AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೋತ್ಸವ ರಾಜಕೀಯೇತರ, ಅದ್ದೂರಿ ಮತ್ತು ಇತಿಹಾಸದಲ್ಲಿ ದಾಖಲಾಗಬಹುದಾದ ಕಾರ್ಯಕ್ರಮವಾಗಲಿದೆ: ಇಕ್ಬಾಲ್ ಹುಸೇನ್

ರಾಮನಗರ ರಾಮನ ಪಾದಸ್ಪರ್ಶವಾಗಿರುವ ನೆಲವಾಗಿರುವುದರಿಂದ ಇಲ್ಲಿ ಒಂದು ಭವ್ಯ ಮತ್ತು ಅದ್ಭುತವಾದ ರಾಮಮಂದಿರ ನಿರ್ಮಿಸಲು ತಮ್ಮ ನಾಯಕರಾದ ಡಿಕೆ ಸುರೇಶ್ ಯೋಜನೆ ರೂಪಿಸುತ್ತಿದ್ದಾರೆ, ಅವರು ಮತ್ತು ತಾನು ಪ್ರವಾಸೋದ್ಯಮ ಸಚಿವರೊಂದಿಗೆ ವಿಷಯ ಚರ್ಚಿಸಿದ್ದು, ಬಜೆಟ್ ನಲ್ಲಿ ಅದಕ್ಕಾಗಿ ಅನುದಾನ ತೆಗೆದಿರಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುವ ಭರವಸೆ ಅವರು ನೀಡಿದ್ದಾರೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 23, 2024 | 7:09 PM

Share

ರಾಮನಗರ: ಕಳೆದ ಕೆಲವು ದಿನಗಳಿಂದ ರಾಮನಗರದಲ್ಲಿ (Ramanagara) ಅದ್ದೂರಿಯಾಗಿ, ವಿಜೃಂಭಣೆಯಿಂದ ಮತ್ತು ಭಾರೀ ಪ್ರಮಾಣದಲ್ಲಿ ರಾಮೋತ್ಸವ (Ramotsava) ಮಾಡಬೇಕೆಂಬ ಮಾತು ಕಾಂಗ್ರೆಸ್ ನಾಯಕರ ಬಾಯಲ್ಲಿ ಬರುತ್ತಿದೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ, ರಾಮನಗರದಲ್ಲಿ ರಾಮೋತ್ಸವ ಆಯೋಜಿಸುವುದು ನಿಶ್ಚಿತ, ಇದು ಸಾಮಾನ್ಯಮಟ್ಟದ ಕಾರ್ಯಕ್ರಮವಲ್ಲ, ಇತಿಹಾಸದ ಪುಟಗಳಲ್ಲಿ ದಾಖಲಾಗಬಹುದಾದ ಉತ್ಸವ ಆಗಲಿದೆ ಎಂದು ಹೇಳಿದರು. ರಾಮೋತ್ಸವ ಯಾವ ಕಾರಣಕ್ಕೂ ಒಂದು ರಾಜಕೀಯ ಕಾರ್ಯಕ್ರಮವಲ್ಲ, ಇದರ ಅಯೋಜನೆಯಲ್ಲಿ ಎಲ್ಲ ಧರ್ಮ ಮತ್ತು ಎಲ್ಲ ವರ್ಗಗಳ ಜನ ಭಾಗಿಯಾಗಲಿದ್ದಾರೆ, ಉತ್ಸವಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟವರೆಲ್ಲರ ಜೊತೆ ಚರ್ಚೆ, ವಿಚಾರ ವಿನಿಮಯ ನಡೆಯುತ್ತಿದೆ ಎಂದು ಇಕ್ಬಾಲ್ ಹುಸೇನ್ ಹೇಳಿದರು. ರಾಮನಗರ ರಾಮನ ಪಾದಸ್ಪರ್ಶವಾಗಿರುವ ನೆಲವಾಗಿರುವುದರಿಂದ ಇಲ್ಲಿ ಒಂದು ಭವ್ಯ ಮತ್ತು ಅದ್ಭುತವಾದ ರಾಮಮಂದಿರ ನಿರ್ಮಿಸಲು ತಮ್ಮ ನಾಯಕರಾದ ಡಿಕೆ ಸುರೇಶ್ ಯೋಜನೆ ರೂಪಿಸುತ್ತಿದ್ದಾರೆ, ಅವರು ಮತ್ತು ತಾನು ಪ್ರವಾಸೋದ್ಯಮ ಸಚಿವರೊಂದಿಗೆ ವಿಷಯ ಚರ್ಚಿಸಿದ್ದು, ಬಜೆಟ್ ನಲ್ಲಿ ಅದಕ್ಕಾಗಿ ಅನುದಾನ ತೆಗೆದಿರಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುವ ಭರವಸೆ ಅವರು ನೀಡಿದ್ದಾರೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ