ಸಿಎಂ ಪಟ್ಟಕ್ಕೆ ಕಣ್ಣಿಟ್ಟಿರೋ ಡಿ.ಕೆ. ಶಿವಕುಮಾರ್ ಬಗ್ಗೆ ರಮೇಶ್ ಜಾರಕಿಹೊಳಿ ಹೊಸ ಬಾಂಬ್
ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣರಲ್ಲ, ಬದಲಿಗೆ ಡಿಕೆ ಶಿವಕುಮಾರ್ ಮೂಲ ಕಾರಣ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸರ್ಕಾರವನ್ನು ಕೆಡವಲು ನಾನೇ ಪ್ರಮುಖ ಸೂತ್ರಧಾರನಾಗಿದ್ದೆ ಎಂದು ಸ್ಪಷ್ಟಪಡಿಸಿರುವ ಅವರು, ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂಬ ದೇವೇಗೌಡರ ಹೇಳಿಕೆಯನ್ನು ನಿರಾಕರಿಸಿದ್ದಾರೆ.
ಬೆಳಗಾವಿ, ನವೆಂಬರ್ 24: ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂಬ ಹೆಚ್.ಡಿ. ದೇವೇಗೌಡರ ಆರೋಪವನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಬೀಳಲು ಮೂಲ ಕಾರಣ ಡಿ.ಕೆ ಶಿವಕುಮಾರ್ ಎಂದಿರುವ ಜಾರಕಿಹೊಳಿ, ಆಪರೇಷನ್ ಕಮಲದ ಸೂತ್ರಧಾರ ನಾನೇ ಆಗಿದ್ದೆ. ಸಿದ್ದರಾಮಯ್ಯನವರಿಗೆ ಈ ವಿಚಾರ ಯಾವುದೇ ರೀತಿ ಸಂಬಂಧವಿರಲಿಲ್ಲ. ಡಿ.ಕೆ. ಶಿವಕುಮಾರ್ ಅವರ ಬೆಳಗಾವಿ ರಾಜಕೀಯ ಹಸ್ತಕ್ಷೇಪವೇ ಸರ್ಕಾರ ಪತನಕ್ಕೆ ಕಾರಣ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
