AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐ ಆಮ್ ಸಾರಿ ಅಂಕಲ್​ -ಮನೆ ಮಾಲೀಕರಿಗೆ ಫೋನ್​ ಮಾಡಿ ಕ್ಷಮೆ ಕೇಳಿದ್ದರಂತೆ ‘ಸಿಡಿ ಲೇಡಿ’!

ರಮೇಶ್ ಜಾರಕಿಹೊಳಿ ಸಿಡಿಯಲ್ಲಿರುವ ಸಂತ್ರಸ್ತೆ ವಾಸವಿದ್ದ ಮನೆಗೆ ಎಸ್​ಐಟಿ ತಂಡ ಇಂದು ಭೇಟಿ ನೀಡಿದೆ. ಆರ್​.ಟಿ.ನಗರದ ಮನೆಗೆ ಎಸ್ಐಟಿ ತಂಡ ಭೇಟಿಕೊಟ್ಟಿತು. ಎಸಿಪಿ ಧರ್ಮೇಂದ್ರ ನೇತೃತ್ವದ ತಂಡ ಮನೆಗೆ ಭೇಟಿಕೊಟ್ಟಿತು.

ಐ ಆಮ್ ಸಾರಿ ಅಂಕಲ್​ -ಮನೆ ಮಾಲೀಕರಿಗೆ ಫೋನ್​ ಮಾಡಿ ಕ್ಷಮೆ ಕೇಳಿದ್ದರಂತೆ ‘ಸಿಡಿ ಲೇಡಿ’!
ಸಂತ್ರಸ್ತೆ ವಾಸವಿದ್ದ ಮನೆಗೆ ಎಸ್​ಐಟಿ ತಂಡ ಭೇಟಿ
KUSHAL V
|

Updated on:Mar 17, 2021 | 10:14 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿಯಲ್ಲಿರುವ ಸಂತ್ರಸ್ತೆ ವಾಸವಿದ್ದ ಮನೆಗೆ ಎಸ್​ಐಟಿ ತಂಡ ಇಂದು ಭೇಟಿ ನೀಡಿದೆ. ಆರ್​.ಟಿ.ನಗರದ ಮನೆಗೆ ಎಸ್ಐಟಿ ತಂಡ ಭೇಟಿಕೊಟ್ಟಿತು. ಎಸಿಪಿ ಧರ್ಮೇಂದ್ರ ನೇತೃತ್ವದ ತಂಡ ಮನೆಗೆ ಭೇಟಿಕೊಟ್ಟಿತು. ಈ ವೇಳೆ, ಯುವತಿ ವಾಸವಿದ್ದ ರೂಮ್​ನ ಅಧಿಕಾರಿಗಳು ಪರಿಶೀಲಿಸಿದರು. ಬಳಿಕ, ಕಟ್ಟಡದ ಮಾಲೀಕರಿಂದ ಎಸ್​ಐಟಿ ಟೀಮ್​ ಮಾಹಿತಿ ಪಡೆಯಿತು. ಸಿಡಿಯಲ್ಲಿನ ಯುವತಿ ಇತ್ತೀಚೆಗೆ ನಿಮ್ಮನ್ನು ಸಂಪರ್ಕಿಸಿದ್ರಾ? ಆಕೆ ಇಲ್ಲಿದ್ದಾಗ ಬೇರೆ ಯಾರಾದರೂ ಇಲ್ಲಿಗೆ ಬರುತ್ತಿದ್ರಾ? ಎಂದು ಮನೆ ಮಾಲೀಕರನ್ನು ಪ್ರಶ್ನಿಸಿದರಂತೆ.

ಈ ವೇಳೆ, ವಿಡಿಯೋ ಬಹಿರಂಗವಾಗುತ್ತಿದ್ದಂತೆ ಸಂತ್ರಸ್ತೆ ನಾಪತ್ತೆ ಆಗಿದ್ದಳು. ಆದರೆ, 3-4 ದಿನದ ಹಿಂದೆ ನನಗೆ ಕರೆ ಮಾಡಿದ್ದರು ಎಂದು ಮನೆ ಮಾಲೀಕರು ಎಸ್​ಐಟಿಗೆ ಮಾಹಿತಿ ನೀಡಿದ್ದಾರಂತೆ. ಅಷ್ಟೇ ಅಲ್ಲ, ಮಾಲೀಕರಿಗೆ ಕರೆಮಾಡಿ ಸಂತ್ರಸ್ತೆ ಕ್ಷಮೆ ಸಹ ಕೇಳಿದ್ದರು ಎಂಬ ಮಾಹಿತಿ ತಂಡಕ್ಕೆ ಲಭ್ಯವಾಗಿದೆ.

ಸಂಜೆ 6.30ರ ಸುಮಾರಿಗೆ ನಿವಾಸಕ್ಕೆ ಎಸ್ಐಟಿ ತಂಡ  ಭೇಟಿ ನೀಡಿತ್ತು. 2 ಬಾರಿ ನೋಟಿಸ್​​ ನೀಡಿದರೂ ಸಂತ್ರಸ್ತೆ ಪ್ರತಿಕ್ರಯಿಸದ ಹಿನ್ನೆಲೆಯಲ್ಲಿ ಮನೆ ಮಾಲೀಕರಿಂದ ತಂಡ ಸುದೀರ್ಘ ಮಾಹಿತಿ ಪಡೆದಿದೆ. ಜೊತೆಗೆ, ಸಂತ್ರಸ್ತೆಗೆ  ಸಂಬಂಧಿಸಿದ ಕೆಲ ವಸ್ತುಗಳು, ದಾಖಲೆಗಳು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತೆಯ ವೃತ್ತಿಗೆ ಸಂಬಂಧಿಸಿದ ಕೆಲ ದಾಖಲೆಗಳನ್ನ ವಶಕ್ಕೆ ಪಡೆಯಲಾಗಿದೆ.

ಅಂದ ಹಾಗೆ, ನನ್ನ ಮಗಳನ್ನ ಅಪಹರಿಸಲಾಗಿದೆ ಎಂದು ನಿನ್ನೆ ದೂರು ದಾಖಲಾಗಿತ್ತು. ಬೆಳಗಾವಿಯ ಎಪಿಎಂಸಿ ಯಾರ್ಡ್ ಠಾಣೆಗೆ ಸಂತ್ರಸ್ತೆ ತಂದೆ ದೂರು ದಾಖಲಿಸಿದ್ದರು.

‘ಇದಕ್ಕೆ ಹಣ ಖರ್ಚು ಮಾಡಿದ್ದು ಯಾರು?’ ಇನ್ನು, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಪಕ್ಷ ಟ್ವೀಟ್​ ಮಾಡಿದೆ. ಬ್ಲ್ಯಾಕ್​ಮೇಲ್​ ಮಾಡಿದವರಿಗೆ ಜಾರಕಿಹೊಳಿಯಿಂದ ಹಣ ಸಂದಾಯವಾಗಿದೆ ಎಂದು ವರದಿಯಾಗಿದೆ. ಇದಕ್ಕೆ ಹಣ ಖರ್ಚು ಮಾಡಿದ್ದು ಯಾರು? ಇಲ್ಲಿ ಹಣಕಾಸು ಅವ್ಯವಹಾರ ನಡೆದಿರಬೇಕಲ್ಲವೇ? ಇಡಿ, ಆದಾಯ ತೆರಿಗೆ ಇಲಾಖೆಗಳು ಏಕೆ ಕಣ್ಮುಚ್ಚಿ ಕೂತಿವೆ?ತನಿಖಾ ಸಂಸ್ಥೆಗಳು ಇರುವುದು ಅಕ್ರಮ ತಡೆಯುವುದಕ್ಕಾ? ಅಥವಾ ಪ್ರತಿಪಕ್ಷಗಳ ಮೇಲೆ ದಾಳಿ ಮಾಡುವುದಕ್ಕಾ? ಎಂದು ಟ್ವೀಟ್ ಮೂಲಕ ಬಿಜೆಪಿಗೆ ಕಾಂಗ್ರೆಸ್​ ಪ್ರಶ್ನೆ ಮಾಡಿದೆ.

ಇದನ್ನೂ ಓದಿ: ‘ಸಿಡಿ ಲೇಡಿ’ಗೆ ಎಸ್‌ಐಟಿಯಿಂದ ಮತ್ತೆ ನೋಟಿಸ್ ಜಾರಿ

Published On - 9:39 pm, Wed, 17 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!