2 ಗಂಟೆ ಕಾಲ ವಕೀಲರ ಜೊತೆ ಚರ್ಚಿಸಿ, ಸಹೋದರ ಬಾಲಚಂದ್ರ ಜೊತೆ ಅಜ್ಞಾತ ಸ್ಥಳಕ್ಕೆ ತೆರಳಿದ ರಮೇಶ್ ಜಾರಕಿಹೊಳಿ

ತನ್ನ ವಿರುದ್ಧ ಸಿಡಿ ಲೇಡಿ ದೂರು ನೀಡುತ್ತಿದ್ದಂತೆ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಅಜ್ಞಾತ ಸ್ಥಳದಲ್ಲಿಯೇ ರಮೇಶ್​ರನ್ನು ಬಾಲಚಂದ್ರ ಜಾರಕಿಹೊಳಿ ಭೇಟಿ ಮಾಡಿದ್ದಾರೆ. ದೂರು ಸಂಬಂಧ ಜಾರಕಿಹೊಳಿ ಬ್ರದರ್ಸ್ ಮಾತುಕತೆ ನಡೆಸಲಿದ್ದಾರೆ.

2 ಗಂಟೆ ಕಾಲ ವಕೀಲರ ಜೊತೆ ಚರ್ಚಿಸಿ, ಸಹೋದರ ಬಾಲಚಂದ್ರ ಜೊತೆ ಅಜ್ಞಾತ ಸ್ಥಳಕ್ಕೆ ತೆರಳಿದ ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಎಸ್ಐಟಿ ತನಿಖೆ ಬಹುತೇಕ ಮುಕ್ತಾಯ: ಬಿ ರಿಪೋರ್ಟ್ ಯಾರ ಪರವಾಗಿ?
Edited By:

Updated on: Apr 05, 2022 | 1:13 PM

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು ನೀಡಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಕೀಲರನ್ನು ಭೇಟಿಯಾಗಿದ್ದಾರೆ. ಘಟನೆಯ ಕುರಿತು ವಕೀಲರ ಜೊತೆ ಸುಮಾರು ಎರಡು ಗಂಟೆಗಳ ಕಾಲ ನಡೆಸಿದ ಚರ್ಚೆ ಮುಕ್ತಾಯವಾಗಿದೆ. ತಮ್ಮ ಮುಂದಿನ ನಡೆಯ ಬಗ್ಗೆ ಕೆಲ ಹೊತ್ತಿನಲ್ಲಿ ಸಾಹುಕಾರ್ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಹೋದರ ಬಾಲಚಂದ್ರ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿ ಬಳಿಕ ಮುಂದಿನ ನಡೆ ತಿಳಿಸಲಿದ್ದಾರೆ.

ತನ್ನ ವಿರುದ್ಧ ಸಿಡಿ ಲೇಡಿ ದೂರು ನೀಡುತ್ತಿದ್ದಂತೆ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಅಜ್ಞಾತ ಸ್ಥಳದಲ್ಲಿಯೇ ರಮೇಶ್​ರನ್ನು ಬಾಲಚಂದ್ರ ಜಾರಕಿಹೊಳಿ ಭೇಟಿ ಮಾಡಿದ್ದಾರೆ. ದೂರು ಸಂಬಂಧ ಜಾರಕಿಹೊಳಿ ಬ್ರದರ್ಸ್ ಮಾತುಕತೆ ನಡೆಸಲಿದ್ದಾರೆ.

ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ ಹಲವಾರು ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ಎರಡನೇ ಬಾರಿಗೆ ವಿಡಿಯೋ ಮಾಡಿ ತಮ್ಮ ಮಾತುಗಳನ್ನು ತಿಳಿಸಿದ್ದಾರೆ. ಕೈಬರಹದ ಪತ್ರದ ಮುಖೇನ ತಮಗಾದ ಅನ್ಯಾಯವನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ಯುವತಿ ಕೈ ಬರಹದಲ್ಲಿ.. ನನ್ನನ್ನು ಕೊಲೆ ಮಾಡುವುದಕ್ಕೆ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ದೂರು

ನನಗೆ ವಯಸ್ಸಾಗಿದೆ, ಸಿಡಿ ತಗೊಂಡು ನಾನೇನು ಮಾಡಲಿ? ಶಾಮನೂರು ಶಿವಶಂಕರಪ್ಪ ಪ್ರಶ್ನೆ

YouTube video player

Published On - 3:06 pm, Fri, 26 March 21

Follow Us