AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್, ಮಾಸ್ಟರ್​ ಮೈಂಡ್​​ ಪಶ್ಚಿಮ ಬಂಗಾಳದಲ್ಲಿ ಎನ್​ಐಎ ವಶಕ್ಕೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್​​ ಮತ್ತು ಮಾಸ್ಟರ್​​ಮೈಂಡ್​ನನ್ನು ವಶಪಡಿಸಿಕೊಳ್ಳುವಲ್ಲಿ ಕೊನೆಗೂ ರಾಷ್ಟ್ರೀಯ ತನಿಖಾ ದಳ ಯಶಸ್ವಿಯಾಗಿದೆ. ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಪಶ್ಚಿಮ ಬಂಗಾಳದಲ್ಲಿ ವಶಕ್ಕೆ ಪಡೆಯಲಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್, ಮಾಸ್ಟರ್​ ಮೈಂಡ್​​ ಪಶ್ಚಿಮ ಬಂಗಾಳದಲ್ಲಿ ಎನ್​ಐಎ ವಶಕ್ಕೆ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಮಾಸ್ಟರ್​ ಮೈಂಡ್​​ಗಳು ಪಶ್ಚಿಮ ಬಂಗಾಳದಲ್ಲಿ ಎನ್​ಐಎ ವಶಕ್ಕೆ
TV9 Web
| Edited By: |

Updated on:Apr 12, 2024 | 11:12 AM

Share

ಬೆಂಗಳೂರು, ಏಪ್ರಿಲ್ 12: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast case) ಪ್ರಕರಣದ ಬಾಂಬರ್ ಹಾಗೂ ಮತ್ತೊಬ್ಬ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ. ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಖಚಿತ ಮಾಹಿತಿ ಮತ್ತು ಗುಪ್ತಚರ ಇಲಾಖೆಗೆ ದೊರೆತ ಸುಳಿವಿನ ಆಧಾರದಲ್ಲಿ ಎನ್ಐಎ ತಂಡವು ಹಲವಾರು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಭಯೋತ್ಪಾದಕರನ್ನು ಪಶ್ಚಿಮ ಬಂಗಾಳದಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಉಗ್ರರು ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಎನ್​ಐಎ ಅಧಿಕಾರಿಗಳು ಇನ್ನಷ್ಟೇ ಅಧಿಕೃತ ಹೇಳಿಕೆ ನೀಡಬೇಕಿದೆ.

ಬಾಂಬರ್​​ನನ್ನು ಪತ್ತೆಹಚ್ಚಿದ್ದು ಹೇಗೆ?

ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್‌ ಪತ್ತೆಗೆ ಆತ ಧರಿಸಿದ್ದ ಕ್ಯಾಪ್‌ನ ಸಹಾಯದಿಂದ ಕಾರ್ಯಾಚಣೆ ನಡೆಸಲಾಗಿತ್ತು. ಮತೀನ್ ತಾಹಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮುಸ್ಸಾವಿರ್ ಹುಸೇನ್ ಶಾಜಿಬ್​ನದ್ದೇ ಕೃತ್ಯ ಎಂಬುದು ದೃಢಪಟ್ಟಿತ್ತು. ನಂತರ ಆತನ ಪತ್ತೆಗೆ ಬಲೆಬೀಸಲಾಗಿತ್ತು. ಶಂಕಿತ ಭಯೋತ್ಪಾದಕ ಕರ್ನಾಟಕ ಮೂಲದವನಾಗಿದ್ದು, ಮಲೆನಾಡು ಪ್ರದೇಶದಲ್ಲಿ ಉಗ್ರಗಾಮಿ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಇದೆ.

ಸದ್ಯ ವಶಕ್ಕೆ ಪಡೆಯಲಾಗಿರುವ ಇಬ್ಬರನ್ನು ವಿಶೇಷ ನ್ಯಾಯಾಲಯಕ್ಕೆ ಎನ್​ಐಎ ಹಾಜರುಪಡಿಸಲಿದೆ. ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗೆ ವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಲಿದೆ.

ಜೈಲಿನಲ್ಲಿದ್ದವರ ವಿಚಾರಣೆಯೂ ನೆರವಿಗೆ ಬಂತು

ಈಗಾಗಲೇ ಭಯೋತ್ಪಾದನೆ ಚಟುವಟಿಕೆಗಳ ಶಂಕೆಯ ಮೇಲೆ ಜೈಲಿನಲ್ಲಿರುವ ಉಗ್ರಗಾಮಿಗಳನ್ನು ವಿಚಾರಣೆಗೆ ಒಳಪಡಿಸಿದ್ದೂ ಸಹ ಬಾಂಬರ್​​ನ ಪತ್ತೆಗೆ ನೆರವಾಯಿತು. ಈ ವೇಳೆ, ಜೈಲಿನಲ್ಲಿದ್ದ ಶಂಕಿತ ಉಗ್ರ ಶಾರಿಕ್, ಮತೀನ್ ಮತ್ತು ಈಗ ವಶಕ್ಕೆ ಪಡೆಯಲಾಗಿರುವ ಮುಸ್ಸಾವಿರ್ ಹುಸೇನ್ ನಡುವೆ ಸಂಪರ್ಕ ಇರುವುದೂ ಬಹಿರಂಗಗೊಂಡಿತ್ತು. ಕಳೆದ 3-4 ವರ್ಷಗಳಿಂದ ಅಧಿಕಾರಿಗಳಿಂದ ತಪ್ಪಿಸಿಕೊಳ್ಳುತ್ತಿದ್ದರೂ, ಶಂಕಿತನ ಗುರುತು, ವಿಳಾಸ ಮತ್ತು ಇತಿಹಾಸಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಕಲೆಹಾಕುವಲ್ಲಿ ಎನ್​ಐಎ ಅಧಿಕಾರಿಗಳು ಯಶಸ್ವಿಯಾಗಿದ್ದರು.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ; ಕೊನೆಗೂ ಶಂಕಿತನ ಜಾಡು ಹಿಡಿದ ಪೊಲೀಸರು, ಬಂಧನಕ್ಕಾಗಿ ತೀವ್ರ ಶೋಧ

ಮಾರ್ಚ್ ಒಂದರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟದಲ್ಲಿ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಬಾಂಬ್ ಇಟ್ಟಿದ್ದ ವ್ಯಕ್ತಿಯ ಪತ್ತೆಗೆ ನಂತರ ಶೋಧ ಕಾರ್ಯ ತೀವ್ರಗೊಳಿಸಲಾಗಿತ್ತು. ಬಳಿಕ ತನಿಖೆಯ ಹೊಣೆಯನ್ನು ಎನ್​ಐಎಗೆ ವಹಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 am, Fri, 12 April 24

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!