
ಬೆಳಗಾವಿ: ಮೇ 15 ರಂದು ಸಮ್ಮಿಶ್ರ ಸರ್ಕಾರದ ಪತನಕ್ಕೆ ಪ್ಲಾನ್ ರೂಪಿಸಿದ್ದೆ ಎಂದು ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ್ ನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಆಪರೇಷನ್ ಕಮಲದ ಕುರಿತು ಸ್ಫೋಟಕ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಸಿದ್ದರಾಮಯ್ಯ ಸೈಡ್ ಲೈನ್ ಆಗಿದ್ರು:
ಪ್ರಮಾಣ ವಚನ ಸ್ವೀಕಾರ ದಿನವೇ ಸಮ್ಮಿಶ್ರ ಸರ್ಕಾರಕ್ಕೆ ಮುಹೂರ್ತ:
ನಾನು ಸಚಿವನಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನವೇ ಪ್ಲಾನ್ ಮಾಡಿದ್ದೆ. ಈ ಕಾರಣಕ್ಕಾಗಿ ಯಡಿಯೂರಪ್ಪ ಮತ್ತು ಅಮಿತ್ ಶಾ ಅವರ ಭೇಟಿ ಮಾಡಿ ಯಡಿಯೂರಪ್ಪ ಅವರನ್ನ ಸಿಎಂ ಮಾಡಿದ್ರೆ ಬಿಜೆಪಿಗೆ ಬೆಂಬಲ ನೀಡುತ್ತೇವೆ ಎಂದು ಮನವೊಲಿಸಿದ್ದೆವು. ಏಳೆಂಟು ಬಾರಿ ವಿಫಲವಾದ್ರೂ ಕೊನೆಗೂ ಸರ್ಕಾರ ಪತನಗೊಳಿಸಿದ್ದೇವೆ ಎಂದು ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ ಸಂಗತಿಗಳನ್ನು ಅವರು ಹೊರಹಾಕಿದ್ದಾರೆ.
Published On - 4:50 pm, Fri, 15 November 19