AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಘಟನೆಯಿಂದ ರಮೇಶ್ ಜಾರಕಿಹೊಳಿ‌ಗೆ ಹೊಡೆತ ಬಿದ್ದಿದೆ, ಸುಧಾರಿಸಿಕೊಳ್ಳಲು ಸಮಯ ಬೇಕು: ಸಹೋದರ ಸತೀಶ್ ಜಾರಕಿಹೊಳಿ‌

ವಿಡಿಯೋವನ್ನು ಹರಿಬಿಟ್ಟವರು ಕಾಂಗ್ರೆಸ್​ನವರೋ ಅಥವಾ ಬಿಜೆಪಿಯರವರೋ ಎನ್ನುವ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸತೀಶ್ ಪ್ರತಿಕ್ರಿಯಿಸಿದ್ದಾರೆ.

ಈ ಘಟನೆಯಿಂದ ರಮೇಶ್ ಜಾರಕಿಹೊಳಿ‌ಗೆ ಹೊಡೆತ ಬಿದ್ದಿದೆ, ಸುಧಾರಿಸಿಕೊಳ್ಳಲು ಸಮಯ ಬೇಕು: ಸಹೋದರ ಸತೀಶ್ ಜಾರಕಿಹೊಳಿ‌
ಸತೀಶ್ ಜಾರಕಿಹೊಳಿ
ರಾಜೇಶ್ ದುಗ್ಗುಮನೆ
| Edited By: |

Updated on:Mar 03, 2021 | 8:48 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸೆಕ್ಸ್​ ಸಿಡಿ ಬಿಡುಗಡೆ ಆಗುತ್ತಿದ್ದಂತೆ ರಾಜಕೀಯ ಕೋಲಾಹಲ ಎದ್ದಿದೆ. ವಿಡಿಯೋ ವೈರಲ್​ ಆದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ‌ ಜಲಸಂಪನ್ಮೂಲ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆ ಬಗ್ಗೆ ಗೋಕಾಕ್​​ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ರಮೇಶ್ ಜಾರಕಿಹೊಳಿ‌ ಸಹೋದರ ಸತೀಶ್ ಜಾರಕಿಹೊಳಿ‌ ಟಿವಿ9 ಕನ್ನಡಕ್ಕೆ ಮೊದಲ ಪ್ರತಿಕ್ರಿಯೆ ನೀಡಿದ್ದು, ರಮೇಶ್ ಜಾರಕಿಹೊಳಿ‌ ಟಾರ್ಗೆಟ್ ಯಾಕೆ ಮಾಡಿದ್ದಾರೆ ಗೊತ್ತಿಲ್ಲ. ಘಟನೆಯಿಂದ ರಮೇಶ್​ಗೆ ಹೊಡೆತ ಬಿದ್ದಿದೆ, ಸುಧಾರಿಸಿಕೊಳ್ಳಲು ಸಮಯ ಬೇಕು ಎಂದಿದ್ದಾರೆ.

ರಮೇಶ್ ಜಾರಕಿಹೊಳಿ‌ ಈಗಾಗಲೇ ರಾಜೀನಾಮೆ ಕೊಟ್ಟಿದ್ದಾರೆ. ಮುಂದೆ ಇನ್ನೇನಿದ್ದರೂ ಕಾನೂನು ಹೋರಾಟ. ಸಿಡಿಯಲ್ಲಿ ಇರುವುದು ರಮೇಶ್ ಹೌದೋ ಅಥವಾ ಇಲ್ಲವೋ ಎನ್ನುವ ವಿಚಾರ ಪೊಲೀಸರ ತನಿಖೆಯಿಂದ ಗೊತ್ತಾಗುತ್ತದೆ. ಆದಷ್ಟು ಬೇಗ ಪೊಲೀಸರು ತನಿಖೆ ಆರಂಭಿಸಬೇಕು ಎಂದು ಸತೀಶ್ ಆಗ್ರಹಿಸಿದ್ದಾರೆ.

ವಿಡಿಯೋವನ್ನು ಹರಿಬಿಟ್ಟವರು ಕಾಂಗ್ರೆಸ್​ನವರೋ ಅಥವಾ ಬಿಜೆಪಿಯರವರೋ ಎನ್ನುವ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸತೀಶ್ ಪ್ರತಿಕ್ರಿಯಿಸಿದ್ದಾರೆ. ಈ ಕೆಲಸವನ್ನು ಕಾಂಗ್ರೆಸ್ ಮಾಡಿದೆಯೇ ಅಥವಾ ಬಿಜೆಪಿ ಮಾಡಿದೆಯೋ ಎನ್ನುವ ವಿಚಾರ ತನಿಖೆಯಿಂದ ಅಷ್ಟೇ ಹೊರ ಬರಬೇಕಿದೆ. ಯಾರ ಬಗ್ಗೆ ಆರೋಪ ಮಾಡಲೂ ನಮ್ಮಲ್ಲಿ ಸಾಕ್ಷಿಗಳಿಲ್ಲ. ಸಿಡಿ ಬಿಡುಗಡೆಯಲ್ಲಿ ಮೇಲ್ನೋಟಕ್ಕೆ ಷಡ್ಯಂತ್ರದಂತೆ ಕಂಡು ಬರುತ್ತಿದೆ. ರಮೇಶ್ ಜಾರಕಿಹೊಳಿ‌ ಟಾರ್ಗೆಟ್ ಯಾಕೆ ಮಾಡಿದ್ದಾರೆ ಗೊತ್ತಿಲ್ಲ. ಈ ಘಟನೆಯಿಂದ ರಮೇಶ್ ಜಾರಕಿಹೊಳಿ‌ಗೆ ಹೊಡೆತ ಬಿದ್ದಿದೆ. ಅವರಿಗೆ ಸುಧಾರಿಸಿಕೊಳ್ಳಲು ಸಮಯ ಬೇಕು ಎಂದಿದ್ದಾರೆ ಅವರು.

ಈ ಪ್ರಕರಣದಿಂದ ಜಾರಕಿಹೊಳಿ‌ ಕುಟುಂಬಕ್ಕೆ ಡ್ಯಾಮೇಜ್ ಆಗಿದೆ. ಜಾರಕಿಹೊಳಿ‌ ಕುಟುಂಬಸ್ಥರೇ ಮಂತ್ರಿ ಇರಬೇಕು ಅಂತಾ ಕಾನೂನು ಇಲ್ಲ. ಅನಿವಾರ್ಯ ಕಾರಣಗಳಿಂದಾಗಿ ಸ್ಥಾನ ಹೋಗಿದೆ. ಇದಕ್ಕೆ ಎನೂ ಮಾಡಲು ಆಗುವುದಿಲ್ಲ. ರಮೇಶ್ ಜಾರಕಿಹೊಳಿ‌ ಜತೆಗೆ ಈವರೆಗೆ ಮಾತಾಡಿಲ್ಲ. ಅವಕಾಶ ಬಂದರೆ ರಮೇಶ್ ಜಾರಕಿಹೊಳಿ‌ ಜೊತೆಗೆ ಮಾತಾಡುತ್ತೇನೆ. ಪೊಲೀಸರ ತನಿಖೆಯಿಂದ ಪ್ರಕರಣದ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದರು ಸತೀಶ್​.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ವಜುಭಾಯಿ ವಾಲಾ

Published On - 8:46 pm, Wed, 3 March 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?