AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಸಮುದ್ರ ಮಾರ್ಗವಾಗಿ ಶಂಕಿತರು ಪರಾರಿಯಾಗುವ ಸಾಧ್ಯತೆ, ಹೈ ಅಲರ್ಟ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರು ಪರಾರಿಯಾಗಲು ಸಮುದ್ರ ಮಾರ್ಗ ಬಳಕೆ ಸಾಧ್ಯತೆ ಹಿನ್ನೆಲೆ ಅರಬ್ಬೀ ಸಮುದ್ರದ ಆಯಕಟ್ಟಿನ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮಂಗಳೂರು ಕರಾವಳಿ ಕಾವಲು ಪಡೆಗೆ ಎನ್​ಐಎ ಸೂಚನೆಯಂತೆ ಪೊಲೀಸರಿಂದ ಪ್ರತಿ ಬೋಟ್ ಹಾಗೂ ಎಲ್ಲ ದೋಣಿಗಳ ತಪಾಸಣೆ ಮಾಡಲಾಗುತ್ತಿದೆ.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಸಮುದ್ರ ಮಾರ್ಗವಾಗಿ ಶಂಕಿತರು ಪರಾರಿಯಾಗುವ ಸಾಧ್ಯತೆ, ಹೈ ಅಲರ್ಟ್
ಪೊಲೀಸರಿಂದ ತಪಾಸಣೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Mar 09, 2024 | 2:54 PM

Share

ಮಂಗಳೂರು, ಮಾರ್ಚ್​​​ 09: ಬೆಂಗಳೂರಿನಿಂದ ಬಳ್ಳಾರಿವರೆಗೂ ನಂಟಿರುವುದು ಗೊತ್ತಾಗಿದೆ. ಕೆಫೆಯಿಂದ ಕಂಬಿವರೆಗೂ ಲಿಂಕ್‌ ಇರುವುದು ಬಯಲಾಗಿದೆ. ರಾಮೇಶ್ವರಂ ಕೆಫೆ (Rameshwaram Cafe blast) ಮೇಲಿನ ಬಾಂಬ್‌ ಪ್ರಕರಣದ ವಿಚಾರಣೆಯನ್ನ ಎನ್‌ಐಎ ಕೈಗೆತ್ತಿಕೊಳ್ತಿದ್ದಂತೆ, ಇದರ ಹಿಂದೆ ಐಸಿಸ್​​ನಂಟಿನ ಉಗ್ರರ ಇರುವ ಸುಳಿವು ಸಿಕ್ಕಿದೆ. ಇದೀಗ ಶಂಕಿತರು ಪರಾರಿಯಾಗಲು ಸಮುದ್ರ ಮಾರ್ಗ ಬಳಕೆ ಸಾಧ್ಯತೆಯಿದ್ದು, ಹೀಗಾಗಿ ಅರಬ್ಬೀ ಸಮುದ್ರದ ಆಯಕಟ್ಟಿನ ಸ್ಥಳಗಳಲ್ಲಿ ಹೈ ಅಲರ್ಟ್​ಗೆ ಮಂಗಳೂರು ಕರಾವಳಿ ಕಾವಲು ಪಡೆಗೆ NIA ಸೂಚನೆ ನೀಡಿದೆ. ಎನ್​ಐಎ ಸೂಚನೆಯಂತೆ ಪ್ರತಿ ಬೋಟ್ ಹಾಗೂ ಎಲ್ಲ ದೋಣಿಗಳನ್ನು ಪೊಲೀಸರಿಂದ ತಪಾಸಣೆ ಮಾಡಲಾಗುತ್ತಿದೆ.

ಮಾರ್ಚ್‌ 1 ರಂದು ಬಾಂಬ್ ಸ್ಫೋಟಿಸಿದ ಬಳಿಕ ಬಿಎಂಟಿಸಿ ಬಸ್‌ ಹತ್ತಿದ್ದ ಬಾಂಬರ್​, ಬಳಿಕ ಬಳ್ಳಾರಿ ಬಸ್‌ ಹತ್ತಿದ್ದ. ಬಿಎಂಟಿಸಿ ಬಸ್‌ ಹತ್ತಿರುವ ಹಾಗೂ ಬಳ್ಳಾರಿ ಬಸ್‌ ನಿಲ್ದಾಣದಲ್ಲಿ ಓಡಾಡಿರುವ ಸಿಸಿಟಿವಿ ದೃಶ್ಯವನ್ನ ಎನ್‌ಐಎ ನಿನ್ನೆ ರಿಲೀಸ್‌ ಮಾಡಿತ್ತು. ರಾತ್ರಿ 9 ಗಂಟೆಯಲ್ಲಿ ಬಳ್ಳಾರಿ ಬಸ್‌ ನಿಲ್ದಾಣದ ಪೊಲೀಸ್‌ ಚೌಕಿ ಮುಂದೆ ಬಾಂಬರ್‌ ಓಡಾಡಿದ್ದಾನೆ. ಬಳಿಕ ಆಟೋ ಹತ್ತಿ ರಾಯಲ್‌ ಸರ್ಕಲ್‌ ಮೂಲಕ ಕೌಲ್‌ಬಜಾರ್‌ಗೆ ಹೋಗಿರುವ ಶಂಕೆ ಇದ್ದು ಆಟೋ ಚಾಲಕನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಬಿಗಿ ಭದ್ರತಾ ಏರ್ಪಾಟುಗಳೊಂದಿಗೆ ಇಂದಿನಿಂದ ಪುನರಾರಂಭಗೊಂಡ ದಿ ರಾಮೇಶ್ವರಂ ಕೆಫೆ

ವಿಚಾರಣೆ ಒಂದೆಡೆಯಾದರೆ ವಾರ ಬಳಿಕ ರಾಮೇಶ್ವರಂ ಕೆಫೆ ನಿನ್ನೆ ಬಾಗಿಲು ತೆರೆದಿತ್ತು. ಶುದ್ಧೀಕಾರ್ಯ, ಪೂಜಾ ಕಾರ್ಯ ನಡೆದಿದ್ದು ಬೆಳಗ್ಗೆ 6. 30ಕ್ಕೆ ಗ್ರಾಹಕರಿಗೆ ಎಂದಿನಂತೆ ಸೇವೆ ಆರಂಭವಾಗಿದೆ. ರಾಷ್ಟ್ರಗೀತೆ ಹಾಡುವ ಮೂಲಕ ನಿನ್ನೆ ಬೆಳಗ್ಗೆ ಹೋಟೆಲ್‌ ರೀ ಓಪನ್ ಆಗಿದೆ.

ಇದನ್ನೂ ಓದಿ: ಬಾಂಬ್ ಬ್ಲಾಸ್ಟ್​​ ಬಳಿಕ ರಾಮೇಶ್ವರಂ ಕೆಫೆ ರೀಓಪನ್, ಭಾರತೀಯರ ಆತ್ಮಸ್ಥೈರ್ಯವನ್ನು ಈ ಘಟನೆ ಕುಗ್ಗಿಸಿಲ್ಲ ಎಂದ ಮಾಲೀಕರು

ಸೈಯದ್‌ ಸಮೀರ್‌ , ಮಿನಾಜ್ ಅಲಿಯಾಸ್‌ ಸುಲೇಮಾನ್‌ನ ಸಹಚರ ಆಗಿದ್ದ. ಕಳೆದ ಅಕ್ಟೋಬರ್‌ನಲ್ಲಿ ರಸಗೊಬ್ಬರ ಅಂಗಡಿಯೊಂದರಲ್ಲಿ ಒಂದು ಕೆಜಿ ಅಮೋನಿಯಂ ನೈಟ್ರೇಟ್‌ ಖರೀಸಿದ್ದರು. ಸ್ಫೋಟಕ್ಕೆ ಈ ವಸ್ತುವನ್ನ ಬಳಸಲಾಗುತ್ತೆ. ಬಳ್ಳಾರಿಯ ಕೌಲ್‌ಬಜಾರ್‌ನಲ್ಲಿರೋ ಶಾಪ್‌ನಲ್ಲೇ ಅಮೋನಿಯಂ ನೈಟ್ರೇಟ್ ಖರೀಸಿದ್ದರು. ಹೀಗಾಗಿ ಕೌಲ್‌ಬಜಾರ್‌ನಲ್ಲೇ ಬೀಡು ಬಿಟ್ಟಿರುವ NIA ಹತ್ತಾರು ಶಾಪ್‌ಗಳಲ್ಲಿ ವಿಚಾರಣೆ ಮಾಡಿದೆ. ಸಮೀರ್‌ ಹಾಗೂ ಸುಲೇಮಾನ್‌ ಹಿಸ್ಟರಿ ಭಯಾನಕವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್