AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು, 5 ಕೋಟಿ ರೂಪಾಯಿಗೆ ಬೇಡಿಕೆ ಇತ್ತು: ರಮೇಶ್​ ಜಾರಕಿಹೊಳಿ

ಈ ವಿಚಾರ ನನಗೆ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು. ಮಾಜಿ ಶಾಸಕ ನಾಗರಾಜ್ ಮೂಲಕ ಈ ವಿಚಾರ ನನಗೆ ತಿಳಿದಿತ್ತು. ವಿಡಿಯೋ ಮುಂದಿಟ್ಟು 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿತ್ತು. ಆದರೆ ಇದ್ಯಾವುದರ ಬಗ್ಗೆಯೂ ನಾನು ತಲೆ ಕೆಡಿಸಿಕೊಂಡಿರಲಿಲ್ಲ: ರಮೇಶ್​ ಜಾರಕಿಹೊಳಿ

ಸಿಡಿ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು, 5 ಕೋಟಿ ರೂಪಾಯಿಗೆ ಬೇಡಿಕೆ ಇತ್ತು: ರಮೇಶ್​ ಜಾರಕಿಹೊಳಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
Skanda
|

Updated on:Mar 16, 2021 | 1:21 PM

Share

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ಮುಂದೆ ಹೇಳಿಕೆ ನೀಡಿರುವ ರಮೇಶ್​ ಜಾರಕಿಹೊಳಿ, ಈ ವಿಚಾರ ನನಗೆ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು. ಮಾಜಿ ಶಾಸಕ ನಾಗರಾಜ್ ಮೂಲಕ ಈ ವಿಚಾರ ನನಗೆ ತಿಳಿದಿತ್ತು. ವಿಡಿಯೋ ಮುಂದಿಟ್ಟು 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿತ್ತು. ಆದರೆ ಇದ್ಯಾವುದರ ಬಗ್ಗೆಯೂ ನಾನು ತಲೆ ಕೆಡಿಸಿಕೊಂಡಿರಲಿಲ್ಲ ಎಂದು ತಿಳಿಸಿದ್ದಾರೆ. ರಮೇಶ್​ ಜಾರಕಿಹೊಳಿ ಅವರ ಈ ಹೇಳಿಕೆಯನ್ನು ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ದಾಖಲಿಸಿಕೊಂಡಿದ್ದು, ಇದೇ ವೇಳೆ ಮಾಜಿ ಸಚಿವರು ಹಲವರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂಬ ಮಾಹಿತಿಯೂ ಸಿಕ್ಕಿದೆ.

ಆ ವಿಡಿಯೋದಲ್ಲಿರುವುದು ನಾನಲ್ಲವೇ ಅಲ್ಲ, ನನಗೂ ಅದಕ್ಕೂ ಸಂಬಂಧ ಇಲ್ಲ ಈ ಬಗ್ಗೆ ಎಸ್​ಐಟಿ ಮುಂದೆ ಹೇಳಿಕೆ ನೀಡಿರುವ ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ಆ ವಿಡಿಯೋದಲ್ಲಿರುವುದು ನಾನಲ್ಲ, ನನಗೂ ಅದಕ್ಕೂ ಸಂಬಂಧವೇ ಇಲ್ಲ ಎಂದು ಹೇಳಿರುವುದು ಅಚ್ಚರಿ ಮೂಡಿಸಿದೆ. ನನ್ನ ತೇಜೋವಧೆ ಮಾಡಲಿಕ್ಕಾಗಿ ಈ ಕೃತ್ಯ ಎಸಗಿದ್ದಾರೆ. ಅದೊಂದು ನಕಲಿ ವಿಡಿಯೋ. ಅದನ್ನು ಸೃಷ್ಠಿ ಮಾಡಲು ಹಲವರು ಭಾಗಿಯಾಗಿದ್ದಾರೆ. ಮೊದಲು ಈ ಕೃತ್ಯದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಿ ಎಂದು ಹೇಳಿರುವ ರಮೇಶ್​ ಜಾರಕಿಹೊಳಿ, ಹಲವು ವ್ಯಕ್ತಿಗಳ ಹೆಸರು ಮತ್ತು ಮಾಹಿತಿಯನ್ನು ಉಲ್ಲೇಖ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರಮೇಶ್ ಜಾರಕಿಹೊಳಿ ಹೇಳಿಕೆಯ ಪ್ರಮುಖ ಅಂಶಗಳು

  1. ವಿಡಿಯೋ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು
  2. ಮಾಜಿ ಶಾಸಕ ನಾಗರಾಜ್ ಮೂಲಕ ವಿಚಾರ ತಿಳಿದಿತ್ತು
  3. ವಿಡಿಯೋ ಮುಂದಿಟ್ಟು ಐದು ಕೋಟಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಅನ್ನೊ ಮಾಹಿತಿ ಇತ್ತು
  4. ಇದರ ಬಗ್ಗೆ ತಾನು ತಲೆ ಕೆಡಿಸಿಕೊಂಡಿರಲಿಲ್ಲ
  5. ನಂತ್ರ ತನ್ನ ರಾಜಕೀಯ ತೇಜೋವಧೆ ಮಾಡಲು ಹೀಗೆ ಮಾಡಿದ್ದಾರೆ
  6. ವಿಡಿಯೋದಲ್ಲಿ ಇರುವುದು ನಾನಲ್ಲ, ಅದಕ್ಕೂ ನನಗೂ ಸಂಬಂಧ ಇಲ್ಲ
  7. ವಿಡಿಯೋ ನಕಲಿಯಾಗಿ ಸೃಷ್ಠಿ ಮಾಡಿದ್ದಾರೆ
  8. ಹಲವಾರು ಜನರು ಇದರಲ್ಲಿ ಭಾಗಿಯಾಗಿದ್ದಾರೆ, ಅವರನ್ನು ಪತ್ತೆ ಮಾಡಿ
  9. ಹಲವು ವ್ಯಕ್ತಿಗಳ ಹೆಸರು ಮತ್ತು ಮಾಹಿತಿಯನ್ನು ಉಲ್ಲೇಖ ಮಾಡಿರುವ ರಮೇಶ್​ ಜಾರಕಿಹೊಳಿ

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಗೋವಾದಿಂದ ಬರಿಗೈಲಿ ಹಿಂದಿರುಗಿದ ಎಸ್​ಐಟಿ ತಂಡ? 

ಸಿಡಿ ಯುವತಿಯಿಂದ ಲೇಟೆಸ್ಟ್​ ವಿಡಿಯೋ ಬಿಡುಗಡೆ: ರಮೇಶ್​ ಜಾರಕಿಹೊಳಿ, ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಹೀಗಿದೆ

Published On - 12:12 pm, Tue, 16 March 21

Follow Us
Skanda
Skanda
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್