AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ನೆಲೆಸಿದ್ದ ಬಂಧಿತ ಉಗ್ರರ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಾದ ಮುಸಾವೀರ್​ ಹುಸೇನ್​ ಶಾಜಿಬ್​ ಮತ್ತು ಅಬ್ದುಲ್​ ಮತೀನ್​ ತಾಹಾ ಭಯೋತ್ಪಾದಕ ಸಂಘಟನೆ ಐಸಿಸ್​ ಜೊತೆ ಸಂಪರ್ಕ ಹೊಂದಿದ್ದರು. ಇವರು ಬೆಂಗಳೂರಿನ ಸುದ್ದುಗುಂಟೆಪಾಳ್ಯದಲ್ಲಿ ವಾಸವಾಗಿದ್ದರು.

ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ನೆಲೆಸಿದ್ದ ಬಂಧಿತ ಉಗ್ರರ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗ
ಬಂಧಿತ ಉಗ್ರರು
TV9 Web
| Edited By: |

Updated on: Apr 14, 2024 | 11:04 AM

Share

ಬೆಂಗಳೂರು, ಏಪ್ರಿಲ್​ 14: ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast) ಪಕ್ರರಣದ ಪ್ರಮುಖ ಆರೋಪಿಗಳಾದ, ಐಸಿಸ್ (ISIS)​ ಜೊತೆ ನಂಟು ಹೊಂದಿರುವ ಉ್ರಗರಾದ ಮುಸಾವೀರ್​ ಹುಸೇನ್​ ಶಾಜಿಬ್​ ಮತ್ತು ಅಬ್ದುಲ್​ ಮತೀನ್​ ತಾಹಾ ಅನ್ನು ಶುಕ್ರವಾರ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಈ ಇಬ್ಬರೂ ಐಸಿಸ್​ ಜೊತೆ ನೇರ ನಂಟು ಹೊಂದಿದ್ದ ಮೆಹಬೂಬ್ ಪಾಷಾನ ಸಂರ್ಪಕದಲ್ಲಿದ್ದರು. ಮೆಹಬೂಬ್ ಪಾಷಾ 2020ರಲ್ಲಿ ಬೆಂಗಳೂರಿನ ಸುದ್ದುಗುಂಟೆಪಾಳ್ಯದ ಮನೆಯಲ್ಲಿ ವಾಸವಿದ್ದನು. ಸುದ್ದಗುಂಟೆ ಪೊಲೀಸ್​ ಠಾಣೆ ವ್ಯಾಪ್ತಿಯ ಸೂರ್ಯ ರೆಸಿಡೆನ್ಸಿಯ ಎರಡನೇ ಮಹಡಿಯ ಮನೆಯಲ್ಲಿದ್ದನು. ಈ ಹೆಸರನ್ನು ಬದಲಿಸಿಕೊಂಡು ಮನೆ ಬಾಡಿಗೆ ಪಡೆದಿದ್ದನು.

ಒಂದು ವರ್ಷಕ್ಕೂ ಹೆಚ್ಚು ಕಾಲ ಬೆಂಗಳೂರಿನಲ್ಲಿ ವಾಸವಿದ್ದ ಮೆಹಬೂಬ್ ಪಾಷಾ​ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದನು. ಸಾಮಾಜಿಕ ಕಾರ್ಯ ಮಾಡುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ “ಅಲ್ ಹಿಂದ್ ಐಸಿಸ್” ಎಂಬ ಹೆಸರಿನ NGO ಸ್ಥಾಪನೆ ಮಾಡಲು ಮುಂದಾಗಿದ್ದನು. ಈ ಎನ್​ಜಿಒ ಮೂಲಕ ಮುಸ್ಲಿಂ ಯುವಕರನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಜೋಡಿಸುತ್ತಿದ್ದನು.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟದ ಮಾಸ್ಟರ್​ ಮೈಂಡ್​​ ಮತೀನ್​ ನಿವೃತ್ತ ಯೋಧನ ಮಗ

ಈ ಸಂಬಂಧ ಮೆಹಬೂಬ್ ಪಾಷಾ ಗುರಪ್ಪನಪಾಳ್ಯದ ಮನೆಯಲ್ಲಿ ಶಂಕಿತ ಉಗ್ರರ ಜೊತೆ ಸರಣಿ ಸಭೆ ನಡೆಸುತ್ತಿದ್ದನು. ಈ ಸಭೆಯಲ್ಲಿ ಮುಸಾವಿರ್ ಹುಸೇನ್ ಮತ್ತು ಅಬ್ದುಲ್ ಮತಿನ್ ಕೂಡ ಭಾಗಿಯಾಗಿದ್ದರು. ಬಳಿಕ ಮುಸಾವಿರ್ ಹುಸೇನ್ ಮತ್ತು ಅಬ್ದುಲ್ ಮತಿನ್ ಕೂಡ ಶಿವಮೊಗ್ಗದಲ್ಲಿ “ದುವಾ” ಎಂಬ ಹೆಸರಿನ ಎನ್​ಜಿಒ ತೆರೆದಿದ್ದರು. ಸಾಮಾಜಿಕ ಸೇವೆ ಹೆಸರಿನಲ್ಲಿ ಮುಸ್ಲಿಂ ಯುವಕರನ್ನು ಸೇರಿಸಿ ಜಿಹಾದಿ ಭೋದಿಸುತ್ತಿದ್ದರು.

ಈ ಮಾಹಿತಿ ತಿಳಿದು ಮೆಹಬೂಬ್ ಪಾಷಾ ಮನೆ ಮೇಲೆ CCB ಮತ್ತು ಗುಪ್ತಚರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮೆಹಬೂಬ್ ಪಾಷಾ ಜೊತೆ ಹಲವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆದರೆ ಮುಸಾವಿರ್, ಮತೀನ್​ ಪರಾರಿಯಾಗಿ ತಲೆಮರೆಸಿಕೊಂಡಿದ್ದರು.

2021ರಲ್ಲಿ ತಲೆ ಮರೆಸಿಕೊಂಡಿದ್ದ ಮುಸಾವಿರ್, ಮತೀನ್ ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ