AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟ: ಐಸಿಸ್ ತರಬೇತಿಯ ವಿವರ ಬಹಿರಂಗ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಆಘಾತಕಾರಿ ವಿಷಯಗಳು ಬಹಿರಂಗಗೊಂಡಿವೆ. ಆರೋಪಿಗಳು ಐಸಿಸ್‌ನಿಂದ ಕೇವಲ ಒಂದು ವಾರದ ಆನ್‌ಲೈನ್ ತರಬೇತಿ ಪಡೆದು ಬಾಂಬ್ ತಯಾರಿಸಿದ್ದರು ಎಂಬುದು ದೃಢಪಟ್ಟಿದೆ.

ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟ: ಐಸಿಸ್ ತರಬೇತಿಯ ವಿವರ ಬಹಿರಂಗ
ರಾಮೇಶ್ವರಂ ಕೆಫೆ, ಎನ್​ಐಎ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Nov 15, 2024 | 8:47 AM

Share

ಬೆಂಗಳೂರು, ನವೆಂಬರ್​ 15: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ (Rameshwaram Cafe Blast) ಪ್ರಕರಣದ ತನಿಖೆ ನಡೆಸಿ ರಾಷ್ಟ್ರೀಯ ತನಿಖಾ ದಳ (NIA) ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ದೋಷಾರೋಪ ಪಟ್ಟಯಿಂದ ಮತ್ತೊಂದು ಸ್ಪೋಟಕ‌ ವಿಚಾರ ಬಯಲಾಗಿದೆ. ಸ್ಪೋಟ ಪ್ರಕರಣದಲ್ಲಿ ಒಟ್ಟು ಆರು ಜನರ ಕೈವಾಡವಿದ್ದು, ಇವರು ಐಸಿಸ್​ ಜೊತೆ ನಂಟು ಹೊಂದಿದ್ದಾರೆ ಎಂದು ತಿಳಿದುಬಂದಿತ್ತು. ಇದೀಗ, ಬಾಂಬ್​ ಸ್ಪೋಟಗೊಳಿಸಲು ಯಾರಿಗೆಲ್ಲ ತರಬೇತಿ ನೀಡಲಾಗಿತ್ತು, ಎಷ್ಟು ದಿನಗಳ ಕಾಲ ತರಬೇತಿ ನೀಡಲಾಗಿತ್ತು ಎಂಬ ವಿಚಾರ ತಿಳಿದಿದೆ.

ಪ್ರಕರಣದ ಆರೋಪಿಗಳಾದ ಅಬ್ದುಲ್ ಮತೀನ್ ತಾಹ, ಮುಸಾವೀರ್ ಹುಸೇನ್, ಶಾರಿಕ್, ಅರಾಫತ್ ಅಲಿ, ಮಾಜ್ ಮುನೀರ್ ಹಾಗೂ ಮುಜಾಮಿಲ್ ಷರೀಫ್ ಐಸಿಸ್​ ಜೊತೆ ನಂಟು ಇಟ್ಟುಕೊಂಡಿದ್ದರು. ಈ ಆರು ಜನ ಉಗ್ರರ ಪೈಕಿ ನಾಲ್ವರಿಗೆ ಐಸಿಸ್ ಬಾಂಬ್ ತಯಾರಿಕೆಯ ತರಬೇತಿ ನೀಡಿದೆ. ಅಬ್ದುಲ್ ಮತೀನ್ ತಾಹ, ಮುಸಾವೀರ್, ಶಾರಿಕ್ ಹಾಗೂ‌ ಮಾಜ್ ಮುನೀರ್ ಬಾಂಬ್ ತಯಾರಿಸುವ ತರಬೇತಿ ಪಡೆದಿದ್ದಾರೆ. ಆನ್​ಲೈನ್ ಮೂಲಕ ಐಸಿಸ್​ನಿಂದ ತರಬೇತಿ ಪಡೆದಿದ್ದಾರೆ. ಕೇವಲ ಒಂದು ವಾರದಲ್ಲೇ ಸಂಪೂರ್ಣ ತರಬೇತಿ ಪಡೆದಿದ್ದಾರೆ.

ಇದನ್ನೂ ಓದಿ: ಮೆಜೆಸ್ಟಿಕ್, ಯಶವಂತಪುರದಲ್ಲಿ ಬಸ್​ ಸ್ಫೋಟಗೊಳಿಸುವಂತೆ ಟಾಸ್ಕ್

ಬಾಂಬ್​ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಆನ್​ಲೈನ್ ಮೂಲಕ ಖರೀದಿಸಿ, ಒಂದು ವಾರದಲ್ಲಿ ಬಾಂಬ್ ತಯಾರಿಸಿದ್ದರು. ಮಂಗಳೂರು ಕುಕ್ಕರ್ ಬಾಂಬ್, ಬಿಜೆಪಿ ಕಚೇರಿ ಬಳಿ ಇಟ್ಟಿದ್ದ ಬಾಂಬ್, ರಾಮೇಶ್ವರಂ ಕೆಫೆಯಲ್ಲಿ ಇಟ್ಟಿದ್ದ ಬಾಂಬ್​ಗಳನ್ನು ಕೇವಲ ಒಂದು ವಾರದಲ್ಲಿ ತಯಾರಾಸಿದ್ದರು ಎಂದು ದೋಷಾರೋಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಬಾಂಬ್​ ಎಲ್ಲಿ ಇಡಬೇಕು ಅಂತ ಫ್ಲಾನ್ ಫೈನಲ್ ಆದ ಮೇಲೆ, ಬಾಂಬ್ ತಯಾರಿಕೆಗೆ ಮುಂದಾಗುತ್ತಿದ್ದರು. ಈ ನಾಲ್ವರು ತಯಾರು ಮಾಡುವ ಬಾಂಬ್​​ಗಳಿಗೆ 90 ನಿಮಿಷಗಳ ಟ್ರೈಮರ್ ಇಡುತ್ತಿದ್ದರು. ಮಂಗಳೂರು, ಬಿಜೆಪಿ ಕಚೇರಿ ಹಾಗೂ ರಾಮೇಶ್ವರಂ ಕೆಫೆ ಈ‌ ಮೂರು ಕಡೆಗಳಲ್ಲಿ 90 ನಿಮಿಷ ಸೆಟ್ ಮಾಡಿದ್ದರು. ಆದರೆ, ಎರಡು ಕಡೆ ಇಟ್ಟಿದ್ದ ಬಾಂಬ್​ ಫೇಲ್ ಆಗಿದ್ದು, ರಾಮೇಶ್ವರಂ ಕೆಫೆ ಮಾತ್ರ ಸಕ್ಸಸ್ ಆಗಿತ್ತು. ಈ ಎಲ್ಲ ಅಂಶಗಳು ದೋಷಾರೋಪ ಪಟ್ಟಿಯಲ್ಲಿ ಎನ್ಐಎ ಉಲ್ಲೇಖ ಮಾಡಿದೆ.

ವರದಿ: ಪ್ರದೀಪ್​

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:33 am, Fri, 15 November 24

Follow Us
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ