AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರ ಮಾತನಾಡಿಸಬೇಕೆಂದು ಹಟ, ಬಿಕ್ಕಿಬಿಕ್ಕಿ ಅತ್ತ ಸಿಡಿ ಸಂತ್ರಸ್ತೆ: ಅನುಮತಿ ನೀಡಲ್ಲ ಎಂದ ಎಸ್​ಐಟಿ

ಯುವತಿಯ ಒತ್ತಾಯಕ್ಕೆ ಕಡೆಗೂ ಕೆಲ ಷರತ್ತುಗಳನ್ನು ವಿಧಿಸಿ ಅನುಮತಿ ನೀಡುವುದಾಗಿ ಹೇಳಿರುವ ಎಸ್​ಐಟಿ ಅಧಿಕಾರಿಗಳು, ಮಾನವೀಯತೆಯಿಂದ ನಿಮಗೆ ಅವಕಾಶ ಕೊಡುತ್ತೇವೆ. ಆದರೆ, ನಿಮ್ಮ ವಕೀಲರ ಮೂಲಕ ನಮಗೆ ಒಂದು ಮನವಿ ಪತ್ರ ಕೊಡಿ. ಮನವಿ ಪತ್ರ ಸಿಕ್ಕ ನಂತರ ನಾವೇ ನಿಮ್ಮ ಪೊಷಕರನ್ನ ಇಲ್ಲಿಗೆ ಕರೆಸುತ್ತೇವೆ ಎಂದು ಹೇಳಿದ್ದಾರೆ.

ಪೋಷಕರ ಮಾತನಾಡಿಸಬೇಕೆಂದು ಹಟ, ಬಿಕ್ಕಿಬಿಕ್ಕಿ ಅತ್ತ ಸಿಡಿ ಸಂತ್ರಸ್ತೆ: ಅನುಮತಿ ನೀಡಲ್ಲ ಎಂದ ಎಸ್​ಐಟಿ
ಸಂತ್ರಸ್ತ ಯುವತಿ
Skanda
| Edited By: |

Updated on: Apr 01, 2021 | 1:03 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಎಸ್​ಐಟಿ ವಿಚಾರಣೆ ವೇಳೆ ಸಿಡಿ ಸಂತ್ರಸ್ತೆ ಬಿಕ್ಕಿಬಿಕ್ಕಿ ಅತ್ತಿದ್ದಾರೆ ಎಂದು ತಿಳಿದುಬಂದಿದೆ. ಎಸ್​ಐಟಿ ಅಧಿಕಾರಿಗಳ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೇ ಪೋಷಕರನ್ನು ಮಾತನಾಡಿಸಬೇಕು ಎಂದು ಪಟ್ಟು ಹಿಡಿದಿರುವ ಯುವತಿ, ಪೋಷಕರ ಭೇಟಿಗೆ ಅನುಮತಿ ನೀಡುವಂತೆ ಅಧಿಕಾರಿಗಳ ಮುಂದೆ ಕಣ್ಣೀರಿಟ್ಟಿದ್ದಾರೆ.

ಆದರೆ, ಈ ವೇಳೆ ಸಂತ್ರಸ್ತೆಯನ್ನು ಸಮಾಧಾನ ಮಾಡಿರುವ ಎಸ್​ಐಟಿ ಅಧಿಕಾರಿಗಳು ಅನುಮತಿ ನೀಡಲಾಗುವುದಿಲ್ಲ ಎಂದು ಮನವೊಲಿಸುವ ಯತ್ನ ಮಾಡಿದ್ದಾರೆ. ನಾವು ಈಗ ನಿಮ್ಮ ಪೊಷಕರನ್ನ ಕರೆಸಿದರೆ ನಮ್ಮ ಮೇಲೆಯೇ ಆರೋಪ ಬರುತ್ತದೆ. ಪೊಷಕರನ್ನ ಕರೆಸಿ ಮನವೊಲಿಕೆಗೆ ಯತ್ನಿಸಿದ್ದಾರೆಂದು ಆರೋಪಿಸುತ್ತಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಭೇಟಿಯಾಗಲು ಅವಕಾಶ ಕೊಡುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಲೆತ್ನಿಸಿದರೂ ಯುವತಿ ತನ್ನ ಪಟ್ಟು ಸಡಲಿಸದೇ ಕಣ್ಣೀರಿಟ್ಟು ತಾಯಿಯೊಂದಿಗೆ ಮಾತನಾಡಲಾದರೂ ಅವಕಾಶ ಕೊಡುವಂತೆ ಕೇಳಿಕೊಂಡಿದ್ದಾರೆ.

ಯುವತಿಯ ಒತ್ತಾಯಕ್ಕೆ ಕಡೆಗೂ ಕೆಲ ಷರತ್ತುಗಳನ್ನು ವಿಧಿಸಿ ಅನುಮತಿ ನೀಡುವುದಾಗಿ ಹೇಳಿರುವ ಎಸ್​ಐಟಿ ಅಧಿಕಾರಿಗಳು, ಮಾನವೀಯತೆ ಯಿಂದ ನಿಮಗೆ ಅವಕಾಶ ಕೊಡುತ್ತೇವೆ. ಆದರೆ, ನಿಮ್ಮ ವಕೀಲರ ಮೂಲಕ ನಮಗೆ ಒಂದು ಮನವಿ ಪತ್ರ ಕೊಡಿ. ಮನವಿ ಪತ್ರ ಸಿಕ್ಕ ನಂತರ ನಾವೇ ನಿಮ್ಮ ಪೊಷಕರನ್ನ ಇಲ್ಲಿಗೆ ಕರೆಸುತ್ತೇವೆ ಎಂದು ತಿಳಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಸೂಕ್ತ ಸಮಯದಲ್ಲಿ ಇನ್ನುಳಿದ 9 ಆಡಿಯೋ ಸಾಕ್ಷ್ಯ ಬಿಡುಗಡೆ ಮಾಡ್ತೇವೆ; ಅದರಲ್ಲಿ ಶಿವಕುಮಾರ್​ ಹೆಸರೂ ಇದೆ -ಸಂತ್ರಸ್ತೆ ಸಹೋದರ

ಸಿಡಿ ಸಂತ್ರಸ್ತೆಯ ಭದ್ರತೆಗೆ ಪೊಲೀಸ್​ ಕಬ್ಬಡಿ ಟೀಂ ರೆಡಿ!

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್