Ramesh Jarkiholi Press Meet | ನಾನು ಗಂಡಸು.. ಆ ಮಹಾನಾಯಕ ಗಾಂ.. ಅವನನ್ನು ಒದ್ದು ಒಳಗಾಕಿ -ರಮೇಶ್ ಜಾರಕಿಹೊಳಿ

ರಮೇಶ್​ ಜಾರಕಿಹೊಳಿ ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ನಿನ್ನೆ ಸಿಡಿ ಲೇಡಿಯ ಆಡಿಯೋ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಬಾಂಬ್​ ಸಿಡಿಸೋದಾಗಿ ಹೇಳದ್ದ ರಮೇಶ್​ ಜಾರಕಿಹೊಳಿ ತಾವು ನುಡಿದಂತೆ ಇಂದು ಮಾಧ್ಯಮಗೋಷ್ಠಿಗೆ ಮುಂದಾಗಿದ್ದಾರೆ.

Ramesh Jarkiholi Press Meet | ನಾನು ಗಂಡಸು.. ಆ ಮಹಾನಾಯಕ ಗಾಂ.. ಅವನನ್ನು ಒದ್ದು ಒಳಗಾಕಿ -ರಮೇಶ್ ಜಾರಕಿಹೊಳಿ
ನರೇಶ್, ಶ್ರವಣ್ ಪರ ಸಂತ್ರಸ್ತ ಯುವತಿ ಬ್ಯಾಟಿಂಗ್: ದೂರು ಕಾನೂನುಬಾಹಿರವೆಂದು ವಾದ, ರಮೇಶ್ ಜಾರಕಿಹೊಳಿಗೆ ನೋಟಿಸ್
Follow us
|

Updated on:Mar 27, 2021 | 7:08 PM

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯದ ಕೇಂದ್ರಬಿಂದುವಾಗಿರುವ ಸಿಡಿ ಪ್ರಕರಣದ ಕುರಿತು ಇಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಖುದ್ದಾಗಿ ಮತ್ತೊಂದು ಸುದ್ದಿಗೋಷ್ಠಿ ನಡೆಸಿದ್ದಾರೆ. ನಿನ್ನೆ ಸಿಡಿ ಲೇಡಿಯ ಆಡಿಯೋ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಬಾಂಬ್​ ಸಿಡಿಸೋದಾಗಿ ಹೇಳಿದ್ದ ರಮೇಶ್​ ಜಾರಕಿಹೊಳಿ ತಾವು ನುಡಿದಂತೆ ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಠಿ ನಡೆಸಿದ್ದಾರೆ.

ರಮೇಶ್​ ಜಾರಕಿಹೊಳಿ ಮಾಧ್ಯಮಗೋಷ್ಠಿ ಸಾರಾಂಶ ಇಲ್ಲಿದೆ: ನನ್ನ ಬಳಿ 11 ಸಾಕ್ಷ್ಯಗಳಿವೆ. ಮಹಾನಾಯಕ ಯಾರೆಂದು ಪೋಷಕರು ಬಹಿರಂಗಗೊಳ್ಸಿದ್ದಾರೆ. ಮಹಾನಾಯಕ ರಾಜಕೀಯದಲ್ಲಿರಲು ನಾಲಾಯಕ್​. ನಾನು ಗಂಡಸು, ಆ ಮಹಾನಾಯಕ ಓರ್ವ ಗಾಂ.. ಎಂದು ರಮೇಶ್​ ಜಾರಕಿಹೊಳಿ ಖಾರವಾಗಿ ಮಾತನಾಡಿದ್ದಾರೆ.

‘ನಮ್ಮ ಕುಟುಂಬದವರು ಯಾವ ಹುಡುಗಿಯನ್ನೂ ಮೂಸಿನೋಡಿಲ್ಲ’ ನಮ್ಮ ಕುಟುಂಬದವರು ಯಾವ ಹುಡುಗಿಯನ್ನೂ ಮೂಸಿನೋಡಿಲ್ಲ. ಡಿ.ಕೆ.ಶಿವಕುಮಾರ್​ ವಿರುದ್ಧ ನೇರ ಹೋರಾಟಕ್ಕೆ ಇಳಿಯುತ್ತೇವೆ. ಕನಕಪುರದಲ್ಲಿ ಅವನನ್ನು ಸೋಲಿಸಲು ಹೋರಾಟ ಮಾಡುವೆ. ಡಿ.ಕೆ.ಶಿವಕುಮಾರ್​​ ಬೆಳಗಾವಿಗೆ ಬಂದರೆ ಸ್ವಾಗತಿಸುತ್ತೇವೆ. ಬೆಳಗಾವಿಯಿಂದ ಮರ್ಯಾದೆಯಿಂದ ಕಳಿಸಿಕೊಡುತ್ತೇವೆ ಎಂದು ರಮೇಶ್​ ಜಾರಕಿಹೊಳಿ ಹೇಳಿದರು. ಬೆಳಗಾವಿಗೆ ಬಂದಾಗ ಅವರನ್ನು ಸುರಕ್ಷಿತವಾಗಿ ನೋಡಿಕೊಳ್ಳುತ್ತೇವೆ. ಯಾಕೆಂದರೆ ಬೆಳಗಾವಿ ನಮ್ಮೂರು, ಯಾವುದೇ ತೊಂದರೆಕೊಡಲ್ಲ ಎಂದು ರಮೇಶ್​ ಜಾರಕಿಹೊಳಿ ಹೇಳಿದ್ದಾರೆ.

RAMESH

‘ನಮ್ಮ ಕುಟುಂಬದವರು ಯಾವ ಹುಡುಗಿ ಮೂಸಿನೋಡಿಲ್ಲ’

‘ಯಾರು ತಪ್ಪುಮಾಡಿದ್ದರೋ ಅವರನ್ನು ಒದ್ದು ಒಳಗೆಹಾಕಬೇಕು’ ಬೆಳಗಾವಿ ಉಪಚುನಾವಣೆಯಲ್ಲಿ ಗೆಲ್ಲಲು ಹೋರಾಡುತ್ತೇನೆ. ತನು, ಮನ, ಧನ ವಿನಿಯೋಗಿಸಿ ಗೆಲ್ಲಲು ಹೋರಾಡುತ್ತೇವೆ ಎಂದು ರಮೇಶ್​ ಜಾರಕಿಹೊಳಿ ಹೇಳಿದರು. ಜೊತೆಗೆ, ಕನಕಪುರದಲ್ಲಿ ಡಿ.ಕೆ.ಶಿವಕುಮಾರ್​ ಸೋಲಿಸಲು ಹೋರಾಡುವೆ. ಪ್ರಕರಣದಲ್ಲಿ ಯಾರದ್ದೇ ತಪ್ಪಿದ್ದರೂ ಒದ್ದು ಒಳಹಾಕಬೇಕು. ಯುವತಿ, ನಾನು, ಡಿಕೆಶಿ ಯಾರೇ ತಪ್ಪಿತಸ್ಥರಿದ್ರೂ ಒಳಗೆ ಹಾಕಿ. ಯಾರು ತಪ್ಪುಮಾಡಿದ್ದರೋ ಅವರನ್ನು ಒದ್ದು ಒಳಗೆಹಾಕಬೇಕು ಎಂದು ರಮೇಶ್ ಜಾರಕಿಹೊಳಿ ಹೇಳಿದರು.

‘ಯುವತಿ ಎಸ್​ಟಿ ಸಮುದಾಯದವಳೆಂದು ಈಗ ಗೊತ್ತಾಗಿದೆ’ ಯುವತಿ ಎಸ್​ಟಿ ಸಮುದಾಯದವಳೆಂದು ಈಗ ಗೊತ್ತಾಗಿದೆ. ಮಹಾನಾಯಕನ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಲಿ. ಪ್ರಕರಣದಲ್ಲಿ ಯುವತಿ ಹೊರಬಂದು ಹೋರಾಟಮಾಡಬೇಕು. ಪೊಲೀಸರು ನಿಜವಾಗಿಯೂ ತಪ್ಪಿತಸ್ಥರನ್ನು ಒಳಗೆಹಾಕಬೇಕು ಎಂದು ರಮೇಶ್ ಜಾರಕಿಹೊಳಿ ಹೇಳಿದರು.

CD LADY EI

ಸಿಡಿ ಲೇಡಿ

‘ನಾನು ನಿರಪರಾಧಿ ಎಂದು ಆ ಕುಟುಂಬಸ್ಥರು ಹೇಳಿದ್ದಾರೆ’ ಡಿ.ಕೆ.ಶಿವಕುಮಾರ್​ ರಾಜಕೀಯದಲ್ಲಿರಲು ಅರ್ಹನೇ ಅಲ್ಲ. ಡಿಕೆಶಿ ರಾಜಕೀಯದಿಂದ ನಿವೃತ್ತಿ ಪಡೆಯುವುದು ಉತ್ತಮ. ಯುವತಿ ಕುಟುಂಬಸ್ಥರಿಗೆ ನಾನು ಧನ್ಯವಾದ ಹೇಳುತ್ತೇನೆ. ನಾನು ನಿರಪರಾಧಿ ಎಂದು ಆ ಕುಟುಂಬಸ್ಥರು ಹೇಳಿದ್ದಾರೆ ಎಂದು ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ನಮ್ಮ ಸಿಎಂ, ಅಮಿತ್ ಶಾ ಜತೆ ಮಾತನಾಡುತ್ತೇನೆ ಎಂದು ರಮೇಶ್​ ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ: ನಮ್ಮ ಅಕ್ಕನನ್ನು ಡಿ.ಕೆ.ಶಿವಕುಮಾರ್ ಒತ್ತೆಯಾಳಾಗಿಸಿಕೊಂಡಿದ್ದಾರೆ; ಆಕೆಯನ್ನು ವಾಪಸ್​ ತಂದುಕೊಟ್ಟುಬಿಡಿ -ಸಿಡಿ ಲೇಡಿ ಸಹೋದರ

Published On - 6:04 pm, Sat, 27 March 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ