AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ನೆಲೆಸಿದ್ದ ಬಂಧಿತ ಉಗ್ರರ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಾದ ಮುಸಾವೀರ್​ ಹುಸೇನ್​ ಶಾಜಿಬ್​ ಮತ್ತು ಅಬ್ದುಲ್​ ಮತೀನ್​ ತಾಹಾ ಭಯೋತ್ಪಾದಕ ಸಂಘಟನೆ ಐಸಿಸ್​ ಜೊತೆ ಸಂಪರ್ಕ ಹೊಂದಿದ್ದರು. ಇವರು ಬೆಂಗಳೂರಿನ ಸುದ್ದುಗುಂಟೆಪಾಳ್ಯದಲ್ಲಿ ವಾಸವಾಗಿದ್ದರು.

ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ನೆಲೆಸಿದ್ದ ಬಂಧಿತ ಉಗ್ರರ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗ
ಬಂಧಿತ ಉಗ್ರರು
TV9 Web
| Edited By: |

Updated on: Apr 14, 2024 | 11:04 AM

Share

ಬೆಂಗಳೂರು, ಏಪ್ರಿಲ್​ 14: ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast) ಪಕ್ರರಣದ ಪ್ರಮುಖ ಆರೋಪಿಗಳಾದ, ಐಸಿಸ್ (ISIS)​ ಜೊತೆ ನಂಟು ಹೊಂದಿರುವ ಉ್ರಗರಾದ ಮುಸಾವೀರ್​ ಹುಸೇನ್​ ಶಾಜಿಬ್​ ಮತ್ತು ಅಬ್ದುಲ್​ ಮತೀನ್​ ತಾಹಾ ಅನ್ನು ಶುಕ್ರವಾರ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಈ ಇಬ್ಬರೂ ಐಸಿಸ್​ ಜೊತೆ ನೇರ ನಂಟು ಹೊಂದಿದ್ದ ಮೆಹಬೂಬ್ ಪಾಷಾನ ಸಂರ್ಪಕದಲ್ಲಿದ್ದರು. ಮೆಹಬೂಬ್ ಪಾಷಾ 2020ರಲ್ಲಿ ಬೆಂಗಳೂರಿನ ಸುದ್ದುಗುಂಟೆಪಾಳ್ಯದ ಮನೆಯಲ್ಲಿ ವಾಸವಿದ್ದನು. ಸುದ್ದಗುಂಟೆ ಪೊಲೀಸ್​ ಠಾಣೆ ವ್ಯಾಪ್ತಿಯ ಸೂರ್ಯ ರೆಸಿಡೆನ್ಸಿಯ ಎರಡನೇ ಮಹಡಿಯ ಮನೆಯಲ್ಲಿದ್ದನು. ಈ ಹೆಸರನ್ನು ಬದಲಿಸಿಕೊಂಡು ಮನೆ ಬಾಡಿಗೆ ಪಡೆದಿದ್ದನು.

ಒಂದು ವರ್ಷಕ್ಕೂ ಹೆಚ್ಚು ಕಾಲ ಬೆಂಗಳೂರಿನಲ್ಲಿ ವಾಸವಿದ್ದ ಮೆಹಬೂಬ್ ಪಾಷಾ​ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದನು. ಸಾಮಾಜಿಕ ಕಾರ್ಯ ಮಾಡುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ “ಅಲ್ ಹಿಂದ್ ಐಸಿಸ್” ಎಂಬ ಹೆಸರಿನ NGO ಸ್ಥಾಪನೆ ಮಾಡಲು ಮುಂದಾಗಿದ್ದನು. ಈ ಎನ್​ಜಿಒ ಮೂಲಕ ಮುಸ್ಲಿಂ ಯುವಕರನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಜೋಡಿಸುತ್ತಿದ್ದನು.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟದ ಮಾಸ್ಟರ್​ ಮೈಂಡ್​​ ಮತೀನ್​ ನಿವೃತ್ತ ಯೋಧನ ಮಗ

ಈ ಸಂಬಂಧ ಮೆಹಬೂಬ್ ಪಾಷಾ ಗುರಪ್ಪನಪಾಳ್ಯದ ಮನೆಯಲ್ಲಿ ಶಂಕಿತ ಉಗ್ರರ ಜೊತೆ ಸರಣಿ ಸಭೆ ನಡೆಸುತ್ತಿದ್ದನು. ಈ ಸಭೆಯಲ್ಲಿ ಮುಸಾವಿರ್ ಹುಸೇನ್ ಮತ್ತು ಅಬ್ದುಲ್ ಮತಿನ್ ಕೂಡ ಭಾಗಿಯಾಗಿದ್ದರು. ಬಳಿಕ ಮುಸಾವಿರ್ ಹುಸೇನ್ ಮತ್ತು ಅಬ್ದುಲ್ ಮತಿನ್ ಕೂಡ ಶಿವಮೊಗ್ಗದಲ್ಲಿ “ದುವಾ” ಎಂಬ ಹೆಸರಿನ ಎನ್​ಜಿಒ ತೆರೆದಿದ್ದರು. ಸಾಮಾಜಿಕ ಸೇವೆ ಹೆಸರಿನಲ್ಲಿ ಮುಸ್ಲಿಂ ಯುವಕರನ್ನು ಸೇರಿಸಿ ಜಿಹಾದಿ ಭೋದಿಸುತ್ತಿದ್ದರು.

ಈ ಮಾಹಿತಿ ತಿಳಿದು ಮೆಹಬೂಬ್ ಪಾಷಾ ಮನೆ ಮೇಲೆ CCB ಮತ್ತು ಗುಪ್ತಚರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮೆಹಬೂಬ್ ಪಾಷಾ ಜೊತೆ ಹಲವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆದರೆ ಮುಸಾವಿರ್, ಮತೀನ್​ ಪರಾರಿಯಾಗಿ ತಲೆಮರೆಸಿಕೊಂಡಿದ್ದರು.

2021ರಲ್ಲಿ ತಲೆ ಮರೆಸಿಕೊಂಡಿದ್ದ ಮುಸಾವಿರ್, ಮತೀನ್ ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು