AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೋತ್ಸವ ರಾಜಕೀಯೇತರ, ಅದ್ದೂರಿ ಮತ್ತು ಇತಿಹಾಸದಲ್ಲಿ ದಾಖಲಾಗಬಹುದಾದ ಕಾರ್ಯಕ್ರಮವಾಗಲಿದೆ: ಇಕ್ಬಾಲ್ ಹುಸೇನ್

ರಾಮನಗರ ರಾಮನ ಪಾದಸ್ಪರ್ಶವಾಗಿರುವ ನೆಲವಾಗಿರುವುದರಿಂದ ಇಲ್ಲಿ ಒಂದು ಭವ್ಯ ಮತ್ತು ಅದ್ಭುತವಾದ ರಾಮಮಂದಿರ ನಿರ್ಮಿಸಲು ತಮ್ಮ ನಾಯಕರಾದ ಡಿಕೆ ಸುರೇಶ್ ಯೋಜನೆ ರೂಪಿಸುತ್ತಿದ್ದಾರೆ, ಅವರು ಮತ್ತು ತಾನು ಪ್ರವಾಸೋದ್ಯಮ ಸಚಿವರೊಂದಿಗೆ ವಿಷಯ ಚರ್ಚಿಸಿದ್ದು, ಬಜೆಟ್ ನಲ್ಲಿ ಅದಕ್ಕಾಗಿ ಅನುದಾನ ತೆಗೆದಿರಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುವ ಭರವಸೆ ಅವರು ನೀಡಿದ್ದಾರೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 23, 2024 | 7:09 PM

Share

ರಾಮನಗರ: ಕಳೆದ ಕೆಲವು ದಿನಗಳಿಂದ ರಾಮನಗರದಲ್ಲಿ (Ramanagara) ಅದ್ದೂರಿಯಾಗಿ, ವಿಜೃಂಭಣೆಯಿಂದ ಮತ್ತು ಭಾರೀ ಪ್ರಮಾಣದಲ್ಲಿ ರಾಮೋತ್ಸವ (Ramotsava) ಮಾಡಬೇಕೆಂಬ ಮಾತು ಕಾಂಗ್ರೆಸ್ ನಾಯಕರ ಬಾಯಲ್ಲಿ ಬರುತ್ತಿದೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ, ರಾಮನಗರದಲ್ಲಿ ರಾಮೋತ್ಸವ ಆಯೋಜಿಸುವುದು ನಿಶ್ಚಿತ, ಇದು ಸಾಮಾನ್ಯಮಟ್ಟದ ಕಾರ್ಯಕ್ರಮವಲ್ಲ, ಇತಿಹಾಸದ ಪುಟಗಳಲ್ಲಿ ದಾಖಲಾಗಬಹುದಾದ ಉತ್ಸವ ಆಗಲಿದೆ ಎಂದು ಹೇಳಿದರು. ರಾಮೋತ್ಸವ ಯಾವ ಕಾರಣಕ್ಕೂ ಒಂದು ರಾಜಕೀಯ ಕಾರ್ಯಕ್ರಮವಲ್ಲ, ಇದರ ಅಯೋಜನೆಯಲ್ಲಿ ಎಲ್ಲ ಧರ್ಮ ಮತ್ತು ಎಲ್ಲ ವರ್ಗಗಳ ಜನ ಭಾಗಿಯಾಗಲಿದ್ದಾರೆ, ಉತ್ಸವಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟವರೆಲ್ಲರ ಜೊತೆ ಚರ್ಚೆ, ವಿಚಾರ ವಿನಿಮಯ ನಡೆಯುತ್ತಿದೆ ಎಂದು ಇಕ್ಬಾಲ್ ಹುಸೇನ್ ಹೇಳಿದರು. ರಾಮನಗರ ರಾಮನ ಪಾದಸ್ಪರ್ಶವಾಗಿರುವ ನೆಲವಾಗಿರುವುದರಿಂದ ಇಲ್ಲಿ ಒಂದು ಭವ್ಯ ಮತ್ತು ಅದ್ಭುತವಾದ ರಾಮಮಂದಿರ ನಿರ್ಮಿಸಲು ತಮ್ಮ ನಾಯಕರಾದ ಡಿಕೆ ಸುರೇಶ್ ಯೋಜನೆ ರೂಪಿಸುತ್ತಿದ್ದಾರೆ, ಅವರು ಮತ್ತು ತಾನು ಪ್ರವಾಸೋದ್ಯಮ ಸಚಿವರೊಂದಿಗೆ ವಿಷಯ ಚರ್ಚಿಸಿದ್ದು, ಬಜೆಟ್ ನಲ್ಲಿ ಅದಕ್ಕಾಗಿ ಅನುದಾನ ತೆಗೆದಿರಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುವ ಭರವಸೆ ಅವರು ನೀಡಿದ್ದಾರೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?