AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Jarkiholi Press Meet | ನಾನು ಗಂಡಸು.. ಆ ಮಹಾನಾಯಕ ಗಾಂ.. ಅವನನ್ನು ಒದ್ದು ಒಳಗಾಕಿ -ರಮೇಶ್ ಜಾರಕಿಹೊಳಿ

ರಮೇಶ್​ ಜಾರಕಿಹೊಳಿ ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ನಿನ್ನೆ ಸಿಡಿ ಲೇಡಿಯ ಆಡಿಯೋ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಬಾಂಬ್​ ಸಿಡಿಸೋದಾಗಿ ಹೇಳದ್ದ ರಮೇಶ್​ ಜಾರಕಿಹೊಳಿ ತಾವು ನುಡಿದಂತೆ ಇಂದು ಮಾಧ್ಯಮಗೋಷ್ಠಿಗೆ ಮುಂದಾಗಿದ್ದಾರೆ.

Ramesh Jarkiholi Press Meet | ನಾನು ಗಂಡಸು.. ಆ ಮಹಾನಾಯಕ ಗಾಂ.. ಅವನನ್ನು ಒದ್ದು ಒಳಗಾಕಿ -ರಮೇಶ್ ಜಾರಕಿಹೊಳಿ
ನರೇಶ್, ಶ್ರವಣ್ ಪರ ಸಂತ್ರಸ್ತ ಯುವತಿ ಬ್ಯಾಟಿಂಗ್: ದೂರು ಕಾನೂನುಬಾಹಿರವೆಂದು ವಾದ, ರಮೇಶ್ ಜಾರಕಿಹೊಳಿಗೆ ನೋಟಿಸ್
KUSHAL V
|

Updated on:Mar 27, 2021 | 7:08 PM

Share

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯದ ಕೇಂದ್ರಬಿಂದುವಾಗಿರುವ ಸಿಡಿ ಪ್ರಕರಣದ ಕುರಿತು ಇಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಖುದ್ದಾಗಿ ಮತ್ತೊಂದು ಸುದ್ದಿಗೋಷ್ಠಿ ನಡೆಸಿದ್ದಾರೆ. ನಿನ್ನೆ ಸಿಡಿ ಲೇಡಿಯ ಆಡಿಯೋ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಬಾಂಬ್​ ಸಿಡಿಸೋದಾಗಿ ಹೇಳಿದ್ದ ರಮೇಶ್​ ಜಾರಕಿಹೊಳಿ ತಾವು ನುಡಿದಂತೆ ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಠಿ ನಡೆಸಿದ್ದಾರೆ.

ರಮೇಶ್​ ಜಾರಕಿಹೊಳಿ ಮಾಧ್ಯಮಗೋಷ್ಠಿ ಸಾರಾಂಶ ಇಲ್ಲಿದೆ: ನನ್ನ ಬಳಿ 11 ಸಾಕ್ಷ್ಯಗಳಿವೆ. ಮಹಾನಾಯಕ ಯಾರೆಂದು ಪೋಷಕರು ಬಹಿರಂಗಗೊಳ್ಸಿದ್ದಾರೆ. ಮಹಾನಾಯಕ ರಾಜಕೀಯದಲ್ಲಿರಲು ನಾಲಾಯಕ್​. ನಾನು ಗಂಡಸು, ಆ ಮಹಾನಾಯಕ ಓರ್ವ ಗಾಂ.. ಎಂದು ರಮೇಶ್​ ಜಾರಕಿಹೊಳಿ ಖಾರವಾಗಿ ಮಾತನಾಡಿದ್ದಾರೆ.

‘ನಮ್ಮ ಕುಟುಂಬದವರು ಯಾವ ಹುಡುಗಿಯನ್ನೂ ಮೂಸಿನೋಡಿಲ್ಲ’ ನಮ್ಮ ಕುಟುಂಬದವರು ಯಾವ ಹುಡುಗಿಯನ್ನೂ ಮೂಸಿನೋಡಿಲ್ಲ. ಡಿ.ಕೆ.ಶಿವಕುಮಾರ್​ ವಿರುದ್ಧ ನೇರ ಹೋರಾಟಕ್ಕೆ ಇಳಿಯುತ್ತೇವೆ. ಕನಕಪುರದಲ್ಲಿ ಅವನನ್ನು ಸೋಲಿಸಲು ಹೋರಾಟ ಮಾಡುವೆ. ಡಿ.ಕೆ.ಶಿವಕುಮಾರ್​​ ಬೆಳಗಾವಿಗೆ ಬಂದರೆ ಸ್ವಾಗತಿಸುತ್ತೇವೆ. ಬೆಳಗಾವಿಯಿಂದ ಮರ್ಯಾದೆಯಿಂದ ಕಳಿಸಿಕೊಡುತ್ತೇವೆ ಎಂದು ರಮೇಶ್​ ಜಾರಕಿಹೊಳಿ ಹೇಳಿದರು. ಬೆಳಗಾವಿಗೆ ಬಂದಾಗ ಅವರನ್ನು ಸುರಕ್ಷಿತವಾಗಿ ನೋಡಿಕೊಳ್ಳುತ್ತೇವೆ. ಯಾಕೆಂದರೆ ಬೆಳಗಾವಿ ನಮ್ಮೂರು, ಯಾವುದೇ ತೊಂದರೆಕೊಡಲ್ಲ ಎಂದು ರಮೇಶ್​ ಜಾರಕಿಹೊಳಿ ಹೇಳಿದ್ದಾರೆ.

RAMESH

‘ನಮ್ಮ ಕುಟುಂಬದವರು ಯಾವ ಹುಡುಗಿ ಮೂಸಿನೋಡಿಲ್ಲ’

‘ಯಾರು ತಪ್ಪುಮಾಡಿದ್ದರೋ ಅವರನ್ನು ಒದ್ದು ಒಳಗೆಹಾಕಬೇಕು’ ಬೆಳಗಾವಿ ಉಪಚುನಾವಣೆಯಲ್ಲಿ ಗೆಲ್ಲಲು ಹೋರಾಡುತ್ತೇನೆ. ತನು, ಮನ, ಧನ ವಿನಿಯೋಗಿಸಿ ಗೆಲ್ಲಲು ಹೋರಾಡುತ್ತೇವೆ ಎಂದು ರಮೇಶ್​ ಜಾರಕಿಹೊಳಿ ಹೇಳಿದರು. ಜೊತೆಗೆ, ಕನಕಪುರದಲ್ಲಿ ಡಿ.ಕೆ.ಶಿವಕುಮಾರ್​ ಸೋಲಿಸಲು ಹೋರಾಡುವೆ. ಪ್ರಕರಣದಲ್ಲಿ ಯಾರದ್ದೇ ತಪ್ಪಿದ್ದರೂ ಒದ್ದು ಒಳಹಾಕಬೇಕು. ಯುವತಿ, ನಾನು, ಡಿಕೆಶಿ ಯಾರೇ ತಪ್ಪಿತಸ್ಥರಿದ್ರೂ ಒಳಗೆ ಹಾಕಿ. ಯಾರು ತಪ್ಪುಮಾಡಿದ್ದರೋ ಅವರನ್ನು ಒದ್ದು ಒಳಗೆಹಾಕಬೇಕು ಎಂದು ರಮೇಶ್ ಜಾರಕಿಹೊಳಿ ಹೇಳಿದರು.

‘ಯುವತಿ ಎಸ್​ಟಿ ಸಮುದಾಯದವಳೆಂದು ಈಗ ಗೊತ್ತಾಗಿದೆ’ ಯುವತಿ ಎಸ್​ಟಿ ಸಮುದಾಯದವಳೆಂದು ಈಗ ಗೊತ್ತಾಗಿದೆ. ಮಹಾನಾಯಕನ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಲಿ. ಪ್ರಕರಣದಲ್ಲಿ ಯುವತಿ ಹೊರಬಂದು ಹೋರಾಟಮಾಡಬೇಕು. ಪೊಲೀಸರು ನಿಜವಾಗಿಯೂ ತಪ್ಪಿತಸ್ಥರನ್ನು ಒಳಗೆಹಾಕಬೇಕು ಎಂದು ರಮೇಶ್ ಜಾರಕಿಹೊಳಿ ಹೇಳಿದರು.

CD LADY EI

ಸಿಡಿ ಲೇಡಿ

‘ನಾನು ನಿರಪರಾಧಿ ಎಂದು ಆ ಕುಟುಂಬಸ್ಥರು ಹೇಳಿದ್ದಾರೆ’ ಡಿ.ಕೆ.ಶಿವಕುಮಾರ್​ ರಾಜಕೀಯದಲ್ಲಿರಲು ಅರ್ಹನೇ ಅಲ್ಲ. ಡಿಕೆಶಿ ರಾಜಕೀಯದಿಂದ ನಿವೃತ್ತಿ ಪಡೆಯುವುದು ಉತ್ತಮ. ಯುವತಿ ಕುಟುಂಬಸ್ಥರಿಗೆ ನಾನು ಧನ್ಯವಾದ ಹೇಳುತ್ತೇನೆ. ನಾನು ನಿರಪರಾಧಿ ಎಂದು ಆ ಕುಟುಂಬಸ್ಥರು ಹೇಳಿದ್ದಾರೆ ಎಂದು ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ನಮ್ಮ ಸಿಎಂ, ಅಮಿತ್ ಶಾ ಜತೆ ಮಾತನಾಡುತ್ತೇನೆ ಎಂದು ರಮೇಶ್​ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ನಮ್ಮ ಅಕ್ಕನನ್ನು ಡಿ.ಕೆ.ಶಿವಕುಮಾರ್ ಒತ್ತೆಯಾಳಾಗಿಸಿಕೊಂಡಿದ್ದಾರೆ; ಆಕೆಯನ್ನು ವಾಪಸ್​ ತಂದುಕೊಟ್ಟುಬಿಡಿ -ಸಿಡಿ ಲೇಡಿ ಸಹೋದರ

Published On - 6:04 pm, Sat, 27 March 21

Follow Us
KUSHAL V
KUSHAL V
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್