AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐ ಆಮ್ ಸಾರಿ ಅಂಕಲ್​ -ಮನೆ ಮಾಲೀಕರಿಗೆ ಫೋನ್​ ಮಾಡಿ ಕ್ಷಮೆ ಕೇಳಿದ್ದರಂತೆ ‘ಸಿಡಿ ಲೇಡಿ’!

ರಮೇಶ್ ಜಾರಕಿಹೊಳಿ ಸಿಡಿಯಲ್ಲಿರುವ ಸಂತ್ರಸ್ತೆ ವಾಸವಿದ್ದ ಮನೆಗೆ ಎಸ್​ಐಟಿ ತಂಡ ಇಂದು ಭೇಟಿ ನೀಡಿದೆ. ಆರ್​.ಟಿ.ನಗರದ ಮನೆಗೆ ಎಸ್ಐಟಿ ತಂಡ ಭೇಟಿಕೊಟ್ಟಿತು. ಎಸಿಪಿ ಧರ್ಮೇಂದ್ರ ನೇತೃತ್ವದ ತಂಡ ಮನೆಗೆ ಭೇಟಿಕೊಟ್ಟಿತು.

ಐ ಆಮ್ ಸಾರಿ ಅಂಕಲ್​ -ಮನೆ ಮಾಲೀಕರಿಗೆ ಫೋನ್​ ಮಾಡಿ ಕ್ಷಮೆ ಕೇಳಿದ್ದರಂತೆ ‘ಸಿಡಿ ಲೇಡಿ’!
ಸಂತ್ರಸ್ತೆ ವಾಸವಿದ್ದ ಮನೆಗೆ ಎಸ್​ಐಟಿ ತಂಡ ಭೇಟಿ
KUSHAL V
|

Updated on:Mar 17, 2021 | 10:14 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿಯಲ್ಲಿರುವ ಸಂತ್ರಸ್ತೆ ವಾಸವಿದ್ದ ಮನೆಗೆ ಎಸ್​ಐಟಿ ತಂಡ ಇಂದು ಭೇಟಿ ನೀಡಿದೆ. ಆರ್​.ಟಿ.ನಗರದ ಮನೆಗೆ ಎಸ್ಐಟಿ ತಂಡ ಭೇಟಿಕೊಟ್ಟಿತು. ಎಸಿಪಿ ಧರ್ಮೇಂದ್ರ ನೇತೃತ್ವದ ತಂಡ ಮನೆಗೆ ಭೇಟಿಕೊಟ್ಟಿತು. ಈ ವೇಳೆ, ಯುವತಿ ವಾಸವಿದ್ದ ರೂಮ್​ನ ಅಧಿಕಾರಿಗಳು ಪರಿಶೀಲಿಸಿದರು. ಬಳಿಕ, ಕಟ್ಟಡದ ಮಾಲೀಕರಿಂದ ಎಸ್​ಐಟಿ ಟೀಮ್​ ಮಾಹಿತಿ ಪಡೆಯಿತು. ಸಿಡಿಯಲ್ಲಿನ ಯುವತಿ ಇತ್ತೀಚೆಗೆ ನಿಮ್ಮನ್ನು ಸಂಪರ್ಕಿಸಿದ್ರಾ? ಆಕೆ ಇಲ್ಲಿದ್ದಾಗ ಬೇರೆ ಯಾರಾದರೂ ಇಲ್ಲಿಗೆ ಬರುತ್ತಿದ್ರಾ? ಎಂದು ಮನೆ ಮಾಲೀಕರನ್ನು ಪ್ರಶ್ನಿಸಿದರಂತೆ.

ಈ ವೇಳೆ, ವಿಡಿಯೋ ಬಹಿರಂಗವಾಗುತ್ತಿದ್ದಂತೆ ಸಂತ್ರಸ್ತೆ ನಾಪತ್ತೆ ಆಗಿದ್ದಳು. ಆದರೆ, 3-4 ದಿನದ ಹಿಂದೆ ನನಗೆ ಕರೆ ಮಾಡಿದ್ದರು ಎಂದು ಮನೆ ಮಾಲೀಕರು ಎಸ್​ಐಟಿಗೆ ಮಾಹಿತಿ ನೀಡಿದ್ದಾರಂತೆ. ಅಷ್ಟೇ ಅಲ್ಲ, ಮಾಲೀಕರಿಗೆ ಕರೆಮಾಡಿ ಸಂತ್ರಸ್ತೆ ಕ್ಷಮೆ ಸಹ ಕೇಳಿದ್ದರು ಎಂಬ ಮಾಹಿತಿ ತಂಡಕ್ಕೆ ಲಭ್ಯವಾಗಿದೆ.

ಸಂಜೆ 6.30ರ ಸುಮಾರಿಗೆ ನಿವಾಸಕ್ಕೆ ಎಸ್ಐಟಿ ತಂಡ  ಭೇಟಿ ನೀಡಿತ್ತು. 2 ಬಾರಿ ನೋಟಿಸ್​​ ನೀಡಿದರೂ ಸಂತ್ರಸ್ತೆ ಪ್ರತಿಕ್ರಯಿಸದ ಹಿನ್ನೆಲೆಯಲ್ಲಿ ಮನೆ ಮಾಲೀಕರಿಂದ ತಂಡ ಸುದೀರ್ಘ ಮಾಹಿತಿ ಪಡೆದಿದೆ. ಜೊತೆಗೆ, ಸಂತ್ರಸ್ತೆಗೆ  ಸಂಬಂಧಿಸಿದ ಕೆಲ ವಸ್ತುಗಳು, ದಾಖಲೆಗಳು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತೆಯ ವೃತ್ತಿಗೆ ಸಂಬಂಧಿಸಿದ ಕೆಲ ದಾಖಲೆಗಳನ್ನ ವಶಕ್ಕೆ ಪಡೆಯಲಾಗಿದೆ.

ಅಂದ ಹಾಗೆ, ನನ್ನ ಮಗಳನ್ನ ಅಪಹರಿಸಲಾಗಿದೆ ಎಂದು ನಿನ್ನೆ ದೂರು ದಾಖಲಾಗಿತ್ತು. ಬೆಳಗಾವಿಯ ಎಪಿಎಂಸಿ ಯಾರ್ಡ್ ಠಾಣೆಗೆ ಸಂತ್ರಸ್ತೆ ತಂದೆ ದೂರು ದಾಖಲಿಸಿದ್ದರು.

‘ಇದಕ್ಕೆ ಹಣ ಖರ್ಚು ಮಾಡಿದ್ದು ಯಾರು?’ ಇನ್ನು, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಪಕ್ಷ ಟ್ವೀಟ್​ ಮಾಡಿದೆ. ಬ್ಲ್ಯಾಕ್​ಮೇಲ್​ ಮಾಡಿದವರಿಗೆ ಜಾರಕಿಹೊಳಿಯಿಂದ ಹಣ ಸಂದಾಯವಾಗಿದೆ ಎಂದು ವರದಿಯಾಗಿದೆ. ಇದಕ್ಕೆ ಹಣ ಖರ್ಚು ಮಾಡಿದ್ದು ಯಾರು? ಇಲ್ಲಿ ಹಣಕಾಸು ಅವ್ಯವಹಾರ ನಡೆದಿರಬೇಕಲ್ಲವೇ? ಇಡಿ, ಆದಾಯ ತೆರಿಗೆ ಇಲಾಖೆಗಳು ಏಕೆ ಕಣ್ಮುಚ್ಚಿ ಕೂತಿವೆ?ತನಿಖಾ ಸಂಸ್ಥೆಗಳು ಇರುವುದು ಅಕ್ರಮ ತಡೆಯುವುದಕ್ಕಾ? ಅಥವಾ ಪ್ರತಿಪಕ್ಷಗಳ ಮೇಲೆ ದಾಳಿ ಮಾಡುವುದಕ್ಕಾ? ಎಂದು ಟ್ವೀಟ್ ಮೂಲಕ ಬಿಜೆಪಿಗೆ ಕಾಂಗ್ರೆಸ್​ ಪ್ರಶ್ನೆ ಮಾಡಿದೆ.

ಇದನ್ನೂ ಓದಿ: ‘ಸಿಡಿ ಲೇಡಿ’ಗೆ ಎಸ್‌ಐಟಿಯಿಂದ ಮತ್ತೆ ನೋಟಿಸ್ ಜಾರಿ

Published On - 9:39 pm, Wed, 17 March 21

Follow Us
KUSHAL V
KUSHAL V
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ