Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಘಟನೆಯಿಂದ ರಮೇಶ್ ಜಾರಕಿಹೊಳಿ‌ಗೆ ಹೊಡೆತ ಬಿದ್ದಿದೆ, ಸುಧಾರಿಸಿಕೊಳ್ಳಲು ಸಮಯ ಬೇಕು: ಸಹೋದರ ಸತೀಶ್ ಜಾರಕಿಹೊಳಿ‌

ವಿಡಿಯೋವನ್ನು ಹರಿಬಿಟ್ಟವರು ಕಾಂಗ್ರೆಸ್​ನವರೋ ಅಥವಾ ಬಿಜೆಪಿಯರವರೋ ಎನ್ನುವ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸತೀಶ್ ಪ್ರತಿಕ್ರಿಯಿಸಿದ್ದಾರೆ.

ಈ ಘಟನೆಯಿಂದ ರಮೇಶ್ ಜಾರಕಿಹೊಳಿ‌ಗೆ ಹೊಡೆತ ಬಿದ್ದಿದೆ, ಸುಧಾರಿಸಿಕೊಳ್ಳಲು ಸಮಯ ಬೇಕು: ಸಹೋದರ ಸತೀಶ್ ಜಾರಕಿಹೊಳಿ‌
ಸತೀಶ್ ಜಾರಕಿಹೊಳಿ
Follow us
ರಾಜೇಶ್ ದುಗ್ಗುಮನೆ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Mar 03, 2021 | 8:48 PM

ಬೆಂಗಳೂರು: ರಮೇಶ್​ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸೆಕ್ಸ್​ ಸಿಡಿ ಬಿಡುಗಡೆ ಆಗುತ್ತಿದ್ದಂತೆ ರಾಜಕೀಯ ಕೋಲಾಹಲ ಎದ್ದಿದೆ. ವಿಡಿಯೋ ವೈರಲ್​ ಆದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ‌ ಜಲಸಂಪನ್ಮೂಲ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆ ಬಗ್ಗೆ ಗೋಕಾಕ್​​ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ರಮೇಶ್ ಜಾರಕಿಹೊಳಿ‌ ಸಹೋದರ ಸತೀಶ್ ಜಾರಕಿಹೊಳಿ‌ ಟಿವಿ9 ಕನ್ನಡಕ್ಕೆ ಮೊದಲ ಪ್ರತಿಕ್ರಿಯೆ ನೀಡಿದ್ದು, ರಮೇಶ್ ಜಾರಕಿಹೊಳಿ‌ ಟಾರ್ಗೆಟ್ ಯಾಕೆ ಮಾಡಿದ್ದಾರೆ ಗೊತ್ತಿಲ್ಲ. ಘಟನೆಯಿಂದ ರಮೇಶ್​ಗೆ ಹೊಡೆತ ಬಿದ್ದಿದೆ, ಸುಧಾರಿಸಿಕೊಳ್ಳಲು ಸಮಯ ಬೇಕು ಎಂದಿದ್ದಾರೆ.

ರಮೇಶ್ ಜಾರಕಿಹೊಳಿ‌ ಈಗಾಗಲೇ ರಾಜೀನಾಮೆ ಕೊಟ್ಟಿದ್ದಾರೆ. ಮುಂದೆ ಇನ್ನೇನಿದ್ದರೂ ಕಾನೂನು ಹೋರಾಟ. ಸಿಡಿಯಲ್ಲಿ ಇರುವುದು ರಮೇಶ್ ಹೌದೋ ಅಥವಾ ಇಲ್ಲವೋ ಎನ್ನುವ ವಿಚಾರ ಪೊಲೀಸರ ತನಿಖೆಯಿಂದ ಗೊತ್ತಾಗುತ್ತದೆ. ಆದಷ್ಟು ಬೇಗ ಪೊಲೀಸರು ತನಿಖೆ ಆರಂಭಿಸಬೇಕು ಎಂದು ಸತೀಶ್ ಆಗ್ರಹಿಸಿದ್ದಾರೆ.

ವಿಡಿಯೋವನ್ನು ಹರಿಬಿಟ್ಟವರು ಕಾಂಗ್ರೆಸ್​ನವರೋ ಅಥವಾ ಬಿಜೆಪಿಯರವರೋ ಎನ್ನುವ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸತೀಶ್ ಪ್ರತಿಕ್ರಿಯಿಸಿದ್ದಾರೆ. ಈ ಕೆಲಸವನ್ನು ಕಾಂಗ್ರೆಸ್ ಮಾಡಿದೆಯೇ ಅಥವಾ ಬಿಜೆಪಿ ಮಾಡಿದೆಯೋ ಎನ್ನುವ ವಿಚಾರ ತನಿಖೆಯಿಂದ ಅಷ್ಟೇ ಹೊರ ಬರಬೇಕಿದೆ. ಯಾರ ಬಗ್ಗೆ ಆರೋಪ ಮಾಡಲೂ ನಮ್ಮಲ್ಲಿ ಸಾಕ್ಷಿಗಳಿಲ್ಲ. ಸಿಡಿ ಬಿಡುಗಡೆಯಲ್ಲಿ ಮೇಲ್ನೋಟಕ್ಕೆ ಷಡ್ಯಂತ್ರದಂತೆ ಕಂಡು ಬರುತ್ತಿದೆ. ರಮೇಶ್ ಜಾರಕಿಹೊಳಿ‌ ಟಾರ್ಗೆಟ್ ಯಾಕೆ ಮಾಡಿದ್ದಾರೆ ಗೊತ್ತಿಲ್ಲ. ಈ ಘಟನೆಯಿಂದ ರಮೇಶ್ ಜಾರಕಿಹೊಳಿ‌ಗೆ ಹೊಡೆತ ಬಿದ್ದಿದೆ. ಅವರಿಗೆ ಸುಧಾರಿಸಿಕೊಳ್ಳಲು ಸಮಯ ಬೇಕು ಎಂದಿದ್ದಾರೆ ಅವರು.

ಈ ಪ್ರಕರಣದಿಂದ ಜಾರಕಿಹೊಳಿ‌ ಕುಟುಂಬಕ್ಕೆ ಡ್ಯಾಮೇಜ್ ಆಗಿದೆ. ಜಾರಕಿಹೊಳಿ‌ ಕುಟುಂಬಸ್ಥರೇ ಮಂತ್ರಿ ಇರಬೇಕು ಅಂತಾ ಕಾನೂನು ಇಲ್ಲ. ಅನಿವಾರ್ಯ ಕಾರಣಗಳಿಂದಾಗಿ ಸ್ಥಾನ ಹೋಗಿದೆ. ಇದಕ್ಕೆ ಎನೂ ಮಾಡಲು ಆಗುವುದಿಲ್ಲ. ರಮೇಶ್ ಜಾರಕಿಹೊಳಿ‌ ಜತೆಗೆ ಈವರೆಗೆ ಮಾತಾಡಿಲ್ಲ. ಅವಕಾಶ ಬಂದರೆ ರಮೇಶ್ ಜಾರಕಿಹೊಳಿ‌ ಜೊತೆಗೆ ಮಾತಾಡುತ್ತೇನೆ. ಪೊಲೀಸರ ತನಿಖೆಯಿಂದ ಪ್ರಕರಣದ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದರು ಸತೀಶ್​.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ವಜುಭಾಯಿ ವಾಲಾ

Published On - 8:46 pm, Wed, 3 March 21

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ