AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾಯ್ತು ರಾಮಮಂದಿರ ಉದ್ಘಾಟನೆ ವೇಳೆ ನಡೆದಿದ್ದ ಕಾರ್ಯಕ್ರಮ !

ಮಾರ್ಚ್​ 1 ರಂದು ಬೆಂಗಳೂರಿನ ವೈಟ್​​ಫೀಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿತ್ತು. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸುತ್ತಿದೆ. ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಳಿಸಿದ ಮತ್ತು ಸ್ಫೋಟಕ್ಕೆ ಪ್ಲಾನ್​ ಮಾಡಿದ್ದ ಉಗ್ರರನ್ನು ಎನ್​ಐಎ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯಲ್ಲಿ ಕೆಫೆಯಲ್ಲೇ ಸ್ಫೋಟಗೊಳಿಸಿದ ಕಾರಣವನ್ನು ಉಗ್ರರು ಬಾಯಿ ಬಿಟ್ಟಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾಯ್ತು ರಾಮಮಂದಿರ ಉದ್ಘಾಟನೆ ವೇಳೆ ನಡೆದಿದ್ದ ಕಾರ್ಯಕ್ರಮ !
ರಾಮೇಶ್ವರಂ ಕೆಫೆ
Jagadisha B
| Edited By: |

Updated on:Apr 16, 2024 | 10:17 AM

Share

ಬೆಂಗಳೂರು, ಏಪ್ರಿಲ್​ 16: ವೈಟ್​​ಫಿಲ್ಡ್​​ನಲ್ಲಿನ ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast) ಪ್ರಕರಣದ ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಉಗ್ರರು (Terrorists) ಹಲವು ವಿಚಾರಗಳನ್ನು ಬಾಯಿಬಿಟ್ಟಿದ್ದು, ವೈಟ್​​ಫೀಲ್ಡ್​​ನ ರಾಮೇಶ್ವರಂ ಕೆಫೆಯಲ್ಲೇ ಸ್ಪೋಟಗೊಳಿಸಲು ಕಾರಣವೇನೆಂದು ಹೇಳಿದ್ದಾರೆ. ಉಗ್ರರು ಮೊದಲು ​ವೈಟ್​ಫೀಲ್ಡ್​​​ನ ಯಾವುದಾರೂ ಒಂದು ಐಟಿ ಕಂಪನಿಯಲ್ಲಿ ಸ್ಫೋಟಗೊಳಿಸಲು ನಿರ್ಧರಿಸಿದ್ದರು.

ವೈಟ್​ಫೀಲ್ಡ್​ನಲ್ಲಿ ಸ್ಫೋಟಗೊಳಿಸಬೇಕೆಂದು ಬಂಧಿತ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವೀರ್ ಹುಸೇನ್ ಉಗ್ರರು ಯೋಜಿಸಿದ್ದರು. ಬೆಂಗಳೂರಿನಲ್ಲಿ ವೈಟ್​ಫೀಲ್ಡ್ ಸ್ಪೆಷಲ್ ಎಕನಾಮಿಕ್​ ಜೋನ್​​ (SEZ)​ ಪ್ರದೇಶವಾಗಿದೆ. ಈ ಪ್ರದೇಶದಲ್ಲಿ ದೊಡ್ಡ ದೊಡ್ಡ ಐಟಿಬಿಟಿ ಕಂಪನಿಗಳಿವೆ. ಸಾವಿರಾರು ಜನ ಟೆಕ್ಕಿಗಳು ಕೆಲಸ ಮಾಡುತ್ತಾರೆ. ಇಲ್ಲಿ ಬಾಂಬ್ ಸ್ಫೋಟಿಸಿದರೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತೆ ಅಂತ ಉಗ್ರರು ವೈಟ್​ಫೀಲ್ಡ್ ಆಯ್ಕೆ ಮಾಡಿಕೊಂಡಿದ್ದರು.

ಈ ಸಂಬಂಧ ಉಗ್ರರು ವೈಟ್​ಫೀಲ್ಡ್​​ನ ಹಲವೆಡೆ ಓಡಾಡಿದ್ದರು. ಆದರೆ ಐಟಿಬಿಟಿ ಏರಿಯಾದಲ್ಲಿ ಬಾಂಬ್ ಇಡುವುದು ಅಷ್ಟು ಸುಲಭವಲ್ಲ. ಕಂಪನಿಗಳಲ್ಲಿ ಟೈಟ್ ಸೆಕ್ಯುರಿಟಿ, ಸಿಸಿಟಿವಿಗಳ ಕಣ್ಗಾವಲು, ಮೆಟಲ್ ಡಿಟೆಕ್ಟರ್ಸ್ ಇರುತ್ತೆ. ಇದೆಲ್ಲವನ್ನು ಗಮನಿಸಿದ್ದ ಉಗ್ರರು ಕಂಪನಿ ಒಳಗೆ ಹೋಗುವುದು ಸುಲಭವಲ್ಲವೆಂದು ಅರಿತರು. ನಂತರ ತಮ್ಮ ಯೋಚನೆ ಬದಲಾಯಿಸಿ ಅದೇ ಭಾಗದಲ್ಲಿ ಯಾವುದಾರೂ ಒಂದು ಸ್ಥಳದಲ್ಲಿ ಸ್ಫೋಟಗೊಳಿಸಬೇಕೆಂದು ಪ್ಲಾನ್​ ಮಾಡಿದರು.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ನೆಲೆಸಿದ್ದ ಬಂಧಿತ ಉಗ್ರರ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗ

ಆಗ ಉಗ್ರರಿಗೆ ಕಂಡಿದ್ದು ರಾಮೇಶ್ವರಂ ಕೆಫೆ. ಈ ರಾಮೇಶ್ವರಂ ಕೆಫೆಗೆ ಹೆಚ್ಚು ಜನ ಬರುತ್ತಾರೆ. ಜೊತೆಗೆ ಟೆಕ್ಕಿಗಳು ಕೂಡ ಬರುತ್ತಾರೆ. ಮತ್ತು ರಾಮಮಂದಿರ ಉದ್ಘಾಟನೆ ಸಮಯದಲ್ಲಿ ಕೆಫೆ ಮುಂಭಾಗದಲ್ಲಿ ಸಂಭ್ರಮಾಚರಣೆ ಕೂಡ ನಡೆದಿತ್ತು. ಇದನ್ನೆಲ್ಲ ಗಮನಿಸಿದ್ದ ಉಗ್ರರು ಕೆಫೆಯಲ್ಲೇ ಸ್ಫೋಟಗೊಳಿಸಲು ನಿರ್ಧರಿಸಿದರು.

ಅಲ್ಲದೆ ರಾಮೇಶ್ವರಂ ಕೆಫೆ ಒಳಗೆ ಹೋಗಲು ಯಾವುದೇ ಅಡೆತಡೆ ಇರಲಿಲ್ಲ. ಸೆಕ್ಯುರಿಟಿ, ಮೆಟಲ್ ಡಿಟೆಕ್ಟರ್ ಕೂಡ ಇರಲಿಲ್ಲ. ಅದ್ದರಿಂದ ಬಾಂಬ್ ಸ್ಫೋಟಗೊಳಿಸಲು ರಾಮೇಶ್ವರಂ ಕೆಫೆ ಸೂಕ್ತ ಸ್ಥಳವೆಂದು ನಿಗದಿ ಮಾಡಿದರು. ಅದರಂತೆ ಉಗ್ರರು ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಮಾಡಿದರು. ಈ ಎಲ್ಲ ವಿಚಾರಗಳನ್ನು ಉಗ್ರರು ಎನ್ಐಎ ಅಧಿಕಾರಿಗಳ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:06 am, Tue, 16 April 24

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ