AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಪುಟ ವಿಸ್ತರಣೆಗೆ ಷರತ್ತು ಹಾಕಿಲ್ಲ, ಗಡುವೂ ವಿಧಿಸಿಲ್ಲ; ಅನ್ಯಾಯವಾಗದಂತೆ ನೋಡಿಕೊಳ್ಳಿ’

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಪಟ್ಟಿ ಇವತ್ತಾದರೂ ಬರಬಹುದು, ಎರಡು ದಿನ ಬಿಟ್ಟಾದರೂ ಬರಬಹುದು. ಸಂಪುಟ ವಿಸ್ತರಣೆ ಶೀಘ್ರ ಆಗಬಹುದು ಎಂಬ ಆಶಾಭಾವನೆಯಲ್ಲಿ ನಾವಿದ್ದೇವೆ. ರಾಜಕೀಯದಲ್ಲಿ ಆಶಾಭಾವನೆ ಮುಖ್ಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶುಕ್ರವಾರ ಟಿವಿ9ಗೆ ಪ್ರತಿಕ್ರಿಯಿಸಿದ ಸಚಿವರು, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಪಕ್ಷದ ಇತರ ವರಿಷ್ಠರನ್ನು ಭೇಟಿಯಾಗಿದ್ದು ನಿಜ ಎಂಬ ಮಾಹಿತಿ ನೀಡಿದರು. ಜೊತೆಗೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಷರತ್ತು ಹಾಕಿಲ್ಲ. ಕಾಲಮಿತಿಯನ್ನೂ […]

‘ಸಂಪುಟ ವಿಸ್ತರಣೆಗೆ ಷರತ್ತು ಹಾಕಿಲ್ಲ, ಗಡುವೂ ವಿಧಿಸಿಲ್ಲ; ಅನ್ಯಾಯವಾಗದಂತೆ ನೋಡಿಕೊಳ್ಳಿ’
KUSHAL V
| Edited By: |

Updated on: Nov 21, 2020 | 4:50 PM

Share

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಪಟ್ಟಿ ಇವತ್ತಾದರೂ ಬರಬಹುದು, ಎರಡು ದಿನ ಬಿಟ್ಟಾದರೂ ಬರಬಹುದು. ಸಂಪುಟ ವಿಸ್ತರಣೆ ಶೀಘ್ರ ಆಗಬಹುದು ಎಂಬ ಆಶಾಭಾವನೆಯಲ್ಲಿ ನಾವಿದ್ದೇವೆ. ರಾಜಕೀಯದಲ್ಲಿ ಆಶಾಭಾವನೆ ಮುಖ್ಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಶುಕ್ರವಾರ ಟಿವಿ9ಗೆ ಪ್ರತಿಕ್ರಿಯಿಸಿದ ಸಚಿವರು, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಪಕ್ಷದ ಇತರ ವರಿಷ್ಠರನ್ನು ಭೇಟಿಯಾಗಿದ್ದು ನಿಜ ಎಂಬ ಮಾಹಿತಿ ನೀಡಿದರು. ಜೊತೆಗೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಷರತ್ತು ಹಾಕಿಲ್ಲ. ಕಾಲಮಿತಿಯನ್ನೂ ವಿಧಿಸಿಲ್ಲ. ಸಂಬಂಧಿಸಿದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದ್ದೇನೆ ಅಷ್ಟೇ ಎಂದು ಹೇಳಿದರು.

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂದು ನಿರ್ಧರಿಸುವುದು ಮುಖ್ಯಮಂತ್ರಿಯ ಪರಮಾಧಿಕಾರ. ವರಿಷ್ಠರ ಸೂಚನೆ ಎಂದು ಬರಬಹುದು ಎಂಬ ಮಾಹಿತಿಯೂ ನನಗಿಲ್ಲ. ಪಕ್ಷದ ಹೈಕಮಾಂಡ್​ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದು ನುಡಿದರು.

ಶಾಸಕರು ನನ್ನ ಮನೆಗೆ ಊಟದ ಸಮಯಕ್ಕೆ ಬಂದಿದ್ದರು ಅಷ್ಟೇ. ನಾನು ದೆಹಲಿ ತಲುಪಿದ ನಂತರ ಮುಖ್ಯಮಂತ್ರಿ ಆಗಮನದ ವಿಷಯ ಗೊತ್ತಾಯಿತು. ಆದರೆ ದೆಹಲಿಯಲ್ಲಿ ಯಡಿಯೂರಪ್ಪರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಫೋನ್ ಮಾಡಿ ಮಾತನಾಡಿದೆ ಎಂದು ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ