AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಪುಟ ವಿಸ್ತರಣೆಗೆ ಷರತ್ತು ಹಾಕಿಲ್ಲ, ಗಡುವೂ ವಿಧಿಸಿಲ್ಲ; ಅನ್ಯಾಯವಾಗದಂತೆ ನೋಡಿಕೊಳ್ಳಿ’

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಪಟ್ಟಿ ಇವತ್ತಾದರೂ ಬರಬಹುದು, ಎರಡು ದಿನ ಬಿಟ್ಟಾದರೂ ಬರಬಹುದು. ಸಂಪುಟ ವಿಸ್ತರಣೆ ಶೀಘ್ರ ಆಗಬಹುದು ಎಂಬ ಆಶಾಭಾವನೆಯಲ್ಲಿ ನಾವಿದ್ದೇವೆ. ರಾಜಕೀಯದಲ್ಲಿ ಆಶಾಭಾವನೆ ಮುಖ್ಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶುಕ್ರವಾರ ಟಿವಿ9ಗೆ ಪ್ರತಿಕ್ರಿಯಿಸಿದ ಸಚಿವರು, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಪಕ್ಷದ ಇತರ ವರಿಷ್ಠರನ್ನು ಭೇಟಿಯಾಗಿದ್ದು ನಿಜ ಎಂಬ ಮಾಹಿತಿ ನೀಡಿದರು. ಜೊತೆಗೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಷರತ್ತು ಹಾಕಿಲ್ಲ. ಕಾಲಮಿತಿಯನ್ನೂ […]

‘ಸಂಪುಟ ವಿಸ್ತರಣೆಗೆ ಷರತ್ತು ಹಾಕಿಲ್ಲ, ಗಡುವೂ ವಿಧಿಸಿಲ್ಲ; ಅನ್ಯಾಯವಾಗದಂತೆ ನೋಡಿಕೊಳ್ಳಿ’
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Nov 21, 2020 | 4:50 PM

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಪಟ್ಟಿ ಇವತ್ತಾದರೂ ಬರಬಹುದು, ಎರಡು ದಿನ ಬಿಟ್ಟಾದರೂ ಬರಬಹುದು. ಸಂಪುಟ ವಿಸ್ತರಣೆ ಶೀಘ್ರ ಆಗಬಹುದು ಎಂಬ ಆಶಾಭಾವನೆಯಲ್ಲಿ ನಾವಿದ್ದೇವೆ. ರಾಜಕೀಯದಲ್ಲಿ ಆಶಾಭಾವನೆ ಮುಖ್ಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಶುಕ್ರವಾರ ಟಿವಿ9ಗೆ ಪ್ರತಿಕ್ರಿಯಿಸಿದ ಸಚಿವರು, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಪಕ್ಷದ ಇತರ ವರಿಷ್ಠರನ್ನು ಭೇಟಿಯಾಗಿದ್ದು ನಿಜ ಎಂಬ ಮಾಹಿತಿ ನೀಡಿದರು. ಜೊತೆಗೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಷರತ್ತು ಹಾಕಿಲ್ಲ. ಕಾಲಮಿತಿಯನ್ನೂ ವಿಧಿಸಿಲ್ಲ. ಸಂಬಂಧಿಸಿದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದ್ದೇನೆ ಅಷ್ಟೇ ಎಂದು ಹೇಳಿದರು.

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂದು ನಿರ್ಧರಿಸುವುದು ಮುಖ್ಯಮಂತ್ರಿಯ ಪರಮಾಧಿಕಾರ. ವರಿಷ್ಠರ ಸೂಚನೆ ಎಂದು ಬರಬಹುದು ಎಂಬ ಮಾಹಿತಿಯೂ ನನಗಿಲ್ಲ. ಪಕ್ಷದ ಹೈಕಮಾಂಡ್​ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದು ನುಡಿದರು.

ಶಾಸಕರು ನನ್ನ ಮನೆಗೆ ಊಟದ ಸಮಯಕ್ಕೆ ಬಂದಿದ್ದರು ಅಷ್ಟೇ. ನಾನು ದೆಹಲಿ ತಲುಪಿದ ನಂತರ ಮುಖ್ಯಮಂತ್ರಿ ಆಗಮನದ ವಿಷಯ ಗೊತ್ತಾಯಿತು. ಆದರೆ ದೆಹಲಿಯಲ್ಲಿ ಯಡಿಯೂರಪ್ಪರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಫೋನ್ ಮಾಡಿ ಮಾತನಾಡಿದೆ ಎಂದು ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.

ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ