AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ಅಪ್ಪನನ್ನು ಮನೆಯಿಂದ ಹೊರಹಾಕಿದ್ದ ಮಗ ಅರೆಸ್ಟ್; ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಿದ ಪೊಲೀಸರು

ವಿಡಿಯೋ ವೈರಲ್​ ಆದ ಹಿನ್ನೆಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು ಅಮಾನವೀಯ ಘಟನೆಗೆ ಕಾರಣವಾದ ಪುತ್ರ ಕುಮಾರ್​ ಎಂಬಾತನ್ನು ಬಂಧಿಸಿದ್ದಾರೆ. ತಂದೆ ತಿಮ್ಮಯ್ಯ ಅವರನ್ನು ರಾಮನಗರದ ಕೆ.ಪಿ.ದೊಡ್ಡಿ ಗ್ರಾಮದಲ್ಲಿರುವ ವೃದ್ಧಾಶ್ರಮಕ್ಕೆ ಸೇರಿಸಿದ್ದಾರೆ.

ಆಸ್ತಿಗಾಗಿ ಅಪ್ಪನನ್ನು ಮನೆಯಿಂದ ಹೊರಹಾಕಿದ್ದ ಮಗ ಅರೆಸ್ಟ್; ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಿದ ಪೊಲೀಸರು
ಆಸ್ತಿಗಾಗಿ ತಂದೆಯನ್ನೇ ಮನೆಯಿಂದ ಹೊರ ಎಸೆದ ಮಗ
TV9 Web
| Edited By: |

Updated on: Jul 08, 2021 | 10:04 PM

Share

ರಾಮನಗರ: ಆಸ್ತಿಗಾಗಿ ಅಪ್ಪನನ್ನು ಮನೆಯಿಂದ ಹೊರಹಾಕಿದ್ದ ಪುತ್ರನನ್ನು ರಾಮನಗರ ಪುರ ಠಾಣೆ ಪೊಲಿಸರು ಬಂಧಿಸಿದ್ದಾರೆ. ಕೆಎಸ್​ಆರ್​ಟಿಸಿ ಬಸ್​ ಚಾಲಕನಾಗಿದ್ದ ಕುಮಾರ್ ಎಂಬ ವ್ಯಕ್ತಿ ತನ್ನ ಹೆಸರಿಗೆ ಮನೆ ಬರೆದುಕೊಡದಿದ್ದಕ್ಕೆ ತನ್ನ ತಂದೆಯನ್ನು ಹೊರಹಾಕಿದ್ದ. ಈ ಘಟನೆಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ಅತ್ಯಂತ ಆಕ್ರೋಶ ಮೂಡಿಸಿತ್ತು. ರಾಮನಗರದ ಸಿಂಗ್ರಾಬೋವಿದೊಡ್ಡಿಯಲ್ಲಿ ನಡೆದಿದ್ದ ಘಟನೆ ವಿಡಿಯೋ ಮಾಡಲಾಗಿತ್ತು. ಅಪ್ಪನನ್ನು ಮನೆಯಿಂದ ಹೊರಹಾಕುವ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್​ ಆದ ಹಿನ್ನೆಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು ಅಮಾನವೀಯ ಘಟನೆಗೆ ಕಾರಣವಾದ ಪುತ್ರ ಕುಮಾರ್​ ಎಂಬಾತನ್ನು ಬಂಧಿಸಿದ್ದಾರೆ. ತಂದೆ ತಿಮ್ಮಯ್ಯ ಅವರನ್ನು ರಾಮನಗರದ ಕೆ.ಪಿ.ದೊಡ್ಡಿ ಗ್ರಾಮದಲ್ಲಿರುವ ವೃದ್ಧಾಶ್ರಮಕ್ಕೆ ಸೇರಿಸಿದ್ದಾರೆ.

ತಿಮ್ಮಯ್ಯರಿಗೆ ಮೂರು ಜನ ಗಂಡು ಮಕ್ಕಳು. ಇನ್ನಿಬ್ಬರು ಬೇರೆ ಬೇರೆ ಕಡೆ ವಾಸವಾಗಿದ್ದಾರೆ. ಸ್ವಯರ್ಜಿತ ಆಸ್ತಿಯಾದ ತನ್ನ ಮನೆಯಲ್ಲಿ ತಿಮ್ಮಯ್ಯ ವಾಸವಾಗಿದ್ದರು. ಮನೆಯಲ್ಲಿಯೇ ಜೊತೆಗೆ ಇದ್ದ ಕುಮಾರ್, ಮನೆಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಕಳೆದ ಹಲವು ವರ್ಷಗಳಿಂದ ಪೀಡಿಸಿದ್ದಾನೆ. ಇದಕ್ಕೆ ಒಪ್ಪದೇ ಇದ್ದಾಗ ಸಾಕಷ್ಟು ಬಾರಿ ಕಿರುಕುಳ ನೀಡಿದ್ದಾನೆ. ಈ ವಿಚಾರವಾಗಿ ಸಾಕಷ್ಟು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ರು ಯಾವುದೇ ಪ್ರಯೋಜನವಾಗಿಲ್ಲ. ಪೊಲೀಸರು ಯಾವುದೇ ಕ್ರಮವನ್ನ ತೆಗೆದುಕೊಳ್ಳದೇ ರಾಜಿ ಸಂಧಾನ ಮಾಡಿ ಕಳುಹಿಸಿದ್ದಾರೆ. ಹೀಗಾಗಿ ತಿಮ್ಮಯ್ಯ ಕಣ್ಣೀರು ಇಡುತ್ತಿದ್ದಾರೆ.  ಮಗ ನೀಡುತ್ತಿರುವ ಸಮಸ್ಯೆಯನ್ನು ತಡೆಯಲಾರದೇ ಇನ್ನೊಬ್ಬ ಮಗನ ಮನೆಗೆ ಬಂದು ಆಶ್ರಯ ಪಡೆದಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ರಾಮನಗರ ಎಸ್ ಪಿ, ಈ ಬಗ್ಗೆ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದರು.

ಇದನ್ನೂ ಓದಿ: 

Big News: ರೈತರಿಗೆ ಎಪಿಎಂಸಿ ಮೂಲಕ 1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ, 23,123 ಕೋಟಿ ತುರ್ತು ಕೊವಿಡ್​ ಫಂಡ್ ಬಿಡುಗಡೆ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

CoWin: ಕೊವಿಡ್ ಲಸಿಕೆ ಬುಕಿಂಗ್ ಪೋರ್ಟಲ್​ ಕೊವಿನ್​ನಲ್ಲಿ ಏನಿದೆ?

(Ramnagar Police arrest Man who drove Dad out of the house for the property and charged with self incriminating complaint)

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್