AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿಗೆ ಏನಾಗಿತ್ತು? ಉಸಿರಾಟದ ತೊಂದರೆಯಾಗಿ, ನಿನ್ನೆ ರಾತ್ರಿಯೇ ಐಸಿಯುಗೆ ದಾಖಲು ಎಂದ ಡಾ.ರವೀಂದ್ರ

ರಮೇಶ್ ಜಾರಕಿಹೊಳಿಗೆ ಏಪ್ರಿಲ್​ ಒಂದರಂದೇ ಕೊವಿಡ್​ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಬಳಿಕ ಎರಡು ದಿನ ಹೋಮ್ ಐಸೋಲೇಷನ್​ನಲ್ಲಿ ಇದ್ದ ಅವರು ನಿನ್ನೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೋಕಾಕ್ ತಾಲ್ಲೂಕು ಆಸ್ಪತ್ರೆಯ ಐಸಿಯುನಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ನೀಡಲಾಗಿದೆ.

ರಮೇಶ್​ ಜಾರಕಿಹೊಳಿಗೆ ಏನಾಗಿತ್ತು? ಉಸಿರಾಟದ ತೊಂದರೆಯಾಗಿ, ನಿನ್ನೆ ರಾತ್ರಿಯೇ ಐಸಿಯುಗೆ ದಾಖಲು ಎಂದ ಡಾ.ರವೀಂದ್ರ
ರಮೇಶ್​ ಜಾರಕಿಹೊಳಿ, ಡಾ.ರವೀಂದ್ರ
Skanda
|

Updated on:Apr 05, 2021 | 12:07 PM

Share

ಬೆಳಗಾವಿ: ಅಶ್ಲೀಲ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ಡಾ.ರವೀಂದ್ರ ವಿವರಣೆ ನೀಡಿದ್ದು, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನಿನ್ನೆ ರಾತ್ರಿ ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಶುಗರ್, ಬಿಪಿಯಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕೊವಿಡ್ ನಿಯಮದಂತೆ ಇನ್ನೂ 5 ದಿನ ಆಸ್ಪತ್ರೆಯಲ್ಲಿರಬೇಕು ಎಂದು ತಿಳಿಸಿದ್ದಾರೆ.

ಗೋಕಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ರಮೇಶ್​ ಜಾರಕಿಹೊಳಿಗೆ ಸೂಕ್ತ ಚಿಕಿತ್ಸೆ ಒದಗಿಸಲಾಗಿದ್ದು, ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಹಿಂದಿನಿಂದಲೂ ಗೋಕಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ಬರುತ್ತಿದ್ದರು. ಸದ್ಯ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ, ಬೆಂಗಳೂರಿಗೆ ಹೋಗಿ ಬಂದಿದ್ದ ಕಾರಣ ಅವರಿಗೆ ರ‍್ಯಾಪಿಡ್ ಟೆಸ್ಟ್​ ಮಾಡಲಾಗಿದ್ದು, ಪಾಸಿಟಿವ್ ಕಾಣಿಸಿಕೊಂಡಿದೆ. ತಜ್ಞ ವೈದ್ಯರ ನಿಗಾದಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿಗೆ ಏಪ್ರಿಲ್​ ಒಂದರಂದೇ ಕೊವಿಡ್​ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಬಳಿಕ ಎರಡು ದಿನ ಹೋಮ್ ಐಸೋಲೇಷನ್​ನಲ್ಲಿ ಇದ್ದ ಅವರು ನಿನ್ನೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೋಕಾಕ್ ತಾಲ್ಲೂಕು ಆಸ್ಪತ್ರೆಯ ಐಸಿಯುನಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಅಲ್ಲಿಯ ವೈದ್ಯ ಡಾ‌.ರವೀಂದ್ರ ಅಂಟೀನ್ ಹೇಳಿದ್ದಾರೆ.

Ramesh jarkiholi

ರಮೇಶ್​ ಜಾರಕಿಹೊಳಿ

ಇದನ್ನೂ ಓದಿ: Ramesh Jarkiholi Corona Positive​: ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಗೋಕಾಕ್​ ಆರೋಗ್ಯಾಧಿಕಾರಿ ಸ್ಪಷ್ಟನೆ

ವಿಚಾರಣೆಗೆ 15 ದಿನ ಕ್ವಾರಂಟೈನ್?: ‘ರಮೇಶ್ ಜಾರಕಿಹೊಳಿಗೆ ಕೊರೊನಾ ಇದೆ’ ಎಂದ ಸಚಿವ ಭೈರತಿ ಬಸವರಾಜು

Published On - 12:05 pm, Mon, 5 April 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ