AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಪುಟ ವಿಸ್ತರಣೆಗೆ ಷರತ್ತು ಹಾಕಿಲ್ಲ, ಗಡುವೂ ವಿಧಿಸಿಲ್ಲ; ಅನ್ಯಾಯವಾಗದಂತೆ ನೋಡಿಕೊಳ್ಳಿ’

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಪಟ್ಟಿ ಇವತ್ತಾದರೂ ಬರಬಹುದು, ಎರಡು ದಿನ ಬಿಟ್ಟಾದರೂ ಬರಬಹುದು. ಸಂಪುಟ ವಿಸ್ತರಣೆ ಶೀಘ್ರ ಆಗಬಹುದು ಎಂಬ ಆಶಾಭಾವನೆಯಲ್ಲಿ ನಾವಿದ್ದೇವೆ. ರಾಜಕೀಯದಲ್ಲಿ ಆಶಾಭಾವನೆ ಮುಖ್ಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶುಕ್ರವಾರ ಟಿವಿ9ಗೆ ಪ್ರತಿಕ್ರಿಯಿಸಿದ ಸಚಿವರು, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಪಕ್ಷದ ಇತರ ವರಿಷ್ಠರನ್ನು ಭೇಟಿಯಾಗಿದ್ದು ನಿಜ ಎಂಬ ಮಾಹಿತಿ ನೀಡಿದರು. ಜೊತೆಗೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಷರತ್ತು ಹಾಕಿಲ್ಲ. ಕಾಲಮಿತಿಯನ್ನೂ […]

‘ಸಂಪುಟ ವಿಸ್ತರಣೆಗೆ ಷರತ್ತು ಹಾಕಿಲ್ಲ, ಗಡುವೂ ವಿಧಿಸಿಲ್ಲ; ಅನ್ಯಾಯವಾಗದಂತೆ ನೋಡಿಕೊಳ್ಳಿ’
KUSHAL V
| Edited By: |

Updated on: Nov 21, 2020 | 4:50 PM

Share

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಪಟ್ಟಿ ಇವತ್ತಾದರೂ ಬರಬಹುದು, ಎರಡು ದಿನ ಬಿಟ್ಟಾದರೂ ಬರಬಹುದು. ಸಂಪುಟ ವಿಸ್ತರಣೆ ಶೀಘ್ರ ಆಗಬಹುದು ಎಂಬ ಆಶಾಭಾವನೆಯಲ್ಲಿ ನಾವಿದ್ದೇವೆ. ರಾಜಕೀಯದಲ್ಲಿ ಆಶಾಭಾವನೆ ಮುಖ್ಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಶುಕ್ರವಾರ ಟಿವಿ9ಗೆ ಪ್ರತಿಕ್ರಿಯಿಸಿದ ಸಚಿವರು, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಪಕ್ಷದ ಇತರ ವರಿಷ್ಠರನ್ನು ಭೇಟಿಯಾಗಿದ್ದು ನಿಜ ಎಂಬ ಮಾಹಿತಿ ನೀಡಿದರು. ಜೊತೆಗೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಷರತ್ತು ಹಾಕಿಲ್ಲ. ಕಾಲಮಿತಿಯನ್ನೂ ವಿಧಿಸಿಲ್ಲ. ಸಂಬಂಧಿಸಿದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದ್ದೇನೆ ಅಷ್ಟೇ ಎಂದು ಹೇಳಿದರು.

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂದು ನಿರ್ಧರಿಸುವುದು ಮುಖ್ಯಮಂತ್ರಿಯ ಪರಮಾಧಿಕಾರ. ವರಿಷ್ಠರ ಸೂಚನೆ ಎಂದು ಬರಬಹುದು ಎಂಬ ಮಾಹಿತಿಯೂ ನನಗಿಲ್ಲ. ಪಕ್ಷದ ಹೈಕಮಾಂಡ್​ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದು ನುಡಿದರು.

ಶಾಸಕರು ನನ್ನ ಮನೆಗೆ ಊಟದ ಸಮಯಕ್ಕೆ ಬಂದಿದ್ದರು ಅಷ್ಟೇ. ನಾನು ದೆಹಲಿ ತಲುಪಿದ ನಂತರ ಮುಖ್ಯಮಂತ್ರಿ ಆಗಮನದ ವಿಷಯ ಗೊತ್ತಾಯಿತು. ಆದರೆ ದೆಹಲಿಯಲ್ಲಿ ಯಡಿಯೂರಪ್ಪರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಫೋನ್ ಮಾಡಿ ಮಾತನಾಡಿದೆ ಎಂದು ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?