AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೋತ್ಸವ ರಾಜಕೀಯೇತರ, ಅದ್ದೂರಿ ಮತ್ತು ಇತಿಹಾಸದಲ್ಲಿ ದಾಖಲಾಗಬಹುದಾದ ಕಾರ್ಯಕ್ರಮವಾಗಲಿದೆ: ಇಕ್ಬಾಲ್ ಹುಸೇನ್

ರಾಮನಗರ ರಾಮನ ಪಾದಸ್ಪರ್ಶವಾಗಿರುವ ನೆಲವಾಗಿರುವುದರಿಂದ ಇಲ್ಲಿ ಒಂದು ಭವ್ಯ ಮತ್ತು ಅದ್ಭುತವಾದ ರಾಮಮಂದಿರ ನಿರ್ಮಿಸಲು ತಮ್ಮ ನಾಯಕರಾದ ಡಿಕೆ ಸುರೇಶ್ ಯೋಜನೆ ರೂಪಿಸುತ್ತಿದ್ದಾರೆ, ಅವರು ಮತ್ತು ತಾನು ಪ್ರವಾಸೋದ್ಯಮ ಸಚಿವರೊಂದಿಗೆ ವಿಷಯ ಚರ್ಚಿಸಿದ್ದು, ಬಜೆಟ್ ನಲ್ಲಿ ಅದಕ್ಕಾಗಿ ಅನುದಾನ ತೆಗೆದಿರಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುವ ಭರವಸೆ ಅವರು ನೀಡಿದ್ದಾರೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 23, 2024 | 7:09 PM

Share

ರಾಮನಗರ: ಕಳೆದ ಕೆಲವು ದಿನಗಳಿಂದ ರಾಮನಗರದಲ್ಲಿ (Ramanagara) ಅದ್ದೂರಿಯಾಗಿ, ವಿಜೃಂಭಣೆಯಿಂದ ಮತ್ತು ಭಾರೀ ಪ್ರಮಾಣದಲ್ಲಿ ರಾಮೋತ್ಸವ (Ramotsava) ಮಾಡಬೇಕೆಂಬ ಮಾತು ಕಾಂಗ್ರೆಸ್ ನಾಯಕರ ಬಾಯಲ್ಲಿ ಬರುತ್ತಿದೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ, ರಾಮನಗರದಲ್ಲಿ ರಾಮೋತ್ಸವ ಆಯೋಜಿಸುವುದು ನಿಶ್ಚಿತ, ಇದು ಸಾಮಾನ್ಯಮಟ್ಟದ ಕಾರ್ಯಕ್ರಮವಲ್ಲ, ಇತಿಹಾಸದ ಪುಟಗಳಲ್ಲಿ ದಾಖಲಾಗಬಹುದಾದ ಉತ್ಸವ ಆಗಲಿದೆ ಎಂದು ಹೇಳಿದರು. ರಾಮೋತ್ಸವ ಯಾವ ಕಾರಣಕ್ಕೂ ಒಂದು ರಾಜಕೀಯ ಕಾರ್ಯಕ್ರಮವಲ್ಲ, ಇದರ ಅಯೋಜನೆಯಲ್ಲಿ ಎಲ್ಲ ಧರ್ಮ ಮತ್ತು ಎಲ್ಲ ವರ್ಗಗಳ ಜನ ಭಾಗಿಯಾಗಲಿದ್ದಾರೆ, ಉತ್ಸವಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟವರೆಲ್ಲರ ಜೊತೆ ಚರ್ಚೆ, ವಿಚಾರ ವಿನಿಮಯ ನಡೆಯುತ್ತಿದೆ ಎಂದು ಇಕ್ಬಾಲ್ ಹುಸೇನ್ ಹೇಳಿದರು. ರಾಮನಗರ ರಾಮನ ಪಾದಸ್ಪರ್ಶವಾಗಿರುವ ನೆಲವಾಗಿರುವುದರಿಂದ ಇಲ್ಲಿ ಒಂದು ಭವ್ಯ ಮತ್ತು ಅದ್ಭುತವಾದ ರಾಮಮಂದಿರ ನಿರ್ಮಿಸಲು ತಮ್ಮ ನಾಯಕರಾದ ಡಿಕೆ ಸುರೇಶ್ ಯೋಜನೆ ರೂಪಿಸುತ್ತಿದ್ದಾರೆ, ಅವರು ಮತ್ತು ತಾನು ಪ್ರವಾಸೋದ್ಯಮ ಸಚಿವರೊಂದಿಗೆ ವಿಷಯ ಚರ್ಚಿಸಿದ್ದು, ಬಜೆಟ್ ನಲ್ಲಿ ಅದಕ್ಕಾಗಿ ಅನುದಾನ ತೆಗೆದಿರಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುವ ಭರವಸೆ ಅವರು ನೀಡಿದ್ದಾರೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!