AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟ: ಐಸಿಸ್ ತರಬೇತಿಯ ವಿವರ ಬಹಿರಂಗ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಆಘಾತಕಾರಿ ವಿಷಯಗಳು ಬಹಿರಂಗಗೊಂಡಿವೆ. ಆರೋಪಿಗಳು ಐಸಿಸ್‌ನಿಂದ ಕೇವಲ ಒಂದು ವಾರದ ಆನ್‌ಲೈನ್ ತರಬೇತಿ ಪಡೆದು ಬಾಂಬ್ ತಯಾರಿಸಿದ್ದರು ಎಂಬುದು ದೃಢಪಟ್ಟಿದೆ.

ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟ: ಐಸಿಸ್ ತರಬೇತಿಯ ವಿವರ ಬಹಿರಂಗ
ರಾಮೇಶ್ವರಂ ಕೆಫೆ, ಎನ್​ಐಎ
Follow us
ವಿವೇಕ ಬಿರಾದಾರ
|

Updated on:Nov 15, 2024 | 8:47 AM

ಬೆಂಗಳೂರು, ನವೆಂಬರ್​ 15: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ (Rameshwaram Cafe Blast) ಪ್ರಕರಣದ ತನಿಖೆ ನಡೆಸಿ ರಾಷ್ಟ್ರೀಯ ತನಿಖಾ ದಳ (NIA) ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ದೋಷಾರೋಪ ಪಟ್ಟಯಿಂದ ಮತ್ತೊಂದು ಸ್ಪೋಟಕ‌ ವಿಚಾರ ಬಯಲಾಗಿದೆ. ಸ್ಪೋಟ ಪ್ರಕರಣದಲ್ಲಿ ಒಟ್ಟು ಆರು ಜನರ ಕೈವಾಡವಿದ್ದು, ಇವರು ಐಸಿಸ್​ ಜೊತೆ ನಂಟು ಹೊಂದಿದ್ದಾರೆ ಎಂದು ತಿಳಿದುಬಂದಿತ್ತು. ಇದೀಗ, ಬಾಂಬ್​ ಸ್ಪೋಟಗೊಳಿಸಲು ಯಾರಿಗೆಲ್ಲ ತರಬೇತಿ ನೀಡಲಾಗಿತ್ತು, ಎಷ್ಟು ದಿನಗಳ ಕಾಲ ತರಬೇತಿ ನೀಡಲಾಗಿತ್ತು ಎಂಬ ವಿಚಾರ ತಿಳಿದಿದೆ.

ಪ್ರಕರಣದ ಆರೋಪಿಗಳಾದ ಅಬ್ದುಲ್ ಮತೀನ್ ತಾಹ, ಮುಸಾವೀರ್ ಹುಸೇನ್, ಶಾರಿಕ್, ಅರಾಫತ್ ಅಲಿ, ಮಾಜ್ ಮುನೀರ್ ಹಾಗೂ ಮುಜಾಮಿಲ್ ಷರೀಫ್ ಐಸಿಸ್​ ಜೊತೆ ನಂಟು ಇಟ್ಟುಕೊಂಡಿದ್ದರು. ಈ ಆರು ಜನ ಉಗ್ರರ ಪೈಕಿ ನಾಲ್ವರಿಗೆ ಐಸಿಸ್ ಬಾಂಬ್ ತಯಾರಿಕೆಯ ತರಬೇತಿ ನೀಡಿದೆ. ಅಬ್ದುಲ್ ಮತೀನ್ ತಾಹ, ಮುಸಾವೀರ್, ಶಾರಿಕ್ ಹಾಗೂ‌ ಮಾಜ್ ಮುನೀರ್ ಬಾಂಬ್ ತಯಾರಿಸುವ ತರಬೇತಿ ಪಡೆದಿದ್ದಾರೆ. ಆನ್​ಲೈನ್ ಮೂಲಕ ಐಸಿಸ್​ನಿಂದ ತರಬೇತಿ ಪಡೆದಿದ್ದಾರೆ. ಕೇವಲ ಒಂದು ವಾರದಲ್ಲೇ ಸಂಪೂರ್ಣ ತರಬೇತಿ ಪಡೆದಿದ್ದಾರೆ.

ಇದನ್ನೂ ಓದಿ: ಮೆಜೆಸ್ಟಿಕ್, ಯಶವಂತಪುರದಲ್ಲಿ ಬಸ್​ ಸ್ಫೋಟಗೊಳಿಸುವಂತೆ ಟಾಸ್ಕ್

ಬಾಂಬ್​ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಆನ್​ಲೈನ್ ಮೂಲಕ ಖರೀದಿಸಿ, ಒಂದು ವಾರದಲ್ಲಿ ಬಾಂಬ್ ತಯಾರಿಸಿದ್ದರು. ಮಂಗಳೂರು ಕುಕ್ಕರ್ ಬಾಂಬ್, ಬಿಜೆಪಿ ಕಚೇರಿ ಬಳಿ ಇಟ್ಟಿದ್ದ ಬಾಂಬ್, ರಾಮೇಶ್ವರಂ ಕೆಫೆಯಲ್ಲಿ ಇಟ್ಟಿದ್ದ ಬಾಂಬ್​ಗಳನ್ನು ಕೇವಲ ಒಂದು ವಾರದಲ್ಲಿ ತಯಾರಾಸಿದ್ದರು ಎಂದು ದೋಷಾರೋಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಬಾಂಬ್​ ಎಲ್ಲಿ ಇಡಬೇಕು ಅಂತ ಫ್ಲಾನ್ ಫೈನಲ್ ಆದ ಮೇಲೆ, ಬಾಂಬ್ ತಯಾರಿಕೆಗೆ ಮುಂದಾಗುತ್ತಿದ್ದರು. ಈ ನಾಲ್ವರು ತಯಾರು ಮಾಡುವ ಬಾಂಬ್​​ಗಳಿಗೆ 90 ನಿಮಿಷಗಳ ಟ್ರೈಮರ್ ಇಡುತ್ತಿದ್ದರು. ಮಂಗಳೂರು, ಬಿಜೆಪಿ ಕಚೇರಿ ಹಾಗೂ ರಾಮೇಶ್ವರಂ ಕೆಫೆ ಈ‌ ಮೂರು ಕಡೆಗಳಲ್ಲಿ 90 ನಿಮಿಷ ಸೆಟ್ ಮಾಡಿದ್ದರು. ಆದರೆ, ಎರಡು ಕಡೆ ಇಟ್ಟಿದ್ದ ಬಾಂಬ್​ ಫೇಲ್ ಆಗಿದ್ದು, ರಾಮೇಶ್ವರಂ ಕೆಫೆ ಮಾತ್ರ ಸಕ್ಸಸ್ ಆಗಿತ್ತು. ಈ ಎಲ್ಲ ಅಂಶಗಳು ದೋಷಾರೋಪ ಪಟ್ಟಿಯಲ್ಲಿ ಎನ್ಐಎ ಉಲ್ಲೇಖ ಮಾಡಿದೆ.

ವರದಿ: ಪ್ರದೀಪ್​

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:33 am, Fri, 15 November 24

‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ