AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ಪರ ವಕೀಲರಿಂದ ಎಸ್​ಐಟಿ ತನಿಖಾದಿಕಾರಿಗಳ ಮೇಲೆ ಒತ್ತಡ ಹೇರುವ ಯತ್ನ: ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್

ನನ್ನ ಕಕ್ಷಿದಾರ ರಮೇಶ್ ವಿರುದ್ಧದ ಆರೋಪಗಳು ಸುಳ್ಳು. ಯುವತಿ ಹಾಗೂ ಆಕೆಯ ಪರ ವಕೀಲರು ಹಸ್ತಕ್ಷೇಪ ಮಾಡುವುದು, ಸುಳ್ಳು ಹಾಗೂ ಆಧಾರರಹಿತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಈ ಮೂಲಕ ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಯುವತಿ ಪರ ವಕೀಲರಿಂದ ಎಸ್​ಐಟಿ ತನಿಖಾದಿಕಾರಿಗಳ ಮೇಲೆ ಒತ್ತಡ ಹೇರುವ ಯತ್ನ: ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 05, 2022 | 12:51 PM

Share

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್‌ ಸುಂದರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಯುವತಿಯ ಪರ ವಕೀಲರು ಆಧಾರರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಮೂಲಕ, ಎಸ್​​ಐಟಿ, ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರುವ ಯತ್ನ ಮಾಡಲಾಗುತ್ತಿದೆ. ತನಿಖೆಯ ದಾರಿ ತಪ್ಪಿಸುವ ಉದ್ದೇಶದಿಂದ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ರಮೇಶ್ ಪರ ವಕೀಲ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್​ಐಟಿ ತನಿಖೆ ಮೇಲೆ ಯುವತಿ ಪರ ವಕೀಲರಿಂದ ಹಸ್ತಕ್ಷೇಪವಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಅಡ್ಡಿ ಮಾಡುವ ಯತ್ನ ನಡೆಯುತ್ತಿದೆ. ರಾಜಕಾರಣಿಗಳ ವಿರುದ್ಧ ಸಂಘಟಿತ ಅಪರಾಧ ನಡೆಯುತ್ತಿದೆ. ಅಂತಹವರ ವಿರುದ್ಧ ಕ್ರಮ ತಪ್ಪಿಸಲು ಯತ್ನವಾಗುತ್ತಿದೆ ಎಂದು ಶ್ಯಾಮ್ ಸುಂದರ್ ಆರೋಪಿಸಿದ್ದಾರೆ.

ನನ್ನ ಕಕ್ಷಿದಾರ ರಮೇಶ್ ವಿರುದ್ಧದ ಆರೋಪಗಳು ಸುಳ್ಳು. ಯುವತಿ ಹಾಗೂ ಆಕೆಯ ಪರ ವಕೀಲರು ಹಸ್ತಕ್ಷೇಪ ಮಾಡುವುದು, ಸುಳ್ಳು ಹಾಗೂ ಆಧಾರರಹಿತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಈ ಮೂಲಕ ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಎಸ್​ಐಟಿ ಮೇಲೆ ಸರ್ಕಾರದ ಒತ್ತಡವಿದೆ ಎಂದು ಆರೋಪಿಸಿದ್ದರು ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸ್​ ಆಯುಕ್ತರಿಗೆ ಸಂತ್ರಸ್ತೆ ದೂರು ನೀಡುತ್ತಿದ್ದಾರೆ ಎಂದು ಟಿವಿ9ಗೆ ವಕೀಲ ಸೂರ್ಯ ಮುಕುಂದ​ರಾಜ್​ ಪ್ರತಿಕ್ರಿಯೆ ನೀಡಿದ್ದರು. ಸಂತ್ರಸ್ತೆ ಎಸ್​ಐಟಿ ತನಿಖೆಯನ್ನು ವಿರೋಧ ಮಾಡುತ್ತಿಲ್ಲ. ಎಸ್​ಐಟಿ ಮೇಲೆ ಒತ್ತಡವಿದೆ ಎಂದು ಉಲ್ಲೇಖಿಸಿರುತ್ತಾರೆ ಅಷ್ಟೆ. ತನ್ನ ಗಮನಕ್ಕೆ ತರದೆ ಎಸ್​ಪಿಪಿ ನೇಮಕ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಎಸ್​ಐಟಿ ತನಿಖೆಯ ಎಲ್ಲಾ ಮಾಹಿತಿ ಸೋರಿಕೆ ಆಗುತ್ತಿದೆ. ಆರೋಪಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಹಕರಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಹೇಳಿದ್ದರು.

ಎಲ್ಲಕ್ಕಿಂತ ಮಿಗಿಲಾಗಿ ಆರೋಪಿಯ ದೂರಿನಲ್ಲಿ ಸಂತ್ರಸ್ತೆ ಹೆಸರಿಲ್ಲ. ರಮೇಶ್ ಜಾರಕಿಹೊಳಿ ದೂರಿನಲ್ಲಿ ಸಂತ್ರಸ್ತೆ ಬಗ್ಗೆ ಉಲ್ಲೇಖಿಸಿಲ್ಲ. ಆದರೂ ಎಸ್​ಐಟಿ ಅಧಿಕಾರಿಗಳು ಸಂತ್ರಸ್ತೆ ಪಿಜಿ ಮೇಲೆ ದಾಳಿ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದರು.

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸ್​ ಆಯುಕ್ತರ​ ಕಚೇರಿ ಬಳಿ ಸಂತ್ರಸ್ತ ಯುವತಿ ಪರ ವಕೀಲ ಕೆ.ಎನ್. ಜಗದೀಶ್ ಮಾತನಾಡಿದ್ದರು. ಎಸ್ಐಟಿ ತನಿಖೆ ಹಾದಿ ಸರಿ ಇಲ್ಲ, ಹಾದಿ ತಪ್ಪಿಸಲಾಗುತ್ತಿದೆ. ನನಗೆ ಎಸ್​ಐಟಿ ತನಿಖೆ ಮೇಲೆ ನಂಬಿಕೆ ಕಾಣಿಸುತ್ತಿಲ್ಲ ಎಂದಿದ್ದಾರೆ. ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನಂಬಿಕೆ ಇಲ್ಲವೆಂದಿದ್ದಾಳೆ. ಸಂತ್ರಸ್ತೆಯನ್ನೇ ಆರೋಪಿ ಎಂಬಂತೆ ಬಿಂಬಿಸಲಾಗುತ್ತಿದೆ. ಆರೋಪಿ ರಮೇಶ್​ರನ್ನ ಹೊರಗೆ ಓಡಾಡಲು ಬಿಟ್ಟಿದ್ದಾರೆ. ಸ್ವತಃ ಸಿಎಂ ಅವರೇ ಆರೋಪಿಯ ಪರವಾಗಿ ನಿಂತಂತಿದೆ. ರಮೇಶ್​ ಕುರಿತು ಸಿಎಂ ಬಿಎಸ್​ವೈ ಹೇಳಿಕೆ ಕೊಡುತ್ತಾರೆ. ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಹೊರಬರ್ತಾರೆ ಎನ್ನುತ್ತಾರೆ. ಸಿಎಂ ಯಡಿಯೂರಪ್ಪ ಹೇಳಿಕೆಯಿಂದಲೇ ಎಸ್​ಐಟಿ ಮೇಲೆ ಸರ್ಕಾರದ ಒತ್ತಡವಿರುವುದು ಗೊತ್ತಾಗುತ್ತದೆ. ತನಿಖೆ ಸ್ವತಂತ್ರವಾಗಿ ನಡೆಯುತ್ತಿಲ್ಲ, ಅತಂತ್ರವಾಗಿ ನಡೀತಿದೆ ಎಂದು ಜಗದೀಶ್ ಹೇಳಿದ್ದರು.

ಇದನ್ನೂ ಓದಿ: ಎಸ್​ಐಟಿ ಮೇಲೆ ಸರ್ಕಾರದ ಒತ್ತಡವಿದೆ: ವಕೀಲರಾದ ಕೆ.ಎನ್. ಜಗದೀಶ್, ಸೂರ್ಯ ಮುಕುಂದರಾಜ್ ಆರೋಪ

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನನ್ನು ಯಾರೂ ಅಪಹರಿಸಿರಲಿಲ್ಲ, ಸ್ನೇಹಿತನೊಂದಿಗೆ ನಾನೇ ಗೋವಾ ಹೋಗಿದ್ದೆ ಎಂದ ಸಂತ್ರಸ್ತೆ

Published On - 10:09 pm, Sun, 4 April 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು