AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಪುಟ ವಿಸ್ತರಣೆಗೆ ಷರತ್ತು ಹಾಕಿಲ್ಲ, ಗಡುವೂ ವಿಧಿಸಿಲ್ಲ; ಅನ್ಯಾಯವಾಗದಂತೆ ನೋಡಿಕೊಳ್ಳಿ’

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಪಟ್ಟಿ ಇವತ್ತಾದರೂ ಬರಬಹುದು, ಎರಡು ದಿನ ಬಿಟ್ಟಾದರೂ ಬರಬಹುದು. ಸಂಪುಟ ವಿಸ್ತರಣೆ ಶೀಘ್ರ ಆಗಬಹುದು ಎಂಬ ಆಶಾಭಾವನೆಯಲ್ಲಿ ನಾವಿದ್ದೇವೆ. ರಾಜಕೀಯದಲ್ಲಿ ಆಶಾಭಾವನೆ ಮುಖ್ಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶುಕ್ರವಾರ ಟಿವಿ9ಗೆ ಪ್ರತಿಕ್ರಿಯಿಸಿದ ಸಚಿವರು, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಪಕ್ಷದ ಇತರ ವರಿಷ್ಠರನ್ನು ಭೇಟಿಯಾಗಿದ್ದು ನಿಜ ಎಂಬ ಮಾಹಿತಿ ನೀಡಿದರು. ಜೊತೆಗೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಷರತ್ತು ಹಾಕಿಲ್ಲ. ಕಾಲಮಿತಿಯನ್ನೂ […]

‘ಸಂಪುಟ ವಿಸ್ತರಣೆಗೆ ಷರತ್ತು ಹಾಕಿಲ್ಲ, ಗಡುವೂ ವಿಧಿಸಿಲ್ಲ; ಅನ್ಯಾಯವಾಗದಂತೆ ನೋಡಿಕೊಳ್ಳಿ’
KUSHAL V
| Edited By: ಸಾಧು ಶ್ರೀನಾಥ್​|

Updated on: Nov 21, 2020 | 4:50 PM

Share

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಪಟ್ಟಿ ಇವತ್ತಾದರೂ ಬರಬಹುದು, ಎರಡು ದಿನ ಬಿಟ್ಟಾದರೂ ಬರಬಹುದು. ಸಂಪುಟ ವಿಸ್ತರಣೆ ಶೀಘ್ರ ಆಗಬಹುದು ಎಂಬ ಆಶಾಭಾವನೆಯಲ್ಲಿ ನಾವಿದ್ದೇವೆ. ರಾಜಕೀಯದಲ್ಲಿ ಆಶಾಭಾವನೆ ಮುಖ್ಯ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಶುಕ್ರವಾರ ಟಿವಿ9ಗೆ ಪ್ರತಿಕ್ರಿಯಿಸಿದ ಸಚಿವರು, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಪಕ್ಷದ ಇತರ ವರಿಷ್ಠರನ್ನು ಭೇಟಿಯಾಗಿದ್ದು ನಿಜ ಎಂಬ ಮಾಹಿತಿ ನೀಡಿದರು. ಜೊತೆಗೆ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಷರತ್ತು ಹಾಕಿಲ್ಲ. ಕಾಲಮಿತಿಯನ್ನೂ ವಿಧಿಸಿಲ್ಲ. ಸಂಬಂಧಿಸಿದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿದ್ದೇನೆ ಅಷ್ಟೇ ಎಂದು ಹೇಳಿದರು.

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂದು ನಿರ್ಧರಿಸುವುದು ಮುಖ್ಯಮಂತ್ರಿಯ ಪರಮಾಧಿಕಾರ. ವರಿಷ್ಠರ ಸೂಚನೆ ಎಂದು ಬರಬಹುದು ಎಂಬ ಮಾಹಿತಿಯೂ ನನಗಿಲ್ಲ. ಪಕ್ಷದ ಹೈಕಮಾಂಡ್​ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದು ನುಡಿದರು.

ಶಾಸಕರು ನನ್ನ ಮನೆಗೆ ಊಟದ ಸಮಯಕ್ಕೆ ಬಂದಿದ್ದರು ಅಷ್ಟೇ. ನಾನು ದೆಹಲಿ ತಲುಪಿದ ನಂತರ ಮುಖ್ಯಮಂತ್ರಿ ಆಗಮನದ ವಿಷಯ ಗೊತ್ತಾಯಿತು. ಆದರೆ ದೆಹಲಿಯಲ್ಲಿ ಯಡಿಯೂರಪ್ಪರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಫೋನ್ ಮಾಡಿ ಮಾತನಾಡಿದೆ ಎಂದು ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ