ಸಿಡಿಯಲ್ಲಿರುವ ಸಂತ್ರಸ್ತ ಯುವತಿ
Follow us
Skanda
| Updated By: preethi shettigar

Updated on: Apr 04, 2021 | 9:19 AM

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಬಹಿರಂಗ ಪ್ರಕರಣದಲ್ಲಿ ಎಸ್​ಐಟಿ ತನಿಖೆ ಎದುರಿಸುತ್ತಿರುವ ಸಂತ್ರಸ್ತ ಯುವತಿ ಮಾಜಿ ಸಚಿವರು ಕೊಡಿಸಿದ ಉಡುಗೊರೆಗಳ ಬಗ್ಗೆ ಬಾಯಿಬಿಟ್ಟಿದ್ದಾರೆ. ಈ ಬಗ್ಗೆ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿರುವ ಸಂತ್ರಸ್ತೆ, ತನಗೆ ನೀಡಲಾದ ಮೊಬೈಲ್​, ಆಭರಣ, ಬಟ್ಟೆಗಳಿಗೆ ಸಂಬಂಧಿಸಿದ ಬಿಲ್​ ಹಾಗೂ ಅವುಗಳನ್ನು ಎಲ್ಲಿ ಖರೀದಿಸಲಾಯಿತು ಎಂಬ ವಿವರವನ್ನು ತಿಳಿಸಿದ್ದಾರೆ ಎನ್ನಲಾಗಿದೆ.

ಮಾಜಿ ಸಚಿವರಿಂದ ಪಡೆದ ₹18 ಲಕ್ಷ ಮೌಲ್ಯದ ಜ್ಯುವೆಲ್ಲರಿ ಗಿಫ್ಟ್​ನ ಬಿಲ್​ ನೀಡಿರುವ ಸಂತ್ರಸ್ತ ಯುವತಿ ಅದನ್ನು ಆರ್​.ಟಿ.ನಗರದ ಶಾಪ್​ ಒಂದರಲ್ಲಿ ಮಾಜಿ ಸಚಿವರೇ ಕೊಡಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಎರಡು ಬ್ಯಾಗ್ ಬಟ್ಟೆಯನ್ನೂ ಶಾಪಿಂಗ್ ಮಾಡಿಸಿದ್ದಾರೆ, ಮೊಬೈಲ್​ ಕೊಡಿಸಿದ್ದಾರೆ ಎಂದು ತನಿಖಾಧಿಕಾರಿಗಳ ಬಳಿ ಹೇಳಿದ್ದಾರೆ. ಶಾಪಿಂಗ್​ಗೆ ಸಂಬಂಧಿಸಿದಂತೆ ಬಿಲ್​ ಹಾಗೂ ಶಾಪ್​ ವಿವರವನ್ನು ಯುವತಿ ಹೇಳಿದ್ದಾರೆ ಎನ್ನಲಾಗುತ್ತಿದೆ.

ಇನ್ನು ನಿನ್ನೆ ನಡೆದ ತನಿಖೆಯಲ್ಲಿ ಸಂತ್ರಸ್ತ ಯುವತಿಯ ಹಣದ ಮೂಲದ ಬಗ್ಗೆ ಕೆದಕಿದ್ದ ಎಸ್​ಐಟಿ ಅಧಿಕಾರಿಗಳು, ನಿಮಗೆ ಯಾರು ಹಣ ನೀಡುತ್ತಿದ್ದಾರೆ ಎಂದು ನೇರವಾಗಿ ಪ್ರಶ್ನೆ ಇಟ್ಟಿದ್ದರು. ಬೆಂಗಳೂರಿನಿಂದ ಹೊರಟ ಬಳಿಕ ಬೇರೆ ಬೇರೆ ಕಡೆಗಳಲ್ಲಿ ಉಳಿದುಕೊಳ್ಳಲು ಯಾರು ಸಹಾಯ ಮಾಡಿದರು? ಅಷ್ಟು ದಿನ ಅಜ್ಙಾತ ಸ್ಥಳದಲ್ಲಿ ಉಳಿದುಕೊಂಡಿದ್ದೇಕೆ? ಇಷ್ಟು ದಿನ ಯಾಕೆ ನೀವು ಎಲ್ಲಿಯೂ‌ ಕಾಣಿಸಿಕೊಂಡಿಲ್ಲ? ಕೋರ್ಟ್ ಹಾಲ್ ಬಳಿ 164 ಹೇಳಿಕೆ ದಾಖಲು ಮಾಡಿದ್ದ ದಿನ‌ ಕರೆತಂದವರು ಯಾರು? ಎನ್ನುವುದನ್ನೂ ಕೇಳಿದ್ದಾರೆ. ನಿಮ್ಮ ಪೋಷಕರೇ ನಮ್ಮ ಮಗಳನ್ನು ಕಿಡ್ನಾಪ್ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ. ಅಸಲಿ ಸಂಗತಿ ಏನು? ಒತ್ತಡಕ್ಕೆ ಒಳಗಾಗದೇ ಏನಾಗಿದೆ ಅನ್ನೋ ನಿಜ ಸಂಗತಿ ಹೇಳಿ. ನೀವು ಕೇವಲ ವಿಡಿಯೋ ಮಾತ್ರ ರೆಕಾರ್ಡ್ ಮಾಡ್ತಾ ಇದ್ರಿ. ಹಾಗಾದರೆ, ರೆಕಾರ್ಡ್ ಮಾಡ್ತಾ ಇದ್ದಿದ್ದು ಯಾರು? ನೀವೀಗ ದೆಹಲಿಯಿಂದ ಬಂದಿರೋದಾಗಿ ಮಾಹಿತಿ ಇದೆ. ದೆಹಲಿಗೆ ಹೋಗಿದ್ದೇಕೆ? ಸಿಡಿ ಬಿಡುಗಡೆ ಬಳಿಕ ಎಲ್ಲೆಲ್ಲಿ ಸುತ್ತಾಡಿದ್ರಿ? ನಿಮ್ಮ ಜೊತೆಯಲ್ಲಿ ಇದ್ದವರು ಯಾರು? ಎಂಬ ಸರಣಿ ಪ್ರಶ್ನೆಗಳನ್ನೂ ಯುವತಿಯ ಎದುರು ಇಟ್ಟಿದ್ದರು.

ಇದನ್ನೂ ಓದಿ: ಪೂರ್ವಯೋಜಿತ ರಾಜಕೀಯ ಷಡ್ಯಂತ್ರ ಎಂದು ನಿರೂಪಿಸಲು ಬಲವಾದ ಸಾಕ್ಷ್ಯದ ಬೇಟೆಯಲ್ಲಿ ರಮೇಶ್​ ಜಾರಕಿಹೊಳಿ? 

ಸುದ್ದಿ ವಿಶ್ಲೇಷಣೆ | ರಮೇಶ್​ ಜಾರಕಿಹೊಳಿ ಸಿಡಿ ಕೇಸ್​, ಕಾಂಗ್ರೆಸ್​ ಶಾಸಕರನ್ನು ವಿಚಲಿತಗೊಳಿಸಿದ ಡಿ.ಕೆ. ಶಿವಕುಮಾರ್​

(Ramesh Jarkiholi Obscene CD Case Victim says Ex minister has gifted Rs 18 lakh valued jewellery cloths and mobile)

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ